Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...