Homeಅಂಕಣಗಳುಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

ಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

- Advertisement -
- Advertisement -

ಮೂಢನಂಬಿಕೆಗಳೆಂದರೆ ಸಿಡಿಯುತ್ತಿದ್ದ ‘ಮುಂಗಾರು’ ಪತ್ರಿಕೆ ಬಿಟ್ಟ ಮೇಲೆ ನಾನು ಕೆಲವು ಸಂಜೆ ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದೆ. ಇವೆಲ್ಲವೂ ದಿನ ಭವಿಷ್ಯ ಪ್ರಕಟಿಸುತ್ತಿದ್ದವು. ಆದರೆ, ಲೇವಡಿಯ ಹೊರತು ನಾವೇನೂ ಮಾಡುವಂತಿರಲಿಲ್ಲ!
ಈ ಭವಿಷ್ಯಗಳು ಹಿಂದೆ ಹವಾಮಾನ ಇಲಾಖೆಯ ಭವಿಷ್ಯಗಳಂತೆ ಇರುತ್ತಿದ್ದವು- ‘ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ’. ಒಂದೆರಡು ಹಳ್ಳಿಗಳಲ್ಲಿ ನಾಲ್ಕು ಹನಿ ಬಿದ್ದರೂ ಭವಿಷ್ಯ ನಿಜವಾಗುತ್ತದೆ!
ಮನೆಯಲ್ಲಿ ಮನಸ್ತಾಪ, ಹೆಂಡತಿ ಜೊತೆ ಜಗಳ, ಹಣದ ಮುಗ್ಗಟ್ಟು, ಸಹೋದ್ಯೋಗಿಗಳಿಂದ ಕಿರುಕುಳ, ಮೇಲಧಿಕಾರಿಗಳಿಂದ ದಬ್ಬಾಳಿಕೆ, ಸಾಲಗಾರರಿಂದ ತೊಂದರೆ ಇತ್ಯಾದಿಗಳೂ, ಲಾಟರಿಯಲ್ಲಿ ಅದೃಷ್ಟ, ಮಕ್ಕಳಿಂದ ಮನಸ್ಸಿಗೆ ಉಲ್ಲಾಸ, ಸದ್ಯವೇ ಭಡ್ತಿ ಯೋಗ ಇತ್ಯಾದಿಗಳೂ ಇರುತ್ತಿದ್ದವು! ನಾವು ತಮಾಷೆಗೆ ಮಿತ್ರನಿಂದ ಪುತ್ರಭಾಗ್ಯ ಇತ್ಯಾದಿಯಾಗಿ ಲೇವಡಿಯನ್ನೂ ಮಾಡುತ್ತಿದ್ದೆವು. ಇವೆಲ್ಲಾ ಪ್ರತಿಯೊಬ್ಬರ ಜೀವನದಲ್ಲಿ ಸಾಮಾನ್ಯವಾಗಿರುವುದರಿಂದ ಓದುಗರಿಗೆ ಹೇಗೋ ಒಂದೊಂದು ರೀತಿಯಲ್ಲಿ ಹೊಂದಾಣಿಕೆಯಾಗುತ್ತಿದ್ದವು.
ಒಂದು ಪತ್ರಿಕೆಯಲ್ಲಿ ಒಬ್ಬರು ಜ್ಯೋತಿಷಿ ವಾರಕ್ಕೊಮ್ಮೆ ಬಂದು ಇಡೀ ವಾರದ ಭವಿಷ್ಯ ಬರೆದು ತಂದುಕೊಟ್ಟು ಹೋಗುತ್ತಿದ್ದರು! ಸುಮ್ಮನೇ ಹೋಗುತ್ತಿರಲಿಲ್ಲ- ಜ್ಯೋತಿಷ್ಯದ ಬಗ್ಗೆ ಕೊರೆದೇ ಹೋಗುತ್ತಿದ್ದರು! ಇದರಿಂದ ಈ ಮಹಾನ್ ಬುರುಡೆ ಶಾಸ್ತ್ರದ ನನ್ನ ಜ್ಞಾನ ಅಪಾರ ಅಭಿವೃದ್ಧಿಯಾಯಿತು!
ಒಂದು ಸಲ ಅವರು ಬರಬೇಕಾದ ದಿನ ಬರಲಿಲ್ಲ. ಏನು ಮಾಡುವುದು ಎಂದು ಉಪಸಂಪಾದಕನಿಗೆ ತಲೆಬಿಸಿ! ‘ತಲೆಬಿಸಿ ಎಂತಕ್ಕೆ? ಹಿಂದಿನದ್ದೇ ಒಂದು ಹಾಕು!’ ಎಂದೆ ನಾನು. ಇದು ಓದುಗರಿಗೆ ಮೋಸ ಎಂದು ನನಗೆ ಅನಿಸಲಿಲ್ಲ! ಮೊದಲೇ ಸುಳ್ಳು! ಆ ಸುಳ್ಳಿನಲ್ಲಿ ಮತ್ತೆ ಮೋಸ ಎಂತದ್ದು!? ಅವರು ಮರುದಿನವೂ ಬರಲಿಲ್ಲ! ಈ ಪರಿಪಾಠ ಮುಂದುವರಿಯಿತು. ಕೆಲವು ದಿನಗಳ ನಂತರ ಅತಂಕದಿಂದಲೇ ಬಂದರು- ಬರೆಯುವ ಅವಕಾಶ ತಪ್ಪಿ ಹೋಯಿತೆ ಎಂದು. ಯಾಕೆಂದರೆ, ಪತ್ರಿಕೆಯಲ್ಲಿ ಪ್ರತೀದಿನ ಹೆಸರು ಪ್ರಕಟವಾಗುತ್ತಿದ್ದುದರಿಂದ ಅವರಿಗೆ ಉಚಿತ ಜಾಹೀರಾತು! ಇದರಿಂದ ಕುರಿಗಳ- ಕ್ಷಮಿಸಿ, ಗಿರಾಕಿಗಳ ಸಂಖ್ಯೆ ಹೆಚ್ಚುತ್ತಿತ್ತು!.
ಬಂದವರೇ, ”ನನಗೆ ಹುಷಾರಿರಲಿಲ್ಲ ಮಾರಾಯ್ರೆ! ಮಲೇರಿಯಾ! ನನ್ನ ಬದಲು ಭವಿಷ್ಯ ಯಾರು ಬರೆಯುತ್ತಿದ್ದುದು?” ಎಂದು ಕೇಳಿದರು. ಪಾಪ! ಎಲ್ಲರ ಸಮಸ್ಯೆಗಳನ್ನು ಮುಂಚಿತವಾಗಿ ಹೇಳುವ ಅವರಿಗೆ ತನಗೆ ಮಲೇರಿಯಾ ಬರಲಿದೆ ಎಂದು ಗೊತ್ತಿರಲಿಲ್ಲ! ಗೊತ್ತಿದ್ದರೆ ಮುಂಚಿತವಾಗಿ ಒಂದು ತಿಂಗಳದ್ದು ಬರೆದುಕೊಟ್ಟು ಹೋಗುತ್ತಿರಲಿಲ್ಲವೆ!?
ನಮ್ಮ ಸಂಪಾದಕರು ಸ್ವತಃ ಈ ಜ್ಯೋತಿಷ್ಯದ ಹುಚ್ಚನಾಗಿದ್ದರೂ ಮಹಾ ಕಿಡಿಗೇಡಿ!- (ಈಗ ಅವರಿಲ್ಲ!; ಅವರ ಆತ್ಮಕ್ಕೆ ಶಾಂತಿ ಸಿಗಲಿ!) ಯಾರೋ ಪ್ರಸಿದ್ಧ ಜ್ಯೋತಿಷಿಯ ಹೆಸರು ಹೇಳಿ ಬುರುಡೆಬಿಟ್ಟರು!
“ಹೋ! ಹೌದೆ? ನೋಡುವಾಗಲೇ ಅಂದಾಜಾಯಿತು- ಯಾರೋ ದೊಡ್ಡಜನ ಬರೆದದ್ದು ಅಂತ! ಸರೀಯಾಗಿತ್ತು!” ಎಂದು ಒತ್ತಿಹೇಳಿ, ಮುಂದಿನ ವಾರದ ಭವಿಷ್ಯ ಕೊಟ್ಟು ಹೋದರು. ಒಂದು ವೇಳೆ ಸಂಪಾದಕರು ಯಾವುದೋ ಕಾಂಜಿಪೀಂಜಿ ಹೆಸರು ಹೇಳಿರುತ್ತಿದ್ದರೆ, “ಛೇ! ಏನೇನೂ ಸರಿಯಿರಲಿಲ್ಲ!! ಮೂರನೇ ಮನೆಯಲ್ಲಿ ಕುಜ ಇರುವಾಗ….” ಎಂದೆಲ್ಲಾ ಕೊರೆಯುತ್ತಿದ್ದರು.
ನಂತರ ನಾನು ಸೇರಿದ ಸಂಜೆ ಪತ್ರಿಕೆ ಮಾಲಕರು ಪಕ್ಕಾ ವ್ಯಾಪಾರಿ. ಪತ್ರಿಕೆ ಅರಂಭವಾಗುವ ಮೊದಲೇ ಸೇರಿದ್ದ ನಾನು ಭವಿಷ್ಯ ಬೇಡವೆಂದರೂ ಕೇಳಲಿಲ್ಲ! ‘ಹೇ! ನಿಮಗೆ ಗೊತ್ತಿಲ್ಲ! ಅದಕ್ಕೇ ಓದುಗರಿದ್ದಾರೆ. ಭವಿಷ್ಯ ಬೇಕೇಬೇಕು. ದಿನ ಭವಿಷ್ಯದ ಜೊತೆಗೆ ವಾರಭವಿಷ್ಯವೂ ಬೇಕು’ ಎಂದರು. ಸರಿ ಡೆಸ್ಕಿನಲ್ಲೇ ಒಂದಷ್ಟು ಭವಿಷ್ಯ ಬರೆಯಲಾಯಿತು! ಅದನ್ನು ಡಿಟಿಪಿಯವರ ಕೈಗೆ ಒಪ್ಪಿಸಲಾಯಿತು! ಅವರೇ ಲಾಟರಿ ತೆಗೆದಂತೆ ತಿರುಗಿಸಿ ತಿರುಗಿಸಿ, ಒಂದೊಂದು ರಾಶಿಗೆ ಒಂದೊಂದು ಹಾಕುತ್ತಿದ್ದರು! ಇದರಲ್ಲಿ ಮೋಸವೇನೂ ಇಲ್ಲ! ಭವಿಷ್ಯ ಎಂದರೆ ‘ಅದೃಷ್ಟದ ಆಟ’ವಲ್ಲವೆ!!? ಗಿಣಿಶಾಸ್ತ್ರದಂತೆ ಗಿಣಿಯ ಬದಲು ಮನುಷ್ಯರು ಚೀಟಿ ಹೆಕ್ಕಿದಂತೆ ಆಯಿತಷ್ಟೇ!
ಇದನ್ನು ಓದಿದ ಮೇಲೆ, ನೀವೂ ನಿಮ್ಮ ಪತ್ರಿಕೆಗಳಲ್ಲಿ ಬರುವ ದಿನಭವಿಷ್ಯ ತಪ್ಪದೇ ಓದಿ ಮಾರ್ಗದರ್ಶನ ಪಡೆಯಿರಿ!
ಇದನ್ನು ಬರೆಯಲು ಕಾರಣವೆಂದರೆ, ಈ ರೀತಿ ಮಾಡದ ಪತ್ರಿಕೆಗಳೇ ಕಡಿಮೆ ಎಂದು ಹಳೆಯ ಪತ್ರಕರ್ತರನ್ನು ಕೇಳಿದರೆ ಸಾಕ್ಷಿ ಹೇಳುತ್ತಾರೆ. ನಾವು ಹಿಂದೆ ಮಾಡಿದ್ದು, ಮಹಾ ಅನೈತಿಕ ಅನಿಸಿದರೂ ಮಹಾ ಮೋಸವೆಂದು ನನಗನಿಸಿಲ್ಲ! ಇದರಿಂದ ನಮಗೇನೂ ಲಾಭವಿರಲಿಲ್ಲ! ಆದರೀಗ ಮಹಾಮೋಸಗಾರರ ಕದೀಮ ದಂಡೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವಕ್ಕರಿಸಿ ವಿಜ್ಞಾನದ ಕಪಾಳಕ್ಕೆ ಹೊಡೆಯುವಂತಹ ಸಂಶೋಧನೆಗಳನ್ನು ಯಾವುದೇ ನಾಚಿಕೆ ಅಥವಾ ಹಿಂಜರಿಕೆ ಇಲ್ಲದೇ ಬೊಗಳುತ್ತವೆ.
ಮೂಢನಂಬಿಕೆಗಳನ್ನು ನಿವಾರಿಸಬೇಕಾದ ಮಾಧ್ಯಮಗಳೇ ಅವುಗಳಿಗೆ ಪ್ರೋತ್ಸಾಹ ನೀಡಿ ಧನಲಾಭ ಮಾಡಿಕೊಳ್ಳುತ್ತಿವೆ. ಪತ್ರಿಕೆಗಳಲ್ಲಿ ಕೇವಲ ದಿನ, ವಾರ ಭವಿಷ್ಯಗಳೇ ಅಲ್ಲದೆ, ಮಹಾನ್ ಸಂಶೋಧನಾ ಲೇಖನಗಳೂ ಬರುತ್ತಿವೆ! ಪ್ರಳಯವಾಗುತ್ತದೆ ಎಂದು ಸಾವಿರಾರು ಜನರನ್ನು ಹೆದರಿಸಿದ ದಂಡಪಿಂಡ ಇಂದಿಗೂ ತನ್ನ ಬ್ರಹ್ಮಾಂಡ ಹೊಟ್ಟೆಯನ್ನು ಹೊತ್ತುಕೊಂಡು ಒದರುತ್ತಾ ಹೊಟ್ಟೆಹೊರೆದುಕೊಳ್ಳುತ್ತಿದ್ದಾನೆ!
ಕೇವಲ ಉದಾಹರಣೆಗಾಗಿ ಕೆಲವು ಪ್ರಸಿದ್ಧ ಪತ್ರಿಕೆಗಳಲ್ಲಿ ಬಂದ ಲೇಖನಗಳಿಂದಲೇ ನಾನು ಪಡೆದುಕೊಂಡ ಜ್ಞಾನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.
“ಕೆಲವರಿಗೆ ಎಷ್ಟು ಹುಡುಕಾಡಿದರೂ ಸರಿಯಾದ ಸಂಗಾತಿ ಸಿಗದೆ ಇರುವುದರಿಂದ ಮದುವೆ ವಿಳಂಬವಾಗಿರುತ್ತದೆ. ಇದಕ್ಕೆ ಜ್ಯೋತಿಷ್ಯದ ಪ್ರಕಾರ ಪಿತೃದೋಷ ಅಥವಾ ಸರ್ಪದೋಷವೆಂದು ಕರೆಯಲಾಗುತ್ತದೆ. ಆದರೆ ಈ ದೋಷಗಳನ್ನು ನಿವಾರಣೆ ಮಾಡಲು ಆಧ್ಯಾತ್ಮಿಕ ಪರಿಹಾರಗಳು ಇವೆ! ಇದನ್ನು ಪಾಲಿಸಿಕೊಂಡು ಹೋದರೆ ಮುಂದೆ ಸಂಗಾತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ!” ಇದು ಜೋಯಿಸರುಗಳ ಒಂದು ಸಾಮಾನ್ಯ ಬುರುಡೆ. ಪರಿಹಾರ ಇದೆ! ಲಾಭ ಗ್ಯಾರಂಟಿ- ಜೋಯಿಸರಿಗೆ!
ಎಂತಹ ವಿಚಿತ್ರ ನೋಡಿ! ‘ನನ್ನ ತಂಗಿಗೊಂದು ಗಂಡು ಕೊಡಿ’ ಎಂಬ ನಾಟಕವನ್ನೇ ಪಿ.ಲಂಕೇಶರು ಬರೆದಿದ್ದಾರೆ! ಬಹುತೇಕ ಜನರಿಗೆ ಈ ಸಮಸ್ಯೆ ಇದೆ! ಜಾತಿ, ಉಪಜಾತಿ, ಕುಲ, ಜಾತಕ, ನಕ್ಷತ್ರ, ಐಶ್ವರ್ಯ, ಅಂತಸ್ತು, ರೂಪ, ಬಣ್ಣ, ಗುಣ, ಎತ್ತರ, ವಿದ್ಯೆ…ಮಣ್ಣು ಮಸಣ ಎಂದು ಹೆಣಗಾಡುವುದರಿಂದ ಈ ಸಮಸ್ಯೆ ಉಂಟಾಗುವುದಿಲ್ಲ! ಇದಕ್ಕೆ ಪಿತೃದೋಷ, ಶನಿದೋಷ, ನಾಗದೋಷಗಳೇ ಕಾರಣ!
ಇದಕ್ಕೆ ಪರಿಹಾರ ನೋಡಿ! “ಹಾಲು, ಮೊಸರು, ಎಳನೀರು, ಹೂ, ಜೇನುತುಪ್ಪ, ಕಬ್ಬಿನ ಹಾಲು ಇತ್ಯಾದಿಯಿಂದ ಶಿವನ ಲಿಂಗಕ್ಕೆ ಅಭಿಷೇಕ ಮಾಡಬೇಕು.” (ಇದನ್ನೇ ಮಕ್ಕಳಿಗಾಗಲೀ, ಹಸಿದವರಿಗಾಗಲೀ ಕೊಟ್ಟರೆ ಫಲವಿಲ್ಲ!)
ಸೋಮವಾರ ಅಥವಾ ಶನಿವಾರದಂದೇ ಈ ಕಾರ್ಯಗಳನ್ನು ಮಾಡಬೇಕು. (ಬೇರೆ ದಿನಗಳಲ್ಲಿ ಇವುಗಳನ್ನು ಸೇವಿಸುವುದಿಲ್ಲ ಎಂದು ಟೈಮ್‍ಟೇಬಲ್ ಹಾಕಿರುವ ದೇವರು ಅದನ್ನು ಸೀಕ್ರೆಟಾಗಿ ಈ ಜೋಯಿಸರಿಗೆ ತಿಳಿಸಿರುತ್ತಾನೆ!)
“ಪಿತೃದೋಷ ಅಥವಾ ಶಿಕ್ಷೆಯನ್ನು ನಿವಾರಣೆ ಮಾಡುವ ಸಲುವಾಗಿ ಶನಿದೇವರನ್ನು ಒಲಿಸಿಕೊಳ್ಳಲು ಹನುಮಂತನಿಗೆ ಹರಕೆ ಒಪ್ಪಿಸಬೇಕು! ಅಥವಾ ಓಂ ಶಂ ಶನೈಶ್ಚರಾಯ ನಮಃ ಮಂತ್ರವನ್ನು ಪಠಿಸಬೇಕು.” ಇದೆಂತಹ ಲಾಜಿಕ್ ಎಂದು ಅರ್ಥವಾಗುವುದಿಲ್ಲ. ಈಗ ಬೆಂಗಳೂರು ಮತ್ತಿತರ ನಗರಗಳಲ್ಲಿ ಶನಿದೇವರು ಜೀಪು ರಥದಲ್ಲಿ ಪ್ರದಕ್ಷಿಣೆ ಬಂದು ಕಲೆಕ್ಷನ್ ಮಾಡುವುದರಿಂದ ಮತ್ತು ಹಳ್ಳಿಹಳ್ಳಿಗಳಲ್ಲಿ ಸಾಮೂಹಿಕ ಶನಿಪೂಜೆಗಳು ನಡೆಯುತ್ತಿರುವುದರಿಂದ ಆತನ ವಿಷಯದಲ್ಲಿ ಹನುಮಂತನಿಗೇನು ಕೆಲಸ? ಇದು ಅನ್‍ಫೇರ್ ಟ್ರೇಡ್ ಪ್ರ್ಯಾಕ್ಟೀಸ್ ಆಗುವುದಿಲ್ಲವೇ!?
ಇದೇ ರೀತಿಯಲ್ಲಿ ಪಿತೃದೋಷ, ಶನಿದೋಷ, ನಾಗದೋಷ, ಗ್ರಹದೋಷಗಳಿಂದ ನಿಮಗೆ ಆಗುವ ಅನಾಹುತಗಳನ್ನೂ, ಅದರಿಂದ ಜೋಯಿಸರಿಗೆ ಆಗುವ ಲಾಭಗಳನ್ನು ಮುಂದೆ ನೋಡೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...