Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...