Homeನ್ಯಾಯ ಪಥನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?...ಡಿ.ಉಮಾಪತಿ

ನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?…ಡಿ.ಉಮಾಪತಿ

- Advertisement -
- Advertisement -

1960ರಲ್ಲಿ ಪ್ರಸಿದ್ಧ ಕತೆಗಾರ ಕೃಷ್ಣಚಂದರ್ ಅವರು ಬರೆದ ಹಿಂದೀ ಕತೆಯೊಂದರಲ್ಲಿ ಇಂದಿನ ಸರ್ಕಾರದ ಟೀಕೆ ಇದೆ ಎಂದು ಆಕ್ಷೇಪಿಸಿ ಆ ಕತೆಯನ್ನು ಮೊನ್ನೆ ಮೊನ್ನೆ ಹತ್ತನೆಯ ತರಗತಿಯ ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ.

ಪ್ರಸಿದ್ಧ ಹಿಂದೀ ಲೇಖಕ ಕೃಷ್ಣ ಚಂದರ್ ಅವರ ‘ಜಾಮೂನ್ ಕಾ ಪೇಡ್’ (ನೇರಳೆ ಮರ) ಎಂಬ ವಿಡಂಬನಾತ್ಮಕ ಲಘು ಕತೆಯನ್ನು ಕೇಂದ್ರ ಸರ್ಕಾರ ಐಸಿಎಸ್‍ಇ ಹತ್ತನೆಯ ತರಗತಿ ಶಾಲಾ ಪಠ್ಯದಿಂದ ತೆಗೆದುಹಾಕಿದೆ. 2015ರಲ್ಲಿ ಈ ಕತೆ ಪಠ್ಯಕ್ರಮಕ್ಕೆ ಸೇರಿತ್ತು.

ಸರ್ಕಾರೀ ಸಚಿವಾಲಯದ ಮುಂದಿನ ಹಸಿರು ಅವರಣದ ನೇರಳೆ ಮರವೊಂದು ಬಿದ್ದು ಅದರ ಅಡಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬನ ಕತೆಯಿದು. ಮುಂಜಾನೆ ಮಾಲಿಯ ಗಮನಕ್ಕೆ ಬರುವ ಈ ಸಂಗತಿ ಸರ್ಕಾರಿ ಕರ್ಮಚಾರಿಗಳು ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ. ಆದರೆ ಅವರೆಲ್ಲ ಈ ವ್ಯಕ್ತಿಯನ್ನು ಹಿಡಿದೆತ್ತಿ ಪಾರು ಮಾಡುವುದಿಲ್ಲ. ಬದಲಾಗಿ ಹೊಣೆಯನ್ನು ಮತ್ತೊಬ್ಬರಿಗೆ ಹೊರಿಸಿ ತಾವು ಪಾರಾಗುವ ವ್ಯಂಗ್ಯವಿದು.

1914-1977ರ ಅವಧಿಯಲ್ಲಿ ಜೀವಿಸಿದ್ದ ಕೃಷ್ಣ ಚಂದರ್ ಅವರು ಈ ಕತೆಯನ್ನು ಬರೆದದ್ದು 1960ರಲ್ಲಿ. ಕೆಲ ಸರ್ಕಾರಿ ಅಧಿಕಾರಿಗಳು ಈ ಕತೆಯಲ್ಲಿ ಹಾಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆಯನ್ನು ಕಂಡರಂತೆ. ಹೀಗಾಗಿ ಕತೆಗೆ ಅರ್ಧಚಂದ್ರ ಪ್ರಯೋಗ ಆಗಿದೆ. 2020 ಮತ್ತು 2021ರ ಐ.ಸಿ.ಎಸ್.ಇ. ಪರೀಕ್ಷೆಗಳಲ್ಲಿ ಈ ಕತೆಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನೋಟಿಸೊಂದರಲ್ಲಿ ತಿಳಿಯಪಡಿಸಲಾಗಿದೆ.
ಹತ್ತನೆಯ ತರಗತಿಯ ಶಾಲಾ ಮಕ್ಕಳು ಓದುವಂತಹ ಕತೆಯಲ್ಲ ಇದು ಎಂಬ ವಿವರಣೆಯನ್ನು ನೀಡಿರುವ ಐಸಿಎಸ್‍ಇ, ಯಾಕೆ ಏನು ಎಂಬ ಯಾವುದೇ ಸಮಜಾಯಿಷಿ ನೀಡಿಲ್ಲ.

ರಾತ್ರಿ ಬೀಸಿದ ಭಾರೀ ಬಿರುಗಾಳಿಯ ಕಾರಣ ಸಚಿವಾಲಯದ ಹುಲ್ಲುಹಾಸಿನ ನೇರಳೆ ಮರವೊಂದು ನೆಲಕ್ಕುರುಳುತ್ತದೆ. ಪ್ರಸಿದ್ಧ ಕವಿಯೊಬ್ಬನು ಅದರ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಮುಂಜಾನೆ ಈ ಸಂಗತಿಯನ್ನು ಗಮನಿಸುವ ಮಾಲಿ ಧಾವಿಸಿ ಹೋಗಿ ಚಪರಾಸಿಗೆ ತಿಳಿಸುತ್ತಾನೆ. ಚಪರಾಸಿ ಗುಮಾಸ್ತನ ಬಳಿ ತೆರಳುತ್ತಾನೆ. ಗುಮಾಸ್ತ ಸೂಪರಿಂಟಿಂಡೆಂಟ್ ಬಳಿಗೆ ಧಾವಿಸುತ್ತಾನೆ. ತುಸು ಹೊತ್ತಿನ ನಂತರ ಮರದ ಕೆಳಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ಸುತ್ತಮುತ್ತ ಗುಂಪು ಜಮಾಯಿಸುತ್ತದೆ. ಮರ ಬಿಡುತ್ತಿದ್ದ ರಸಭರಿತ ನೇರಳೆ ಹಣ್ಣಿನ ಚರ್ಚೆ ನಡೆಯುತ್ತದೆ. ಇನ್ನಷ್ಟು ಮಾಲಿಗಳು, ಚಪರಾಸಿಗಳು ಹಾಗೂ ಗುಮಾಸ್ತರೆಲ್ಲ ಕೈ ಹಾಕಿದರೆ ಮರದಡಿಯ ವ್ಯಕ್ತಿಯನ್ನು ಹೊರಗೆಳೆಯಬಹುದು ಎನ್ನುತ್ತಾನೆ ಮಾಲಿ. ಮಾಲಿ ಹೇಳುವುದು ಸರಿಯೆಂದು ಬಹಳಷ್ಟು ಮಂದಿ ಮರವನ್ನು ಸರಿಸಲು ಮುಂದಾಗುತ್ತಾರೆ. ನಿಲ್ಲಿ, ನಾನು ಅಂಡರ್ ಸೆಕ್ರೆಟರಿ ಅವರನ್ನು ಕೇಳಬೇಕು ಎನ್ನುತ್ತಾನೆ ಸೂಪರಿಂಟಿಂಡೆಂಟ್. ಅಂಡರ್ ಸೆಕ್ರೆಟರಿಯು ಡೆಪ್ಯೂಟಿ ಸೆಕ್ರೆಟರಿ ಬಳಿ ಹೋಗುತ್ತಾನೆ. ಡೆಪ್ಯೂಟಿ ಸೆಕ್ರೆಟರಿ ಜಾಯಿಂಟ್ ಸೆಕ್ರೆಟರಿ ಮುಂದೆ ಹಾಜರಾಗುತ್ತಾನೆ. ಜಾಯಿಂಟ್ ಸೆಕ್ರೆಟರಿಯು ಚೀಫ್ ಸೆಕ್ರೆಟರಿ ಬಳಿಗೆ ತೆರಳುತ್ತಾನೆ. ಚೀಫ್ ಸೆಕ್ರೆಟರಿಯು ಜಾಯಿಂಟ್ ಸೆಕ್ರೆಟರಿಗೆ ಏನೋ ಹೇಳುತ್ತಾನೆ. ಜಾಯಿಂಟ್ ಸೆಕ್ರೆಟರಿ ಡೆಪ್ಯೂಟಿ ಸೆಕ್ರೆಟರಿಗೆ, ಡೆಪ್ಯೂಟಿಯು ಅಂಡರ್ ಸೆಕ್ರೆಟರಿಗೆ ಅದನ್ನು ಹೇಳುತ್ತಾನೆ. ಕಡತ ಕಾಲ್ಚೆಂಡಾಗುತ್ತದೆ. ಅರ್ಧ ದಿನ ಕಳೆದೇ ಹೋಗಿರುತ್ತದೆ. ಊಟದ ವಿರಾಮ. ಮರದ ಬಳಿ ಸೇರಿದ ಗುಂಪು ಪುನಃ ವ್ಯಕ್ತಿಯನ್ನು ಪಾರು ಮಾಡಲು ತಾನೇ ಮುಂದಾಗುತ್ತದೆ. ಅಷ್ಟರಲ್ಲಿ ಸೂಪರಿಂಟಿಂಡೆಂಟ್ ಕಡತ ಹಿಡಿದು ಓಡಿಬರುತ್ತಾನೆ. ಈ ಮರವನ್ನು ನಾವಾಗಿಯೇ ಸರಿಸುವಂತಿಲ್ಲ. ನಾವು ವಾಣಿಜ್ಯ ಇಲಾಖೆಯವರು. ಮರ ಕೃಷಿ ಇಲಾಖೆಯಡಿ ಬರುತ್ತದೆ. ಕಡತದ ಮೇಲೆ ತುರ್ತು ಎಂದು ಬರೆದು ಕೃಷಿ ಇಲಾಖೆಗೆ ಕಳಿಸುತ್ತೇನೆ. ಅಲ್ಲಿಂದ ಜವಾಬು ಬರುತ್ತಲೇ ಮರವನ್ನು ಸರಿಸೋಣ ಎಂದು ಜನರನ್ನು ತಡೆಯುತ್ತಾನೆ. ಮರವನ್ನು ಸರಿಸುವ ಜವಾಬ್ದಾರಿ ನಿಮ್ಮದೇ ಎಂದು ವಾಣಿಜ್ಯ ಮತ್ತು ಕೃಷಿ ಇಲಾಖೆ ಪರಸ್ಪರ ದೂಷಿಸುತ್ತವೆ.

ಮರುದಿನವೂ ಕಡತ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ, ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ಸುತ್ತಾಡುತ್ತಲೇ ಇರುತ್ತದೆ. ಹಣ್ಣು ಬಿಡುವ ಮರವಾದ ಕಾರಣ ತೋಟಗಾರಿಕೆ ಇಲಾಖೆಗೆ ಹೊತ್ತು ಹಾಕುವ ಹೊತ್ತಿಗೆ ಸಂಜೆಯಾಗಿರುತ್ತದೆ. ಜನ ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಮರವನ್ನು ಕತ್ತರಿಸುವ ಪರಿಸ್ಥಿತಿಯನ್ನು ತಡೆಯಲು ಸುತ್ತ ಪೆÇಲೀಸ್ ಕಾವಲು ಹಾಕಲಾಗಿರುತ್ತದೆ. ಮರದಡಿ ಸಿಕ್ಕಿ ಹಾಕಿಕೊಂಡ ವ್ಯಕ್ತಿಯ ಕುರಿತು ದಯೆ ತೋರುವ ಪೆÇಲೀಸ್ ಪೇದೆಯೊಬ್ಬ, ಆತನಿಗೆ ಉಣ್ಣಿಸಲು ಮಾಲಿಗೆ ಅನುಮತಿ ನೀಡುತ್ತಾನೆ. ನಿಮ್ಮ ಕಡತ ಸಂಚರಿಸುತ್ತಿದೆ. ನಾಳೆ ತೀರ್ಮಾನ ಆಗುವ ವಿಶ್ವಾಸ ಇದೆ ಎಂದು ಮಾಲಿ ಮರದಡಿಯ ವ್ಯಕ್ತಿಗೆ ತಿಳಿಸುತ್ತಾನೆ. ಮೂರನೆಯ ದಿನ ತೋಟಗಾರಿಕೆ ಇಲಾಖೆಯಿಂದ ಕಡತ ವಾಪಸು ಬರುತ್ತದೆ. ಫಲ ಬಿಡುವ ಮರವನ್ನು ಕಡಿಯಲಾಗದು ಎಂದಿರುತ್ತದೆ.

ಆದರೆ ವ್ಯಕ್ತಿಯನ್ನು ಪಾರು ಮಾಡಲು ಯಾರೂ ಮುಂದಾಗುವುದಿಲ್ಲ. ಅತ್ತ ಇತ್ತ ಜಗ್ಗಾಡುವ ಈ ಸಂಗತಿ ನಾಲ್ಕು ದಿನಗಳ ನಂತರ ಮುಖ್ಯಕಾರ್ಯದರ್ಶಿಯವರ ಮೇಜನ್ನು ತಲುಪುತ್ತದೆ. ಆ ನಂತರವೂ ಜವಾಬ್ದಾರಿಯನ್ನು ಒಂದು ಸರ್ಕಾರಿ ಇಲಾಖೆಯು ಮತ್ತೊಂದು ಸರ್ಕಾರಿ ಇಲಾಖೆಗೆ ದಾಟಿಸಿ ಕೈ ತೊಳೆದುಕೊಳ್ಳುವ ಪ್ರಯತ್ನಗಳು ನಡೆದಿರುತ್ತವೆ. ಕೃಷಿವನ ಇಲಾಖೆಯಿಂದ ಸಂಸ್ಕೃತಿ ಇಲಾಖೆಗೆ ತಲುಪುತ್ತದೆ. ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿ ಒಬ್ಬ ಪ್ರಸಿದ್ಧ ಕವಿಯಾಗಿದ್ದ ಕಾರಣ ವಿಷಯ ಸಂಸ್ಕೃತಿ ಇಲಾಖೆಗೆ ರವಾನೆಯಾಗಿರುತ್ತದೆ.

ಸಂಸ್ಕೃತಿ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡುತ್ತಾನೆ. ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿರುವ ಪ್ರಸಿದ್ಧ ಕವಿಗೆ ಪ್ರಶಸ್ತಿ ಗಳಿಸಿಕೊಟ್ಟಿದ್ದ ಪುಸ್ತಕವನ್ನು ಹೊಗಳುತ್ತಾನೆ. ಮತ್ತು ಕವಿಯನ್ನು ಪಾರು ಮಾಡುವುದು ತನ್ನ ಕೆಲಸ ಅಲ್ಲವೆಂದು ಖುದ್ದು ಕವಿಗೇ ಹೇಳುತ್ತಾನೆ. ಆ ನಂತರ ಕವಿ ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ಕಡತ ಆರೋಗ್ಯ ಇಲಾಖೆಯನ್ನು ತಲುಪುತ್ತದೆ. ಈ ಇಲಾಖೆ ಕಡತವನ್ನು ವಿದೇಶ ಮಂತ್ರಾಲಯಕ್ಕೆ ಸಾಗ ಹಾಕುತ್ತದೆ. ಈ ನೇರಳೆ ಮರವನ್ನು ನೆರೆಯ ದೇಶದ ಪ್ರಧಾನಮಂತ್ರಿ ಇಲ್ಲಿಗೆ ಬಂದಾಗ ನೆಟ್ಟಿದ್ದೇ ಅದಕ್ಕೆ ಕಾರಣ.

ಈ ಮರವನ್ನು ಕತ್ತರಿಸಲು ವಿದೇಶೀ ಮಂತ್ರಾಲಯ ಒಪ್ಪುವುದಿಲ್ಲ. ನೆರೆಯ ದೇಶದ ಪ್ರಧಾನಿ ನೆಟ್ಟಿದ್ದ ಈ ಮರವನ್ನು ಕಡಿದರೆ ಉಭಯ ದೇಶಗಳ ನಡುವಣ ಸೌಹಾರ್ದ ಸಂಬಂಧ ಕೆಟ್ಟು ಹೋಗಬಹುದು ಎನ್ನುತ್ತದೆ. ಕಡೆಗೆ ಈ ವಿಷಯ ಪ್ರಧಾನಮಂತ್ರಿಯವರ ಸನ್ನಿಧಾನಕ್ಕೆ ಬರುತ್ತದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮರವನ್ನು ಕತ್ತರಿಸಲು ಒಪ್ಪಿಗೆ ನೀಡುತ್ತಾರೆ. ಈ ಆದೇಶದ ಕಡತವನ್ನು ಖುದ್ದು ಸೂಪರಿಂಟಿಂಡೆಂಟ್ ನೇರಳೆ ಮರದಡಿ ಸಿಕ್ಕಿ ಹಾಕಿಕೊಂಡಿದ್ದ ಕವಿಯ ಬಳಿಗೆ ಬರುತ್ತಾನೆ. ನೋಡಪ್ಪಾ, ಪ್ರಧಾನಿ ಎಲ್ಲ ಅಂತಾರಾಷ್ಟ್ರೀಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಮರ ಕತ್ತರಿಸಲು ಅನುಮತಿ ಕೊಟ್ಟಿದ್ದಾರೆ, ನಾಳೆ ಈ ಮರವನ್ನು ಕತ್ತರಿಸಿ ನಿನ್ನನ್ನು ಬಚಾವು ಮಾಡಲಾಗುವುದು ಎಂದು ಕೂಗಿ ಹೇಳುತ್ತಾನೆ. ಬಳಿ ಬಂದು ಅವನ ಭುಜ ಅಲುಗಿಸಿ ಮತ್ತೆ ಹೇಳುತ್ತಾನೆ. ಆದರೆ ಕವಿಯ ಕೈ ತಣ್ಣಗಾಗಿರುತ್ತದೆ. ಕಣ್ಣು ಗುಡ್ಡೆಗಳ ಬೆಳಕು ಆರಿರುತ್ತದೆ. ಇರುವೆಗಳ ದೊಡ್ಡ ಸಾಲೊಂದು ಆತನ ಬಾಯಿಯೊಳಕ್ಕೆ ಹೊಗುತ್ತಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...