Homeಮುಖಪುಟನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

- Advertisement -
- Advertisement -

ನೋಟು ರದ್ದತಿ ಮಾಡಲು ಹೊರಟಾಗ ಅದರಿಂದ ಕಪ್ಪುಹಣ ಹಿಡಿಯುತ್ತೇವೆಂದು ಹೇಳಿದ್ದರು. 3 ರಿಂದ 4 ಲಕ್ಷ ಕೋಟಿ ಕಪ್ಪುಹಣ ಬ್ಯಾಂಕ್‌ಗಳಿಗೆ ವಾಪಸ್ ಬರಲ್ಲ, ಅದೇ ದೊಡ್ಡ ಸಾಧನೆಯೆಂದು. ಶೇ.99.99ರಷ್ಟು ಹಣ ವಾಪಸ್ ಬಂದಿತು. ಏನೂ ಪ್ರಯೋಜನವಾಗಲಿಲ್ಲ. ಬದಲಿಗೆ ಸರ್ಕಾರವು ಹೊಸ ನೋಟು ಮುದ್ರಿಸಲು ಸಾವಿರಾರು ಕೋಟಿ ರೂ. ವೆಚ್ಚ ಮಾಡಬೇಕಾಯಿತು.

ಖೋಟಾ ನೋಟು ಹಿಡಿಯುತ್ತೇವೆಂದು ಹೇಳಿದ್ದರು. ಅದಕ್ಕಾಗಿ ಇಂತಹ ದೊಡ್ಡ ಸರ್ಕಸ್ ಬೇಕಿಲ್ಲವೆಂದು ತಜ್ಞರು ಹೇಳಿದ್ದರು. ಕೆಲವೇ ದಿನಗಳಲ್ಲಿ ಹೊಸ 2000 ರೂ. ಖೋಟಾ ನೋಟೂ ಪತ್ತೆಯಾಯಿತು.

ಭಯೋತ್ಪಾದನೆ ತಡೆಯುತ್ತೇವೆಂದಿದ್ದರು. ಈ ದೇಶದ ದುರಂತವೆಂದರೆ, ಯಾವ ಪಕ್ಷವೂ ಭಯೋತ್ಪಾದನೆ ನಿರ್ಮೂಲನೆಗೆ ಬೇಕಾದ ಸಮಗ್ರ ಕ್ರಮ ತೆಗೆದುಕೊಳ್ಳುತ್ತಿಲ್ಲ. ನೋಟು ರದ್ದತಿಯ ನಂತರ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದವೆಂದು ಅಂಕಿ-ಅಂಶ ಹೇಳುತ್ತಿವೆ.

ಇರಲಿ, ಅವೆಲ್ಲಾ ವಿವರಗಳಿಗೆ ಇಲ್ಲಿ ಹೋಗಲ್ಲ.

ನೋಟು ರದ್ದತಿಯಿಂದಾಗುವ ಅನುಕೂಲವೆಂದು ಕಡೆಯಲ್ಲಿ ಹೇಳಿದ ಸುಳ್ಳು ಯಾವುದು ಗೊತ್ತೇ? ಡಿಸೆಂಬರ್ ಹೊತ್ತಿಗೆ ಮಿಕ್ಕವೆಲ್ಲಾ ಸುಳ್ಳು ಎಂದು ಬಯಲಾದ ನಂತರ ಹೊಸೆದ ಹೊಸ ಕಾರಣ ಅದು. ನವೆಂಬರ್ 8ರಂದು ಪ್ರಸ್ತಾಪಿಸಿಯೇ ಇರದಿದ್ದ ಕ್ಯಾಷ್‌ಲೆಸ್/ನಗದು ರಹಿತ ವಹಿವಾಟು ಹೆಚ್ಚಿಸುವುದು. ಹಾಗಾಗಿ ಇನ್ನು ಮುಂದೆ ನೋಟುಗಳ ಚಲಾವಣೆ ಬಹಳ ಕಡಿಮೆ ಇರುತ್ತದೆಂದು ಬಿಜೆಪಿ ಮತ್ತದರ ಪ್ರಚಾರಕರು ಹೇಳುತ್ತಾ ಹೋದರು.

ಇದೀಗ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ವಿವರವಾಗಿ ಬರೆದಿರುವಂತೆ, ವಾಸ್ತವದಲ್ಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ. ಅಂದರೆ ಆರ್‌ಬಿಐ ನೋಟು ಮುದ್ರಣವನ್ನು ಹೆಚ್ಚಿಸಬೇಕಾಗಿ ಬಂದಿದೆ. 2016 ನವೆಂಬರ್ 4ರಂದು (ಅಂದರೆ ನೋಟು ರದ್ದತಿಗೆ ನಾಲ್ಕು ದಿನ ಮುಂಚೆ ಆರ್‌ಬಿಐ ಬಿಡುಗಡೆ ಮಾಡಿದಂತೆ) ದೇಶದಲ್ಲಿ 17.97 ಲಕ್ಷ ಕೋಟಿಗಳಷ್ಟು ನೋಟು ಚಲಾವಣೆ ಇತ್ತು. ಮಾರ್ಚ್ 15, 2015ರ ಹೊತ್ತಿಗೆ ಭಾರತದ ಆರ್ಥಿಕತೆಯಲ್ಲಿ 21.41 ಲಕ್ಷ ಕೋಟಿಗಳಷ್ಟು ನೋಟುಗಳ ಚಲಾವಣೆ ಆಗುತ್ತಿದೆ. ಇದು ಸ್ವತಃ ಆರ್‌ಬಿಐ ಬಿಡುಗಡೆ ಮಾಡಿದ ಅಂಕಿ-ಅಂಶ ಆಗಿದೆ. ಅಂದರೆ ಶೇ.19ರಷ್ಟು ಹೆಚ್ಚಳ!

ನೋಟು ರದ್ದತಿಯಾದ ತಕ್ಷಣ ಸುಳ್ಳು ಪ್ರಚಾರಕರು ಬ್ಲ್ಯಾಕ್ ಅಂಡ್ ವೈಟ್ ಕಾರ್ಯಕ್ರಮ ಮಾಡಲು ಹೊರಟಿದ್ದರು. ಅದು ಫೇಕ್ ಎಂದು ಸಾಬೀತಾದ ನಂತರ ಕ್ಯಾಷ್‌ಲೆಸ್ ದುನಿಯಾ ಅಂತಹ ಸುಳ್ಳು ಹರಡಲು ಹೊರಟರು. ಈಗ ಕ್ಯಾಷ್‌ಫುಲ್ ಆಗಿದೆ. ಸಾಮಾನ್ಯ ಜನರು ಮಾತ್ರ ಕ್ಯಾಷ್‌ಲೆಸ್ ಆಗಿದ್ದಾರೆ.

ನೋಟು ರದ್ದತಿಯಂತಹ ಒಂದು ಅಪಕ್ವವಾದ, ದುರುದ್ದೇಶಪೂರ್ವಕವಾದ ಕ್ರಮದಿಂದ ಆದ ನಷ್ಟ ಅಗಾಧವಾದದ್ದು. ಅದರಿಂದ ಒಂದೇ ಒಂದು ಲಾಭವೂ ಆಗಲಿಲ್ಲ; ಬದಲಿಗೆ ಜನರಲ್ಲಿ ಹುಟ್ಟಿಸಿದ ಹೆದರಿಕೆಯಿಂದ ಜನರು ಹೆಚ್ಚೆಚ್ಚು ಕ್ಯಾಷ್ ಇಟ್ಟುಕೊಳ್ಳಲು ಆರಂಭಿಸಿರುವುದಷ್ಟೇ ಇದಕ್ಕೆ ಕಾರಣವಲ್ಲ. ಕ್ಯಾಷ್‌ಲೆಸ್ ಮಾಡಲು ಬೇಕಾದ ನಿಧಾನಗತಿಯ ಪ್ರೋತ್ಸಾಹಕರ ಕ್ರಮಗಳ ಮೂಲಕ ಬದಲಾವಣೆ ತರದೇ, ಕೆಟ್ಟ ಆಪರೇಷನ್ ಮಾಡಿದರು. ಕ್ಯಾಷ್‌ಲೆಸ್ ಆಗಲು ಪ್ರೋತ್ಸಾಹ ಕೊಡುವ ಬದಲು, ಜನರು ಕ್ಯಾಷ್‌ಲೆಸ್ ವಹಿವಾಟು ಮಾಡಿದರೆ, ಕಮೀಷನ್ ಕಟ್ ಆಗಲು ಶುರುವಾಯಿತು.

ಹಾಗಾಗಿ ಸುಳ್ಳು ಪ್ರಚಾರಕರು ಭಾಷಣಗಳ ಮುಖಾಂತರ ಮತ್ತು ವಾಟ್ಸಾಪ್ ಫಾರ್ವರ್ಡ್‌ಗಳ ಮೂಲಕ ಜನರನ್ನು ದಿಕ್ಕುತಪ್ಪಿಸಲು ಹೊಸ ಹೊಸ ಸುಳ್ಳುಗಳನ್ನು ಹೆಣೆಯಯುತ್ತಾ ಸಾಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗೆ ನೋಡಿ:

https://indianexpress.com/article/business/economy/cash-in-circulation-jumps-19-1-from-pre-demonetisation-level-5637325/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....