Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...