Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...