Homeಅಂಕಣಗಳುಪಂಚರಾಜ್ಯ ಚುನಾವಣಾ ಫಲಿತಾಂಶಗಳ ಸಂದೇಶ

ಪಂಚರಾಜ್ಯ ಚುನಾವಣಾ ಫಲಿತಾಂಶಗಳ ಸಂದೇಶ

- Advertisement -
- Advertisement -

ಪಂಡಿತರ ಮಾತುಗಳಲ್ಲಿ ಅರ್ಧದಷ್ಟನ್ನಾದರೂ ಮತದಾರರು ಸುಳ್ಳಾಗಿಸಿದ್ದಾರೆ. ಮತದಾರರು ನೀಡಿರುವ ತೀರ್ಪಿನಲ್ಲಿ ಹಲವು ಪಾಠಗಳಿವೆ. ಅದನ್ನು ಗಮನಿಸಬೇಕು. ಮತದಾರರೂ ಸುಳ್ಳುಗಳಿಗೆ ಬಲಿಯಾಗುವ ಎಲ್ಲಾ ಸಾಧ್ಯತೆಗಳಿರುವಾಗ ಅವರನ್ನು ಎಚ್ಚರಿಸುವ ಕರ್ತವ್ಯ ವಿದ್ವಾಂಸರಿಗಿರುವುದಿಲ್ಲವೆಂದಲ್ಲ. ಆದರೆ, ಸಮಷ್ಟಿಯಾಗಿ ಜನರು ನೀಡುವ ತೀರ್ಪುಗಳಿಗೆ ಹೆಚ್ಚಿನ ಮಹತ್ವವಿರುತ್ತದೆ. ಅಂತಹ ಹಲವು ಸಂಗತಿಗಳನ್ನು ಈ ಚುನಾವಣೆಯು ಮುಂದಿಟ್ಟಿದೆ.
ತೆಲಂಗಾಣದಲ್ಲಿ ಟಿಆರ್‍ಎಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿರಲಿಲ್ಲ. ಆದರೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಕೆಸಿಆರ್ ವಿನೂತನವಾಗಿ ಜಾರಿಗೊಳಿಸಿದ್ದರು. ಅದಕ್ಕೆದುರಾಗಿ ಕಾಂಗ್ರೆಸ್‍ಗೆ ಸರಿಯಾದ ನಾಯಕತ್ವವೂ ಇರಲಿಲ್ಲ; ಸರಿಯಾದ ಕಾರ್ಯಕ್ರಮವೂ ಇರಲಿಲ್ಲ; ಅಖಿಲ ಭಾರತ ಮಟ್ಟಕ್ಕೆ ಸೂಕ್ತವಾಗಬಹುದಾದ ಮಹಾಘಟಬಂಧನವು, ತೆಲಂಗಾಣಕ್ಕೆ ಪ್ರಜಾಕೂಟಮಿಯಾಗಿ ಒದಗಿ ಬರಲಿಲ್ಲ.
ಇಂತಹ ತೆಲಂಗಾಣದಲ್ಲಿ ಮೊದಲು ಟಿಆರ್‍ಎಸ್ ಗೆಲುವು ಶತಸ್ಸಿದ್ಧ ಎಂದು ಮಾಧ್ಯಮಗಳು ನುಡಿದಿದ್ದವು. ಚಂದ್ರಬಾಬು ನಾಯ್ಡು ಕಾಂಗ್ರೆಸ್ ಜೊತೆ ಸೇರಿದಾಗ ಟಿಆರ್‍ಎಸ್ ಅಧಿಕಾರಕ್ಕೆ ಬರುವುದಿಲ್ಲವೆಂಬ ಸಮೀಕ್ಷೆಗಳು ಬಂದವು. ಈಗ ನೋಡಿದರೆ ಟಿಡಿಪಿಯ ಜೊತೆಗೆ ಹೋಗಿದ್ದರಿಂದಲೇ ಟಿಆರ್‍ಎಸ್ ಇನ್ನೂ ಹೆಚ್ಚು ಸೀಟುಗಳನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ತೆಲಂಗಾಣ ಸಂಸದೆ ಕೆಸಿಆರ್ ಮಗಳು ಕವಿತಾ ಹೇಳಿದಂತೆ, ‘ಅಲೆ ಮೊದಲಿಂದಲೂ ಟಿಆರ್‍ಎಸ್ ಪರವಾಗಿಯೇ ಇತ್ತು. ಚಂದ್ರಬಾಬು ಮಾಧ್ಯಮಗಳನ್ನು ಮ್ಯಾನೇಜ್ ಮಾಡುವುದರಿಂದ ಅಥವಾ ಮಾಧ್ಯಮಗಳು ಬಯಸುವ ಸಿಇಓ ಅವರಾಗಿದ್ದರಿಂದ ತಪ್ಪಾಗಿ ವ್ಯಾಖ್ಯಾನಿಸಲಾಯಿತು’. ಮಾಧ್ಯಮಗಳು ತಮ್ಮ ಪೂರ್ವಗ್ರಹಕ್ಕೆ ತಕ್ಕಂತೆ ಭಾರೀ ದೊಡ್ಡ ಸುಳ್ಳುಗಳನ್ನು ನಂಬಿಕೊಂಡು ಹೇಳುವ ಸಾಧ್ಯತೆಗಳಿವೆ.
ರಾಜಸ್ತಾನದ ಒನ್ ಟು ಒನ್ ಫೈಟ್‍ನಲ್ಲಿ ಕಾಂಗ್ರೆಸ್ ಭಾರೀ ದೊಡ್ಡ ಗೆಲುವನ್ನು ಪಡೆಯುತ್ತದೆಂಬ ಭವಿಷ್ಯವು ಮೊದಲಿಂದ ಮತಗಟ್ಟೆ ಸಮೀಕ್ಷೆಯವರೆಗೆ ಬರುತ್ತಿತ್ತು. ಜನರಿಗೆ ಬಿಜೆಪಿಯ ಬಗೆಗಿದ್ದ ಸಿಟ್ಟು ಸ್ಪಷ್ಟವಾಗಿ ವ್ಯಕ್ತವಾಗಿದೆ; ಆದರೆ ಕಾಂಗ್ರೆಸ್ ಅವರ ಸ್ಪಷ್ಟ ಆಯ್ಕೆಯಾಗಿಲ್ಲವೆಂಬುದು ಅದರ ತಿಣುಕಾಟದ ಗೆಲುವಿನಲ್ಲೂ, ಇತರ ಸಣ್ಣಪುಟ್ಟ ಪಕ್ಷಗಳು ಮತ್ತು ಪಕ್ಷೇತರರ ಗೆಲುವಿನಲ್ಲೂ ಗೊತ್ತಾಗುತ್ತಿದೆ. ಅಂದರೆ ಹೊಸ ಭರವಸೆ ಇರದೇ ಇದ್ದಲ್ಲಿ, ಒಮ್ಮೆ ಅವರು, ಇನ್ನೊಮ್ಮೆ ಇವರು ಎಂಬುದು ಸಹಜ ಸತ್ಯವಲ್ಲ ಎಂಬುದೇ ಇದರ ಸಾರಾಂಶ.
ಕಾಂಗ್ರೆಸ್‍ನ ತಿಣುಕಾಟಕ್ಕೆ ಟಿಕೆಟ್ ಹಂಚಿಕೆಯಲ್ಲಿನ ಸಮಸ್ಯೆಯೇ ಕಾರಣವೆಂದೂ, ಸ್ಥಳೀಯವಾಗಿ ದೊಡ್ಡ ಜಾತಿಯ ನಾಯಕನನ್ನು ಪ್ರೊಜೆಕ್ಟ್ ಮಾಡದೇ ಇದ್ದುದೇ ಸಮಸ್ಯೆಯೆಂದು ಹೇಳುತ್ತಿರುವುದೂ ವಾಸ್ತವವಲ್ಲ. ಹಾಗೆ ನೋಡಿದರೆ, ಭಾರೀ ಗೆಲುವನ್ನು ಪಡೆದಿರುವ ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಯಾರನ್ನೂ ಪ್ರೊಜೆಕ್ಟ್ ಮಾಡಿರಲಿಲ್ಲ. ಅದರ ಹಿರಿಯ ನಾಯಕ ಅಜಿತ್ ಜೋಗಿ ಪ್ರತ್ಯೇಕ ಪಕ್ಷ ಸ್ಥಾಪಿಸಿ ಬಹಳ ಕಾಲವಾಗಿತ್ತು.ಹಾಗೆಯೇ ಛತ್ತೀಸ್‍ಗಢದಲ್ಲಿ ರಮಣ್‍ಸಿಂಗ್ ಗೆಲ್ಲುತ್ತಾರೆ ಎಂಬುದನ್ನು ಬಹುತೇಕರು ಬಿಂಬಿಸುತ್ತಿದ್ದರು. ಕಾಂಗ್ರೆಸ್‍ಗಿದ್ದ ಅನಾನುಕೂಲತೆಗಳ ನಡುವೆಯೂ ಇದಕ್ಕೇನು ಕಾರಣ ಎಂಬುದನ್ನು ಸರಿಯಾಗಿ ವಿಶ್ಲೇಷಿಸುವ ಅಗತ್ಯವಿದೆ. ತಾನು ಇದ್ದುದರಲ್ಲಿ ಸೇಫ್ ಆದ ಭವಿಷ್ಯ ನುಡಿಯಬೇಕೆಂದು ಕರ್ನಾಟಕದ ಸಂದೀಪ್ ಶಾಸ್ತ್ರಿಯವರು ತನ್ನ ಲೇಖನದಲ್ಲಿ ಹಿಂದಿ ರಾಜ್ಯಗಳ ಚುನಾವಣೆಯ ಫಲಿತಾಂಶ 2:1 ಆಗಿರುತ್ತದೆ ಅಂದಿದ್ದರು. ಅದೂ ಸುಳ್ಳಾಯಿತು.ಅದೇನೇ ಇರಲಿ, ಇದು ಮೋದಿ ಮಾದರಿಯ ರಾಜಕಾರಣದ ವಿರುದ್ಧದ ಸ್ಪಷ್ಟ ಸಂದೇಶವಾಗಿದೆ. ರಾಹುಲ್‍ಗಾಂಧಿ ಭರವಸೆ ಮೂಡಿಸಿದ್ದಾರಾದರೂ ಅವರಿಗೆ ಈ ಚುನಾವಣೆಯು ಹಲವು ಎಚ್ಚರಿಕೆಗಳನ್ನು ನೀಡಿದೆ. ರಾಜಸ್ತಾನವು ಒಂದು ಎಚ್ಚರಿಕೆಯಾಗಿದ್ದರೆ, ಮಿಜೋರಾಂ ಇನ್ನೊಂದು ಎಚ್ಚರಿಕೆಯಾಗಿದೆ. ದೇಶವು ಕಾಂಗ್ರೆಸ್ ಮುಕ್ತವಾಗಿರದಿದ್ದರೂ ಈಶಾನ್ಯ ಭಾರತವು ಕಾಂಗ್ರೆಸ್ ಮುಕ್ತವಾಗಿದೆ. ಬಹುತೇಕ ಬುಡಕಟ್ಟು ಜನರು, ಕ್ರಿಶ್ಚಿಯನ್ನರು ಇರುವ ಈ ಪ್ರದೇಶದಲ್ಲಿ ಕಾಂಗ್ರೆಸ್ ‘ಸಹಜ ಆಯ್ಕೆ’ಯಲ್ಲ ಎಂಬುದು ಗಮನಾರ್ಹ. ಆ ಭಾಗದಲ್ಲಿ ಮುಂಚಿನಿಂದಲೂ ಹಲವು ಬಗೆಯ ‘ವಿಚ್ಛಿದ್ರತೆ’ಗೆ ಸ್ವತಃ ಕಾಂಗ್ರೆಸ್ಸೇ ಕಾರಣವಾಗಿತ್ತು. ಈಗದು ಅವಕಾಶವಾದಿತನಕ್ಕೆ ಕಾರಣವಾಗಿದ್ದು, ಅದರ ನೇರ ಹೊಣೆಯನ್ನು ಕಾಂಗ್ರೆಸ್ಸೇ ಹೊರಬೇಕು.
ಇದರೊಂದಿಗೆ ಇನ್ನೊಂದು ಅಂಶ, ದಕ್ಷಿಣ ಭಾರತವು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಮುಕ್ತವಾಗಿದೆ. ಕರ್ನಾಟಕದಲ್ಲಿ ಇವೆರಡೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿ ಎರಡೂ ದೊಡ್ಡ ಪಕ್ಷಗಳು ಎಂದು ಹೇಳಿಕೊಳ್ಳಬಹುದು ಮತ್ತು ಕೇರಳದಲ್ಲಿ ಪ್ರತಿ ಎರಡು ಚುನಾವಣೆಯಲ್ಲಿ ಒಂದು ಸಾರಿ ಗೆಲ್ಲುತ್ತೇನೆಂದು ಭಾವಿಸಬಹುದಾದರೂ ಈ ಸದ್ಯ ಎರಡೂ ಪಕ್ಷಗಳಿಗೆ ದಕ್ಷಿಣ ಭಾರತದಲ್ಲಿ ಮುಖ್ಯಮಂತ್ರಿಗಳಿಲ್ಲ. ಅಂದರೆ, ತಾವು ಅಖಿಲ ಭಾರತ ಪಕ್ಷ ಎಂದು ಹೆಚ್ಚು ಕೊಚ್ಚಿಕೊಳ್ಳುವಂತಿಲ್ಲ.
ಕಾಂಗ್ರೆಸ್ ಮತ್ತು ಬಿಜೆಪಿಗಳಾಚೆ ಇರುವ ಬಹುತೇಕ ಪ್ರಾದೇಶಿಕ ಪಕ್ಷಗಳಲ್ಲಿ ಇರುವ ಸಮಾನ ಅಂಶವೆಂದರೆ ಅವೆಲ್ಲವೂ ವ್ಯಕ್ತಿ ಅಥವಾ ಕುಟುಂಬವೊಂದರ ಕಪಿಮುಷ್ಟಿಯಲ್ಲಿರುವ ಪಕ್ಷಗಳು. ತೆಲಂಗಾಣದಲ್ಲಿ ಗೆದ್ದಿರುವ ಟಿಆರ್‍ಎಸ್ ಸೇರಿದಂತೆ. ಇದನ್ನು ದಾಟಿ ನಿಜಕ್ಕೂ ಫೆಡರಲ್ ಆದ ಪರ್ಯಾಯ ಶಕ್ತಿಗೆ ದೇಶದಲ್ಲಿ ಅವಕಾಶ ಈಗಲೂ ಉಳಿದುಕೊಂಡಿದೆ.
ಅಂತಿಮವಾಗಿ, ಪ್ರಗತಿಪರ ಆಲೋಚನೆಯುಳ್ಳವರಿಗೆ ಈ ಫಲಿತಾಂಶವು ನೆಮ್ಮದಿ ತಂದಿರಬಹುದು. ಇದರೊಂದಿಗೆ 2014-16ಕ್ಕೆ ಹೋಲಿಸಿದರೆ ಬಿಜೆಪಿ ದುರ್ಬಲವೂ ಆಗಬಹುದು. ಆದರೆ, 2009ರ ಚುನಾವಣೆಯವರೆಗೆ ಒಂದು ರೀತಿಯ ಮತಗಳಿಕೆಯ ಸ್ಥಗಿತತೆ ಮತ್ತು ಕೆಲವು ಜಾತಿಕೋಟೆಗಳನ್ನು ದಾಟಲಾಗಿರದ ಬಿಜೆಪಿಯು 2014ರ ನಂತರ ಅವೆಲ್ಲವನ್ನೂ ದಾಟಿತು ಮತ್ತು ದೇಶದ ಮೂಲೆಮೂಲೆಗಳಲ್ಲೂ ಬಲ ಪಡೆದುಕೊಂಡಿತು. ಬಿಜೆಪಿ ಮಾತ್ರವಲ್ಲದೇ, ಆರೆಸ್ಸೆಸ್‍ನ ಮತೀಯ ರಾಜಕಾರಣ ಹಾಗೂ ಸುಳ್ಳಿನ ಬಲ ಹೆಚ್ಚಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.
ಇಂತಹ ಪ್ರಜಾತಂತ್ರ ವಿರೋಧಿ ವಿದ್ಯಮಾನಗಳನ್ನು ಸೋಲಿಸಿ, ನಿಜವಾದ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಲು ಭಿನ್ನ ಹೊಸದಾರಿಯನ್ನು ತುಳಿಯುವುದು ಪ್ರಜ್ಞಾವಂತರ ಕರ್ತವ್ಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....