Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...