Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

- Advertisement -
- Advertisement -

ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ, ಸುನಾಮಿ, ಭೂಕಂಪದಂತಹ ಕೆಲವು ಪ್ರಾಕೃತಿಕ ವಿಕೋಪಗಳು ಉಂಟುಮಾಡುವ ಪರಿಣಾಮದ ಸ್ವರೂಪ ಬೇರೆ. ಒಳಗೊಳಗೇ ಶಿಥಿಲಗೊಳಿಸುವ ಬರ, ಪರಿಸರ ಮಾಲಿನ್ಯಗಳ ಪರಿಣಾಮದ ಸ್ವರೂಪ ಬೇರೆ. ನಿಧಾನಕ್ಕೆ ಹೆಚ್ಚಾಗುತ್ತಾ ಹೋಗುವ ಎರಡನೆಯ ಬಗೆಯ ಸಮಸ್ಯೆಗಳಿಗೆ ಜನರು ಹೊಂದಿ ಕೊಳ್ಳುತ್ತಾ ಹೋಗುತ್ತಾರೆ. ಅವರಲ್ಲಿ ಅಂತಹ ‘ಕಂಗಾಲು’ ಉಂಟಾ ಗುವುದಿಲ್ಲ. ಸದರಿ ವರದಿಯನ್ನು ಬರೆದ ವರದಿಗಾರರಿಗೂ ಕಂಗಾಲು ಉಂಟಾಗಿರುವುದಿಲ್ಲ; ತನ್ನ ಕರ್ತವ್ಯದ ಭಾಗವಾಗಿ ಬರೆದ ವರದಿಯಾಗಿರುತ್ತದೆ. ಇಲ್ಲವೇ ಗಮನ ಸೆಳೆಯುವ ದೃಷ್ಟಿಯಿಂದ ಪರಿಣಾಮ ಬೀರುವ ಪದಗಳನ್ನು ಬಳಸಬೇಕೆಂಬ ಉದ್ದೇಶ ಅವರದ್ದಾಗಿರುತ್ತದೆ.
ಇದಕ್ಕೆ ಕಾರಣವಿದೆ. ಈಗಾಗಲೇ ಚಾಲ್ತಿಯಲ್ಲಿರುವ ಉದಾಹರಣೆಯೊಂದರ ಮೂಲಕ ಅದನ್ನು ವಿವರಿಸಬಹುದು. ನೀವು ಕಪ್ಪೆಯೊಂದನ್ನು ಬಿಸಿ ನೀರಿಗೆ ಹಾಕಿದಲ್ಲಿ ಅದು ಕೂಡಲೇ ನೆಗೆದು ಅಲ್ಲಿಂದ ತಪ್ಪಿಸಿಕೊಳ್ಳುತ್ತದೆ. ಆದರೆ, ತಣ್ಣೀರಿನ ಪಾತ್ರೆಯಲ್ಲಿ ಅದನ್ನು ಇಟ್ಟು ತಳವನ್ನು ನಿಧಾನಕ್ಕೆ ಬಿಸಿ ಮಾಡುತ್ತಾ ಹೋದಲ್ಲಿ, ತಾನು ಬೆಂದು ಹೋಗುವವರೆಗೂ ಅದು ಸುಮ್ಮನೇ ಇರುತ್ತದೆ.
ಈ ರೀತಿ ಬೇಯುವ ಸ್ಥಿತಿಗೆ ಭೂಮಿ ಬರುತ್ತಿದೆ ಎಂದು ಹಲವು ತಜ್ಞರು ಹೇಳುತ್ತಿದ್ದಾರೆ. ಅದನ್ನು ಸೂಚಿಸುತ್ತಿರುವ ಹಲವು ಸಂಗತಿಗಳನ್ನೂ ಅವರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಇನ್ನೂ ಎಲ್ಲವೂ ಮುಗಿದು ಹೋಗಿಲ್ಲ ಎಂಬ ಸಮಜಾಯಿಷಿಯನ್ನು ನೀಡುತ್ತಾ, ಭೂಮಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಒಡ್ಡುವ ಕೆಲಸ ನಡೆಯುತ್ತಲೇ ಇದೆ. ಉದಾಹರಣೆಗೆ ಕಾವೇರಿಗೆ ಅಡ್ಡಲಾಗಿರುವ ಕಟ್ಟಿರುವ ಕೆಆರ್‍ಎಸ್ ಪ್ರದೇಶದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಉಂಟಾದ ಕಂಪನಗಳು, ಅಣೆಕಟ್ಟೆಯ ಪಕ್ಕದಲ್ಲೇ ಸ್ಥಾಪನೆಯಾಗಿರುವ ಕಂಪನ ಮಾಪನ ಕೇಂದ್ರದವರೆಗೂ ಹೋಗಿ ಅಲ್ಲಿ ದಾಖಲಾಗಿವೆ. ಆದರೆ, ಆ ಕಂಪನದಿಂದ ಅಣೆಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲವೆಂಬ ವರದಿಯನ್ನು ಇಟ್ಟುಕೊಂಡು ಗಣಿಗಾರಿಕೆ ಮುಂದುವರೆಸುವ ಸನ್ನಾಹಗಳು ಜಾರಿಯಲ್ಲಿವೆ. ಹಾಗಾದರೆ, ಒಮ್ಮೆ ಅಣೆಕಟ್ಟೆಗೆ ಧಕ್ಕೆಯಾದ ಮೇಲೆಯೇ ನಾವು ಎಚ್ಚೆತ್ತುಕೊಳ್ಳಬೇಕೆಂಬುದು ಅದರ ಅರ್ಥವೇ?
ಇಂತಹ ಅದೆಷ್ಟೋ ಉದಾಹರಣೆಗಳನ್ನು ನೀಡುತ್ತಾ ಹೋಗಬಹುದು. ಒಟ್ಟಿನಲ್ಲಿ ಮನುಷ್ಯರು ಸಾಂದ್ರವಾಗಿ ಜೀವನ ನಡೆಸುವ ಎಲ್ಲೆಡೆ ಪ್ರಕೃತಿಯಲ್ಲಿ ಭಾರೀ ಪ್ರಮಾಣದ ಏರುಪೇರುಗಳುಂಟಾಗುತ್ತವೆ. ಅವರು ಬಳಸಿ ಎಸೆಯುವ ತ್ಯಾಜ್ಯದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ, ಅದನ್ನೂ ದಾಟಿ ನೋಡಿದರೆ, ಇದು ‘ಜೀವನ’ದ ಪ್ರಶ್ನೆ ಅಷ್ಟೇ ಅಲ್ಲ. ಈ ರೀತಿಯ ನಗರೀಕರಣ ಹೆಚ್ಚಾದರೆ, ಭೂಮಿಯನ್ನು ಬೇಯಿಸುತ್ತಲೇ ಹೋಗುವ ಅಭಿವೃದ್ಧಿ ಹೆಚ್ಚಾಗುತ್ತಾ ಹೋದರೆ ಜಿಡಿಪಿ ಹೆಚ್ಚಾಗುತ್ತದೆ. ಹಾಗಾಗಿ ಜಿಡಿಪಿ ಹೆಚ್ಚಳದ ಹಿಂದೆ ಬಿದ್ದಿರುವ, ಕೆಲವು ಕಂಪೆನಿಗಳ ಲಾಭ ಹೆಚ್ಚಿಸುವ ಅಭಿವೃದ್ಧಿಯನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳ ಕೂಟ ಬೆಂಬಲಿಸುತ್ತಾ ಹೋಗುತ್ತದೆ. ಅಂತಿಮವಾಗಿ ಇನ್ನು ತಡೆದುಕೊಳ್ಳುವುದು ಸಾಧ್ಯವೇ ಇಲ್ಲ ಎನಿಸಿದಾಗ, ದೂರದ ಕಾಡಿನಲ್ಲಿರುವ ಜನರಿಗೆ ಕಾಡನ್ನು ರಕ್ಷಿಸುವ ಹೊಣೆ ವಹಿಸಲಾಗುತ್ತದೆ. ಅಲ್ಲಿ ಉಳಿದುಕೊಳ್ಳುವ ಕಾಡು, ಇನ್ನೆಲ್ಲೋ ನಡೆಯುತ್ತಿರುವ ಉತ್ಪಾತವನ್ನು ತಡೆಗಟ್ಟುವ ವಿಪರೀತದ ಪರಿಸರ ಸಮತೋಲನದ ಯೋಜನೆಗಾಗಿ ವರದಿಗಳು ತಯಾರಾಗುತ್ತವೆ.
ಒಂದಲ್ಲಾ ಒಂದು ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಅದೇ ಆಗಿದೆ. ಪಶ್ಚಿಮಘಟ್ಟ ಏನು ಮಾಡಬೇಕು ಎಂದು ನೀಡಲಾಗುತ್ತಿರುವ ವರದಿಗಿಂತ, ಈ ನಗರಗಳಲ್ಲಿ ಏನು ಮಾಡಬೇಕು ಎಂಬ ವರದಿಗಳು ಬರಬೇಕು ಮತ್ತು ಅವನ್ನು ಉಲ್ಲಂಘಿಸಲೇಬಾರದು ಎಂಬ ನಿಯಮಗಳನ್ನು ಹಾಕಿಕೊಳ್ಳಬೇಕು. ಅದು ನಡೆಯುತ್ತಿಲ್ಲ.
ನಮ್ಮ ನಗರಗಳ ಜನರ ಬದುಕನ್ನು ಸಹನೀಯಗೊಳಿಸಲು ಪ್ರತ್ಯೇಕ ಬಿಡಿ ಯೋಜನೆಗಳನ್ನು ತಯಾರಿಸುವುದನ್ನೇ ಬಿಡಬೇಕು. ಇಡೀ ಭೂಮಿಯ ಎಲ್ಲಾ ಭಾಗಗಳಲ್ಲೂ ಸಮತೋಲನದ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳಲು ಹೆಚ್ಚಿನ ತಜ್ಞತೆಯೇನೂ ಬೇಕಿಲ್ಲ. ದೆಹಲಿಯ ವಿಚಾರವನ್ನೇ ನೋಡಿ. ದೆಹಲಿ ಕೇಂದ್ರಿತವಾದ ಅಭಿವೃದ್ಧಿಯ ಭಾಗವಾಗಿ ಜಾರಿಗೆ ಬಂದ ಹಸಿರುಕ್ರಾಂತಿಯನ್ನು ಪಂಜಾಬಿನವರು ಅನುಸರಿಸಬೇಕಾಯಿತು. ಈಗ ಅಲ್ಲಿನ ಹೊಲಗದ್ದೆಗಳಲ್ಲಿ ಬೆಳೆ ಬೆಳೆದ ನಂತರ ಉಳಿಯುವ ಹುಲ್ಲಿನ ವಿಲೇವಾರಿ ಸಾಧ್ಯವಾಗದೇ ಬೆಂಕಿ ಹಾಕಲಾಗುತ್ತದೆ. ಆಗ ಅಲ್ಲಿಂದ ಏಳುವ ಹೊಗೆಯು ದೆಹಲಿಯವರೆಗೆ ಬಂದು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿಯೊಂದಿದೆ. ಅದೇ ಪಂಜಾಬಿನವರೂ, ಹರಿಯಾಣದವರು ತಮ್ಮ ಹಳ್ಳಿಗಳಲ್ಲಿ ಬದುಕಲಾರದೇ ದೆಹಲಿಗೆ ಬಂದು ದುಡಿಯುತ್ತಾರೆ. ದೆಹಲಿಯನ್ನು ಜೀವಂತವಾಗಿಡಲು ಅವರೂ ಬೆವರು ಸುರಿಸುತ್ತಾರೆ ಮತ್ತು ದೆಹಲಿಯ ಕೊಳೆಗೆ ಅವರೂ ಕಾರಣರಾಗುತ್ತಾರೆ.
ಅಂದರೆ ಎಲ್ಲವೂ ಪರಸ್ಪರ ಹೆಣೆದುಕೊಂಡಿರುವ ಸಂಗತಿಗಳಿವು ಮತ್ತು ದೆಹಲಿಗೋ ಬೆಂಗಳೂರಿಗೋ ವಾಷಿಂಗ್ಟನ್ನಿಗೋ ಸೀಮಿತವಾದ ಸಂಗತಿಗಳೂ ಅಲ್ಲ. ಹಾಗೆಯೇ ಇದನ್ನು ಉಳಿಸಿಕೊಳ್ಳುವ ಕರ್ಮವನ್ನು ಅಂಚಿನಲ್ಲಿರುವವರ ಮೇಲೆ ಹೇರುವುದಕ್ಕಿಂತ ಆಷಾಢಭೂತಿತನ ಹಾಗೂ ಕ್ರೌರ್ಯ ಇನ್ನೊಂದಿಲ್ಲ. ಯಾರು ಶುರು ಮಾಡಬೇಕೆಂದು ಯಾದಿ ತಯಾರಿಸುವುದಾದರೆ, ಇದು ಮೊದಲು ಮೇಲಿನವರಿಂದ ಶುರುವಾಗಬೇಕಾದ ಕೆಲಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...