Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...