Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

- Advertisement -
- Advertisement -

ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ, ಸುನಾಮಿ, ಭೂಕಂಪದಂತಹ ಕೆಲವು ಪ್ರಾಕೃತಿಕ ವಿಕೋಪಗಳು ಉಂಟುಮಾಡುವ ಪರಿಣಾಮದ ಸ್ವರೂಪ ಬೇರೆ. ಒಳಗೊಳಗೇ ಶಿಥಿಲಗೊಳಿಸುವ ಬರ, ಪರಿಸರ ಮಾಲಿನ್ಯಗಳ ಪರಿಣಾಮದ ಸ್ವರೂಪ ಬೇರೆ. ನಿಧಾನಕ್ಕೆ ಹೆಚ್ಚಾಗುತ್ತಾ ಹೋಗುವ ಎರಡನೆಯ ಬಗೆಯ ಸಮಸ್ಯೆಗಳಿಗೆ ಜನರು ಹೊಂದಿ ಕೊಳ್ಳುತ್ತಾ ಹೋಗುತ್ತಾರೆ. ಅವರಲ್ಲಿ ಅಂತಹ ‘ಕಂಗಾಲು’ ಉಂಟಾ ಗುವುದಿಲ್ಲ. ಸದರಿ ವರದಿಯನ್ನು ಬರೆದ ವರದಿಗಾರರಿಗೂ ಕಂಗಾಲು ಉಂಟಾಗಿರುವುದಿಲ್ಲ; ತನ್ನ ಕರ್ತವ್ಯದ ಭಾಗವಾಗಿ ಬರೆದ ವರದಿಯಾಗಿರುತ್ತದೆ. ಇಲ್ಲವೇ ಗಮನ ಸೆಳೆಯುವ ದೃಷ್ಟಿಯಿಂದ ಪರಿಣಾಮ ಬೀರುವ ಪದಗಳನ್ನು ಬಳಸಬೇಕೆಂಬ ಉದ್ದೇಶ ಅವರದ್ದಾಗಿರುತ್ತದೆ.
ಇದಕ್ಕೆ ಕಾರಣವಿದೆ. ಈಗಾಗಲೇ ಚಾಲ್ತಿಯಲ್ಲಿರುವ ಉದಾಹರಣೆಯೊಂದರ ಮೂಲಕ ಅದನ್ನು ವಿವರಿಸಬಹುದು. ನೀವು ಕಪ್ಪೆಯೊಂದನ್ನು ಬಿಸಿ ನೀರಿಗೆ ಹಾಕಿದಲ್ಲಿ ಅದು ಕೂಡಲೇ ನೆಗೆದು ಅಲ್ಲಿಂದ ತಪ್ಪಿಸಿಕೊಳ್ಳುತ್ತದೆ. ಆದರೆ, ತಣ್ಣೀರಿನ ಪಾತ್ರೆಯಲ್ಲಿ ಅದನ್ನು ಇಟ್ಟು ತಳವನ್ನು ನಿಧಾನಕ್ಕೆ ಬಿಸಿ ಮಾಡುತ್ತಾ ಹೋದಲ್ಲಿ, ತಾನು ಬೆಂದು ಹೋಗುವವರೆಗೂ ಅದು ಸುಮ್ಮನೇ ಇರುತ್ತದೆ.
ಈ ರೀತಿ ಬೇಯುವ ಸ್ಥಿತಿಗೆ ಭೂಮಿ ಬರುತ್ತಿದೆ ಎಂದು ಹಲವು ತಜ್ಞರು ಹೇಳುತ್ತಿದ್ದಾರೆ. ಅದನ್ನು ಸೂಚಿಸುತ್ತಿರುವ ಹಲವು ಸಂಗತಿಗಳನ್ನೂ ಅವರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಇನ್ನೂ ಎಲ್ಲವೂ ಮುಗಿದು ಹೋಗಿಲ್ಲ ಎಂಬ ಸಮಜಾಯಿಷಿಯನ್ನು ನೀಡುತ್ತಾ, ಭೂಮಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಒಡ್ಡುವ ಕೆಲಸ ನಡೆಯುತ್ತಲೇ ಇದೆ. ಉದಾಹರಣೆಗೆ ಕಾವೇರಿಗೆ ಅಡ್ಡಲಾಗಿರುವ ಕಟ್ಟಿರುವ ಕೆಆರ್‍ಎಸ್ ಪ್ರದೇಶದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಉಂಟಾದ ಕಂಪನಗಳು, ಅಣೆಕಟ್ಟೆಯ ಪಕ್ಕದಲ್ಲೇ ಸ್ಥಾಪನೆಯಾಗಿರುವ ಕಂಪನ ಮಾಪನ ಕೇಂದ್ರದವರೆಗೂ ಹೋಗಿ ಅಲ್ಲಿ ದಾಖಲಾಗಿವೆ. ಆದರೆ, ಆ ಕಂಪನದಿಂದ ಅಣೆಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲವೆಂಬ ವರದಿಯನ್ನು ಇಟ್ಟುಕೊಂಡು ಗಣಿಗಾರಿಕೆ ಮುಂದುವರೆಸುವ ಸನ್ನಾಹಗಳು ಜಾರಿಯಲ್ಲಿವೆ. ಹಾಗಾದರೆ, ಒಮ್ಮೆ ಅಣೆಕಟ್ಟೆಗೆ ಧಕ್ಕೆಯಾದ ಮೇಲೆಯೇ ನಾವು ಎಚ್ಚೆತ್ತುಕೊಳ್ಳಬೇಕೆಂಬುದು ಅದರ ಅರ್ಥವೇ?
ಇಂತಹ ಅದೆಷ್ಟೋ ಉದಾಹರಣೆಗಳನ್ನು ನೀಡುತ್ತಾ ಹೋಗಬಹುದು. ಒಟ್ಟಿನಲ್ಲಿ ಮನುಷ್ಯರು ಸಾಂದ್ರವಾಗಿ ಜೀವನ ನಡೆಸುವ ಎಲ್ಲೆಡೆ ಪ್ರಕೃತಿಯಲ್ಲಿ ಭಾರೀ ಪ್ರಮಾಣದ ಏರುಪೇರುಗಳುಂಟಾಗುತ್ತವೆ. ಅವರು ಬಳಸಿ ಎಸೆಯುವ ತ್ಯಾಜ್ಯದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ, ಅದನ್ನೂ ದಾಟಿ ನೋಡಿದರೆ, ಇದು ‘ಜೀವನ’ದ ಪ್ರಶ್ನೆ ಅಷ್ಟೇ ಅಲ್ಲ. ಈ ರೀತಿಯ ನಗರೀಕರಣ ಹೆಚ್ಚಾದರೆ, ಭೂಮಿಯನ್ನು ಬೇಯಿಸುತ್ತಲೇ ಹೋಗುವ ಅಭಿವೃದ್ಧಿ ಹೆಚ್ಚಾಗುತ್ತಾ ಹೋದರೆ ಜಿಡಿಪಿ ಹೆಚ್ಚಾಗುತ್ತದೆ. ಹಾಗಾಗಿ ಜಿಡಿಪಿ ಹೆಚ್ಚಳದ ಹಿಂದೆ ಬಿದ್ದಿರುವ, ಕೆಲವು ಕಂಪೆನಿಗಳ ಲಾಭ ಹೆಚ್ಚಿಸುವ ಅಭಿವೃದ್ಧಿಯನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳ ಕೂಟ ಬೆಂಬಲಿಸುತ್ತಾ ಹೋಗುತ್ತದೆ. ಅಂತಿಮವಾಗಿ ಇನ್ನು ತಡೆದುಕೊಳ್ಳುವುದು ಸಾಧ್ಯವೇ ಇಲ್ಲ ಎನಿಸಿದಾಗ, ದೂರದ ಕಾಡಿನಲ್ಲಿರುವ ಜನರಿಗೆ ಕಾಡನ್ನು ರಕ್ಷಿಸುವ ಹೊಣೆ ವಹಿಸಲಾಗುತ್ತದೆ. ಅಲ್ಲಿ ಉಳಿದುಕೊಳ್ಳುವ ಕಾಡು, ಇನ್ನೆಲ್ಲೋ ನಡೆಯುತ್ತಿರುವ ಉತ್ಪಾತವನ್ನು ತಡೆಗಟ್ಟುವ ವಿಪರೀತದ ಪರಿಸರ ಸಮತೋಲನದ ಯೋಜನೆಗಾಗಿ ವರದಿಗಳು ತಯಾರಾಗುತ್ತವೆ.
ಒಂದಲ್ಲಾ ಒಂದು ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಅದೇ ಆಗಿದೆ. ಪಶ್ಚಿಮಘಟ್ಟ ಏನು ಮಾಡಬೇಕು ಎಂದು ನೀಡಲಾಗುತ್ತಿರುವ ವರದಿಗಿಂತ, ಈ ನಗರಗಳಲ್ಲಿ ಏನು ಮಾಡಬೇಕು ಎಂಬ ವರದಿಗಳು ಬರಬೇಕು ಮತ್ತು ಅವನ್ನು ಉಲ್ಲಂಘಿಸಲೇಬಾರದು ಎಂಬ ನಿಯಮಗಳನ್ನು ಹಾಕಿಕೊಳ್ಳಬೇಕು. ಅದು ನಡೆಯುತ್ತಿಲ್ಲ.
ನಮ್ಮ ನಗರಗಳ ಜನರ ಬದುಕನ್ನು ಸಹನೀಯಗೊಳಿಸಲು ಪ್ರತ್ಯೇಕ ಬಿಡಿ ಯೋಜನೆಗಳನ್ನು ತಯಾರಿಸುವುದನ್ನೇ ಬಿಡಬೇಕು. ಇಡೀ ಭೂಮಿಯ ಎಲ್ಲಾ ಭಾಗಗಳಲ್ಲೂ ಸಮತೋಲನದ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳಲು ಹೆಚ್ಚಿನ ತಜ್ಞತೆಯೇನೂ ಬೇಕಿಲ್ಲ. ದೆಹಲಿಯ ವಿಚಾರವನ್ನೇ ನೋಡಿ. ದೆಹಲಿ ಕೇಂದ್ರಿತವಾದ ಅಭಿವೃದ್ಧಿಯ ಭಾಗವಾಗಿ ಜಾರಿಗೆ ಬಂದ ಹಸಿರುಕ್ರಾಂತಿಯನ್ನು ಪಂಜಾಬಿನವರು ಅನುಸರಿಸಬೇಕಾಯಿತು. ಈಗ ಅಲ್ಲಿನ ಹೊಲಗದ್ದೆಗಳಲ್ಲಿ ಬೆಳೆ ಬೆಳೆದ ನಂತರ ಉಳಿಯುವ ಹುಲ್ಲಿನ ವಿಲೇವಾರಿ ಸಾಧ್ಯವಾಗದೇ ಬೆಂಕಿ ಹಾಕಲಾಗುತ್ತದೆ. ಆಗ ಅಲ್ಲಿಂದ ಏಳುವ ಹೊಗೆಯು ದೆಹಲಿಯವರೆಗೆ ಬಂದು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿಯೊಂದಿದೆ. ಅದೇ ಪಂಜಾಬಿನವರೂ, ಹರಿಯಾಣದವರು ತಮ್ಮ ಹಳ್ಳಿಗಳಲ್ಲಿ ಬದುಕಲಾರದೇ ದೆಹಲಿಗೆ ಬಂದು ದುಡಿಯುತ್ತಾರೆ. ದೆಹಲಿಯನ್ನು ಜೀವಂತವಾಗಿಡಲು ಅವರೂ ಬೆವರು ಸುರಿಸುತ್ತಾರೆ ಮತ್ತು ದೆಹಲಿಯ ಕೊಳೆಗೆ ಅವರೂ ಕಾರಣರಾಗುತ್ತಾರೆ.
ಅಂದರೆ ಎಲ್ಲವೂ ಪರಸ್ಪರ ಹೆಣೆದುಕೊಂಡಿರುವ ಸಂಗತಿಗಳಿವು ಮತ್ತು ದೆಹಲಿಗೋ ಬೆಂಗಳೂರಿಗೋ ವಾಷಿಂಗ್ಟನ್ನಿಗೋ ಸೀಮಿತವಾದ ಸಂಗತಿಗಳೂ ಅಲ್ಲ. ಹಾಗೆಯೇ ಇದನ್ನು ಉಳಿಸಿಕೊಳ್ಳುವ ಕರ್ಮವನ್ನು ಅಂಚಿನಲ್ಲಿರುವವರ ಮೇಲೆ ಹೇರುವುದಕ್ಕಿಂತ ಆಷಾಢಭೂತಿತನ ಹಾಗೂ ಕ್ರೌರ್ಯ ಇನ್ನೊಂದಿಲ್ಲ. ಯಾರು ಶುರು ಮಾಡಬೇಕೆಂದು ಯಾದಿ ತಯಾರಿಸುವುದಾದರೆ, ಇದು ಮೊದಲು ಮೇಲಿನವರಿಂದ ಶುರುವಾಗಬೇಕಾದ ಕೆಲಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...