Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...