Homeಮುಖಪುಟನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

- Advertisement -
- Advertisement -

ನೋಟು ರದ್ದತಿ ಮಾಡಲು ಹೊರಟಾಗ ಅದರಿಂದ ಕಪ್ಪುಹಣ ಹಿಡಿಯುತ್ತೇವೆಂದು ಹೇಳಿದ್ದರು. 3 ರಿಂದ 4 ಲಕ್ಷ ಕೋಟಿ ಕಪ್ಪುಹಣ ಬ್ಯಾಂಕ್‌ಗಳಿಗೆ ವಾಪಸ್ ಬರಲ್ಲ, ಅದೇ ದೊಡ್ಡ ಸಾಧನೆಯೆಂದು. ಶೇ.99.99ರಷ್ಟು ಹಣ ವಾಪಸ್ ಬಂದಿತು. ಏನೂ ಪ್ರಯೋಜನವಾಗಲಿಲ್ಲ. ಬದಲಿಗೆ ಸರ್ಕಾರವು ಹೊಸ ನೋಟು ಮುದ್ರಿಸಲು ಸಾವಿರಾರು ಕೋಟಿ ರೂ. ವೆಚ್ಚ ಮಾಡಬೇಕಾಯಿತು.

ಖೋಟಾ ನೋಟು ಹಿಡಿಯುತ್ತೇವೆಂದು ಹೇಳಿದ್ದರು. ಅದಕ್ಕಾಗಿ ಇಂತಹ ದೊಡ್ಡ ಸರ್ಕಸ್ ಬೇಕಿಲ್ಲವೆಂದು ತಜ್ಞರು ಹೇಳಿದ್ದರು. ಕೆಲವೇ ದಿನಗಳಲ್ಲಿ ಹೊಸ 2000 ರೂ. ಖೋಟಾ ನೋಟೂ ಪತ್ತೆಯಾಯಿತು.

ಭಯೋತ್ಪಾದನೆ ತಡೆಯುತ್ತೇವೆಂದಿದ್ದರು. ಈ ದೇಶದ ದುರಂತವೆಂದರೆ, ಯಾವ ಪಕ್ಷವೂ ಭಯೋತ್ಪಾದನೆ ನಿರ್ಮೂಲನೆಗೆ ಬೇಕಾದ ಸಮಗ್ರ ಕ್ರಮ ತೆಗೆದುಕೊಳ್ಳುತ್ತಿಲ್ಲ. ನೋಟು ರದ್ದತಿಯ ನಂತರ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದವೆಂದು ಅಂಕಿ-ಅಂಶ ಹೇಳುತ್ತಿವೆ.

ಇರಲಿ, ಅವೆಲ್ಲಾ ವಿವರಗಳಿಗೆ ಇಲ್ಲಿ ಹೋಗಲ್ಲ.

ನೋಟು ರದ್ದತಿಯಿಂದಾಗುವ ಅನುಕೂಲವೆಂದು ಕಡೆಯಲ್ಲಿ ಹೇಳಿದ ಸುಳ್ಳು ಯಾವುದು ಗೊತ್ತೇ? ಡಿಸೆಂಬರ್ ಹೊತ್ತಿಗೆ ಮಿಕ್ಕವೆಲ್ಲಾ ಸುಳ್ಳು ಎಂದು ಬಯಲಾದ ನಂತರ ಹೊಸೆದ ಹೊಸ ಕಾರಣ ಅದು. ನವೆಂಬರ್ 8ರಂದು ಪ್ರಸ್ತಾಪಿಸಿಯೇ ಇರದಿದ್ದ ಕ್ಯಾಷ್‌ಲೆಸ್/ನಗದು ರಹಿತ ವಹಿವಾಟು ಹೆಚ್ಚಿಸುವುದು. ಹಾಗಾಗಿ ಇನ್ನು ಮುಂದೆ ನೋಟುಗಳ ಚಲಾವಣೆ ಬಹಳ ಕಡಿಮೆ ಇರುತ್ತದೆಂದು ಬಿಜೆಪಿ ಮತ್ತದರ ಪ್ರಚಾರಕರು ಹೇಳುತ್ತಾ ಹೋದರು.

ಇದೀಗ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ವಿವರವಾಗಿ ಬರೆದಿರುವಂತೆ, ವಾಸ್ತವದಲ್ಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ. ಅಂದರೆ ಆರ್‌ಬಿಐ ನೋಟು ಮುದ್ರಣವನ್ನು ಹೆಚ್ಚಿಸಬೇಕಾಗಿ ಬಂದಿದೆ. 2016 ನವೆಂಬರ್ 4ರಂದು (ಅಂದರೆ ನೋಟು ರದ್ದತಿಗೆ ನಾಲ್ಕು ದಿನ ಮುಂಚೆ ಆರ್‌ಬಿಐ ಬಿಡುಗಡೆ ಮಾಡಿದಂತೆ) ದೇಶದಲ್ಲಿ 17.97 ಲಕ್ಷ ಕೋಟಿಗಳಷ್ಟು ನೋಟು ಚಲಾವಣೆ ಇತ್ತು. ಮಾರ್ಚ್ 15, 2015ರ ಹೊತ್ತಿಗೆ ಭಾರತದ ಆರ್ಥಿಕತೆಯಲ್ಲಿ 21.41 ಲಕ್ಷ ಕೋಟಿಗಳಷ್ಟು ನೋಟುಗಳ ಚಲಾವಣೆ ಆಗುತ್ತಿದೆ. ಇದು ಸ್ವತಃ ಆರ್‌ಬಿಐ ಬಿಡುಗಡೆ ಮಾಡಿದ ಅಂಕಿ-ಅಂಶ ಆಗಿದೆ. ಅಂದರೆ ಶೇ.19ರಷ್ಟು ಹೆಚ್ಚಳ!

ನೋಟು ರದ್ದತಿಯಾದ ತಕ್ಷಣ ಸುಳ್ಳು ಪ್ರಚಾರಕರು ಬ್ಲ್ಯಾಕ್ ಅಂಡ್ ವೈಟ್ ಕಾರ್ಯಕ್ರಮ ಮಾಡಲು ಹೊರಟಿದ್ದರು. ಅದು ಫೇಕ್ ಎಂದು ಸಾಬೀತಾದ ನಂತರ ಕ್ಯಾಷ್‌ಲೆಸ್ ದುನಿಯಾ ಅಂತಹ ಸುಳ್ಳು ಹರಡಲು ಹೊರಟರು. ಈಗ ಕ್ಯಾಷ್‌ಫುಲ್ ಆಗಿದೆ. ಸಾಮಾನ್ಯ ಜನರು ಮಾತ್ರ ಕ್ಯಾಷ್‌ಲೆಸ್ ಆಗಿದ್ದಾರೆ.

ನೋಟು ರದ್ದತಿಯಂತಹ ಒಂದು ಅಪಕ್ವವಾದ, ದುರುದ್ದೇಶಪೂರ್ವಕವಾದ ಕ್ರಮದಿಂದ ಆದ ನಷ್ಟ ಅಗಾಧವಾದದ್ದು. ಅದರಿಂದ ಒಂದೇ ಒಂದು ಲಾಭವೂ ಆಗಲಿಲ್ಲ; ಬದಲಿಗೆ ಜನರಲ್ಲಿ ಹುಟ್ಟಿಸಿದ ಹೆದರಿಕೆಯಿಂದ ಜನರು ಹೆಚ್ಚೆಚ್ಚು ಕ್ಯಾಷ್ ಇಟ್ಟುಕೊಳ್ಳಲು ಆರಂಭಿಸಿರುವುದಷ್ಟೇ ಇದಕ್ಕೆ ಕಾರಣವಲ್ಲ. ಕ್ಯಾಷ್‌ಲೆಸ್ ಮಾಡಲು ಬೇಕಾದ ನಿಧಾನಗತಿಯ ಪ್ರೋತ್ಸಾಹಕರ ಕ್ರಮಗಳ ಮೂಲಕ ಬದಲಾವಣೆ ತರದೇ, ಕೆಟ್ಟ ಆಪರೇಷನ್ ಮಾಡಿದರು. ಕ್ಯಾಷ್‌ಲೆಸ್ ಆಗಲು ಪ್ರೋತ್ಸಾಹ ಕೊಡುವ ಬದಲು, ಜನರು ಕ್ಯಾಷ್‌ಲೆಸ್ ವಹಿವಾಟು ಮಾಡಿದರೆ, ಕಮೀಷನ್ ಕಟ್ ಆಗಲು ಶುರುವಾಯಿತು.

ಹಾಗಾಗಿ ಸುಳ್ಳು ಪ್ರಚಾರಕರು ಭಾಷಣಗಳ ಮುಖಾಂತರ ಮತ್ತು ವಾಟ್ಸಾಪ್ ಫಾರ್ವರ್ಡ್‌ಗಳ ಮೂಲಕ ಜನರನ್ನು ದಿಕ್ಕುತಪ್ಪಿಸಲು ಹೊಸ ಹೊಸ ಸುಳ್ಳುಗಳನ್ನು ಹೆಣೆಯಯುತ್ತಾ ಸಾಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗೆ ನೋಡಿ:

https://indianexpress.com/article/business/economy/cash-in-circulation-jumps-19-1-from-pre-demonetisation-level-5637325/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...