Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...