Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...