Homeಸಾಹಿತ್ಯ-ಸಂಸ್ಕೃತಿಕವನನಿನ್ನ ಕೊನೆ ಹತ್ತು ಸೆಕೆಂಡುಗಳು

ನಿನ್ನ ಕೊನೆ ಹತ್ತು ಸೆಕೆಂಡುಗಳು

- Advertisement -
- Advertisement -

ಕೆಲವೊಮ್ಮೆ ಅನಿಸುತ್ತೆ
ನೀನು ಇಲ್ಲೇ ಇದ್ದೀ
ಎಂದಿನಂತೆ ನಿನ್ನ ಬಿಡುವಿಲ್ಲದ
ಕೆಲಸದಲ್ಲಿ ಮುಳುಗಿಹೋಗಿದ್ದೀ..
ಅದಕೆಂದೇ ಈ ವಾರ
ಮನೆಗೆ ಬರದೇ ಹೋದೀ..

ಆದರೆ ಮಿಕ್ಕ ಸಮಯದಲ್ಲೆ
ನಿಜ ಮುಖಕ್ಕೆ ರಾಚುತ್ತೆ
ನೀನಿನ್ನು ಬರಲ್ಲ
ಎಂದೆಂದೆಂದಿಗೂ ಬರಲ್ಲ
ಅನ್ನೋ ಕಹಿಸತ್ಯ ಅರಿವಾಗುತ್ತೆ
ಹೃದಯ ಕಂಪಿಸುತ್ತೆ
ಕಾಲುಗಳು ನಡುಗುತ್ತೆ
ಹೊಟ್ಟೆಯೊಳಗೆ ಸಂಕಟವಾಗಿ
ಒಳಗಿರೋದೆಲ್ಲಾ ಕಕ್ಕುವಂತಾಗುತ್ತೆ..
ಆದರೆ ನನ್ನಂತೆ ಅದೂ ಖಾಲಿಖಾಲಿಯಾಗಿದೆ..

ಎಚ್ಚರವಾದಾಗ ಕೊರಗುತ್ತಾ
ಮಲಗಿದ್ದಾಗ ಬೆಚ್ಚಿಬೀಳುತ್ತಾ..
ಪ್ರತಿಗಳಿಗೆಯೂ ಕಳೆದುಕೊಂಡಿದ್ದರ
ಲೆಕ್ಕ ನೀಡುತ್ತಿದೆ..
ನಿನ್ನ ಆ ಕೊನೆ ಹತ್ತು ಸೆಕೆಂಡುಗಳನ್ನು
ಊಹಿಸಿಕೊಳ್ಳುತ್ತೀನಿ
ಪೊಲೀಸರ ಪ್ರಕಾರ
ಹತ್ತೇ ಸೆಕೆಂಡುಗಳಲ್ಲಿ
ಆ ಕೊಲೆಗಡುಕರು
ನಿನ್ನ ಧ್ವನಿಯಡಗಿಸಿರಬಹುದಂತೆ..

ಹೇಗಿದ್ದಿರಬಹುದು ಆ ಹತ್ತು ಸೆಕೆಂಡುಗಳು
ಹೆಲ್ಮೆಟ್ಟಿನ ಹಿಂದೆ ಅಡಗಿದ್ದ ಆ ಕೊಲೆಗಡುಕ
ಆ ಹೇಡಿ
ನಿನ್ನ ಕಡೆ ನುಗ್ಗುತ್ತಾನೆ
ಯಾರೋ ನೀನು? ಎನ್ಮಾಡ್ತಿದೀಯೋ..ಮಗನೇ?
ಕೂಡಲೇ ಹಾರಿರಬಹುದೇ ಮೊದಲಗುಂಡು!
ಹೇ..ಯಾಕೋ? ಯಾವ ಬೇವರ್ಸಿ ಕಳಿಸಿದ್ದು ನಿನ್ನ..
ಚಡ್ಡಿ ಕಳಚಿ ಪ್ಯಾಂಟು ಹಾಕ್ಕೊಂಡ ತಕ್ಷಣ
ದೊಡ್ಡವನೆಂದು ತಿಳ್ಕೊಂಡ್ಯಾ..
ಎಷ್ಟು ಧೈರ್ಯ..ನನ್ನ ಕೊಲ್ತೀಯ
ಹತ್ತು ಸೆಕೆಂಡುಗಳು. ಮತ್ತೆ ಮೂರು ಬುಲ್ಲೆಟ್ಟುಗಳು.
ಕೊಂದೇ ಬಿಟ್ಟರಲ್ಲೇ ನಿನ್ನ..

ಆ ಕೊನೆಗಳಿಗೆಯಲ್ಲಿ ನಿನ್ನ ಕಣ್ಮುಂದೆ ಬಂದವರು ಯಾರು?
ಇಷಾ? ಅಮ್ಮ? ಅಥವಾ ನಾನೇ?
ನಿನ್ನ ಪ್ರೀತಿ, ಕಾಳಜಿ, ಕಳವಳಗಳೇ?
ಅಥವಾ ಪುಟ್ಟ ಗುಬ್ಬಿಯಂತಿದ್ದ ನಿನ್ನನ್ನು
ಮೊರೆಯುವ ಹೆಣ್ಣುಹುಲಿಯನ್ನಾಗಿಸಿದ ನಿನ್ನ ಕಾಮ್ರೇಡುಗಳೇ?

ನೀನು ತಣ್ಣಗೆ ಮಲಗಿದ್ದಿ ಅಲ್ಲಿ
ರಕ್ತದ ಮಡುವಿನಲ್ಲಿ..
ಆದರೆ ಸಾವೂ ಸುಮ್ಮನಾಗಿಸಲಿಲ್ಲ್ಲ ನಿನ್ನ
ಈಗ ಎಲ್ಲಿ ನೋಡಿದರು ಅಲ್ಲಿ ಗೌರಿಯರು
ಬೀದಿಯಲ್ಲಿ, ಗಲ್ಲಿಯಲ್ಲಿ, ದೂರದ ಡೆಲ್ಲಿಯಲ್ಲಿ..
ನಿನ್ನ ರಕ್ತದ ಕಣಕಣವೂ ಹೋರಾಟದ ಕಣ

ನನಗೀಗ ಮತ್ತಷ್ಟು ಗೊಂದಲ..
ನಿನ್ನಂತೆ
ಧ್ವನಿ ಇಲ್ಲದವರಿಗೆ ಧ್ವನಿಯಾದರೆ
ನಾನೂ ನೀನಾಗಬಲ್ಲೆನೇ?
ಸುಮ್ಮನುಳಿದರೆ
ಬದುಕಿಯೂ ಸತ್ತಂತಾಗುವೆನೇ?

ಇಂಗ್ಲೀಷ್ ಮೂಲ: ಕವಿತಾ ಲಂಕೇಶ್
ಅನು: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...