Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...