Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...