Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...