Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...