Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...