Homeಚಳವಳಿಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

| ಮೂಲ : ಶಾ ಅಲಂ ಖಾನ್ |
| ಕನ್ನಡಕ್ಕೆ: ಶ್ರೀ ಪಾದ್ ಭಟ್ |

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಬೂತಪೂರ್ವ ಗೆಲುವಿನ ನಂತರ ಪ್ರದಾನ ಮಂತ್ರಿ ಮೋದಿ ಅವರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಮಾತನಾಡುತ್ತ ‘ ಇಂಡಿಯಾದಲ್ಲಿ ಈಗ ಕೇವಲ ಎರಡು ಜಾತಿಗಳಿವೆ – ಒಂದು ಬಡವರು ಮತ್ತೊಂದು ಈ ಬಡತನವನ್ನ ಉಪಶಮನಗೊಳಿಸುವವರು’ ಎಂದು ಹೇಳಿದರು. ಅವರ ಮಾತುಗಳ ಪ್ರತಿದ್ವನಿ ಕಮರಿಹೋಗುವುದಕ್ಕೂ ಮೊದಲೆ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯವ ವೈದ್ಯೆ ‘ಪಾಯಲ್ ತಾಡ್ವಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ತಾಡ್ವಿಯವರು ಆ ಆಸ್ಪತ್ರೆಯಲ್ಲಿ ತಮ್ಮ ಹಿರಿಯ ವೈದ್ಯೆಯರಿಂದ ನಿರಂತರವಾಗಿ ಜಾತಿ ಅಪಮಾನ ಮತ್ತು ತಾರತಮ್ಯದ ಹಿಂಸೆಗೆ ಒಳಗಾಗಿದ್ದರು. ಆದಿವಾಸಿ ಭಿಲ್ ಮುಸ್ಲಿಂ ಸಮುದಾಯದ ತಾಡ್ವಿ ಅವರು ಮೇ 2018ರಿಂದ ಆ ಸಂಸ್ಥೆಯಲ್ಲಿ ಎಂ.ಡಿ. ಗೈನಕಾಲಜಿ ವಿಶಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಪ್ರದಾನಿ ಏನೇ ಹೇಳಿದರೂ ಇಂದಿಗೂ ಜಾತಿಯು ಇಂಡಿಯಾ ಸಮಾಜದಲ್ಲಿ ಭಯಾನಕ ವಾಸ್ತವವಾಗಿದೆ

ನಮ್ಮ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಫ್ಯಾಕ್ಟರಿಗಳಲ್ಲಿ, ವ್ಯಾಪಾರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಜಾತೀಯತೆಯು ವಿಶದಂತೆ ಹಬ್ಬಿಕೊಂಡಿದೆ. ಈ ಜಾತಿ ತಾರತಮ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ತಳಸಮುದಾಯಗಳ ವಿದ್ಯಾರ್ಥಿಗಳು, ವಿದ್ವಾಂಸರಾದ ಮಾದಾರಿ ವೆಂಕಟೇಶ್, ರೋಹಿತ್ ವೇಮುಲ, ಸೆಂತಿಲ್ ಕುಮಾರ್ ಮತ್ತು ಪುಲ್ಯಾಲ ರಾಜು ಅವರೊಂದಿಗೆ ಈಗ ತಾಡ್ವಿಯವರೂ ಕೂಡಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಆದಾರಿತ ಪ್ರತ್ಯೇಕತೆಯನ್ನ ಇಂದು ತ್ವರಿತವಾಗಿ ಬಗೆಹರಿಸಬೇಕಾಗಿದೆ. ಉತ್ತರ ಪ್ರದೇಶದ ದಲಿತ ಕುಟುಂಬದಿಂದ ಬಂದ ಏಮ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಬಾಲ ಮುಕುಂದ್ ಭಾರತಿ ಈ ಜಾತಿ ಹಿಂಸೆಯ ಕಾರಣಕ್ಕಾಗಿ ಮಾರ್ಚ 2010ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಕಳೆದ 50 ವರ್ಶಗಳಲ್ಲಿ ಭಾರತಿ ಅವರು ತಮ್ಮ ಗ್ರಾಮದಿಂದ ವೈದ್ಯಕೀಯ ವ್ಯಾಸಂಗಕ್ಕೆ ಪ್ರವೇಶ ಪಡೆದ ಮೊದಲ ದಲಿತ ವಿದ್ಯಾರ್ಥಿಯಾಗಿದ್ದರು. ಏಮ್ಸ್‍ನಲ್ಲಿ ಓದುತ್ತಿದ್ದ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಅನಿಲ್ ಕುಮಾರ್ ಮೀನಾ ಮಾರ್ಚ 2012ರಲ್ಲಿ ತಮ್ಮ ಹಿಂದುಳಿದ ಜಾತಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು. ಏಮ್ಸ್‍ನಲ್ಲಿ ಜಾತಿ ಆಧಾರಿತ ತಾರತಮ್ಮ ಎಶ್ಟು ಗಂಬೀರವಾಗಿದೆಯೆಂದರೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮೇಲೆ ನಡೆಯುತ್ತಿರುವ ದೌರ್ಜನ್ಯದ ಸತ್ಯಶೋದನೆಗಾಗಿ 2007ರಲ್ಲಿ ಸುಖದೇವ ಥೋರೊಟ್ ಅವರ ಅದ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಯಿತು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ. ಈ ವರದಿಯ ಪ್ರಮುಖಾಂಶಗಳು : ಶೇಕಡಾ 69 ಪ್ರಮಾಣದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ತಮಗೆ ಪ್ರಾದ್ಯಾಪಕರಿಂದ ಯಾವುದೆ ಪ್ರೋತ್ಸಾಹ ದೊರಕುವುದಿಲ್ಲ, ಈ ಪ್ರಾದ್ಯಾಪಕರ ತಾತ್ಸಾರ ಮತ್ತು ಅನುಪಸ್ಥಿತಿಯಿಂದಾಗಿ ಅವರೊಂದಿಗೆ ಸಂಪರ್ಕ ಸಾದಿಸಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಶೇಕಡಾ 72 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಜಾತಿಯ ಹಿನ್ನೆಲೆ ಕಾರಣಕ್ಕೆ ಈ ಪ್ರಾದ್ಯಾಪಕರು ತಮ್ಮಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು ಮತ್ತು ತರಗತಿಗಳಲ್ಲಿ ಪಾಠ ಮಾಡುವಾಗ ತಾರತಮ್ಯದಿಂದ ನೋಡುತ್ತಿದ್ದರು ಎಂದು ಹೇಳಿದ್ದಾರೆ. ಶೇಕಡಾ 76 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನ ನ್ಯಾಯವಾದ ರೀತಿಯಲ್ಲಿ ಮೌಲ್ಯಮಾಪನ ಮಾಡಲೆ ಇಲ್ಲ ಎಂದು ಹೇಳಿದ್ದಾರೆ.

ಶೇಕಡಾ 88 ಪ್ರಮಾಣದ ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದಕ್ಕಿಂತಲೂ ಕಡಿಮೆ ಅಂಕಗಳನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ. ಶೇಕಡಾ 84 ಪ್ರಮಾಣದ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳಲ್ಲಿ ಪಕ್ಷಪಾತ ಮಾಡಿದರು ಎಂದು ಹೇಳಿದ್ದಾರೆ. ಶೇಕಡಾ 86 ಪ್ರಮಾಣದ ವಿದ್ಯಾರ್ಥಿಗಳು ಮೇಲ್ಜಾತಿಯವರಿಗೆ ಹೋಲಿಸಿದಾಗ ಈ ಪ್ರಾದ್ಯಾಪಕರು ಪರೀಕ್ಷೆಯಲ್ಲಿ ತಮಗೆ ಸಾಕಶ್ಟು ಸಮಯವನ್ನೆ ಕೊಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏಮ್ಸ್ ಹಾಸ್ಟೆಲ್‍ಗಳಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆ ಮತ್ತು ತಾರತಮ್ಯದ ಹಿಂಸೆಯನ್ನ ಅನುಬವಿಸಬೇಕಾಯಿತು. ದೆಹಲಿಯ ಏಮ್ಸ್‍ನಲ್ಲಿ ಕೆಲಸ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ಪ್ರಾದ್ಯಾಪಕರೂ ಸಹ ಈ ತಾರತಮ್ಯಕ್ಕೆ ಒಳಗಾಗಿದ್ದರು ಎಂದು ಆ ವರದಿಯಲ್ಲಿ ವಿವರಿಸಲಾಗಿದೆ

ದೆಹಲಿಯ ಏಮ್ಸ್‍ನ ಪಕ್ಕದಲ್ಲಿರುವ ಮತ್ತೊಂದು ಪ್ರಮುಖ ವೈದ್ಯ ಶಿಕ್ಷಣ ಬೋದಿಸುವ ವರ್ದಮಾನ ಮಹಾವೀರ ವೈದ್ಯಕೀಯ ಕಾಲೇಜ್‍ನಲ್ಲಿ ಶೇಕಡಾ 25 ಪ್ರಮಾಣದ ದಲಿತ ವಿದ್ಯಾರ್ಥಿಗಳನ್ನ ಜಾತಿ ತಾರತಮ್ಯದ ಕಾರಣಕ್ಕೆ ಶರೀರ ವಿಜ್ಞಾನ (physiology) ಪರೀಕ್ಷೆಯಲ್ಲಿ ಸಾಮೂಹಿವಾಗಿ ಅನುತ್ತೀರ್ಣಗೊಳಿಸಲಾಯಿತು. ಈ ಹಗರಣಕ್ಕೆ ಸಂಬಂದಸಿದಂತೆ 2012ರಲ್ಲಿ ಮುಂಗೇಕರ್ ಸಮಿತಿಯು ತನಿಖೆ ನಡೆಸಿತು. ಈ ಸಮಿತಿಯು ಪರಿಶಿಷ್ಟ ಜಾತಿಗಳ ರಾಶ್ಟ್ರೀಯ ಆಯೋಗಕ್ಕೆ (NCSC) ನೀಡಿದ ವರದಿಯಲ್ಲಿ ‘ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿರುದ್ದ ಕಾಲೇಜ್‍ನ ಆಡಳಿತ ಮಂಡಳಿಯ ದ್ವೇಶ ಯಾವ ಮಟ್ಟದಲ್ಲಿದೆಯೆಂದರೆ ದಲಿತರು ಮಾಹಿತಿ ಹಕ್ಕು ಕಾಯಿದೆಯ ಅಡಿಯಲ್ಲಿ ಮಾಹಿತಿ ಆಯೋಗಕ್ಕೆ ಪ್ರತಿನಿತ್ಯ ಅರ್ಜಿಗಳನ್ನ ಸಲ್ಲಿಸುತ್ತಿದ್ದರು’ ಎಂದು ಉಲ್ಲೇಖಿಸಲಾಗಿದೆ. ಕಿರುಕುಳಕ್ಕೆ ಒಳಗಾದ ದಲಿತ ವಿದ್ಯಾರ್ಥಿಗಳಿಗೆ 10 ಲಕ್ಷ ಮೊತ್ತದ ಪರಿಹಾರ ಕೊಡಬೇಕೆಂದು ಮತ್ತು ಆ ಕಾಲೇಜ್‍ನ ಬೋದಕ ಮತ್ತು ಆಡಳಿತ ಸಿಬ್ಬಂದಿಯನ್ನ ಅಮಾನತ್ತು ಮಾಡಬೇಕೆಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಶಿಕ್ಷಣ ಸಂಸ್ಥೆಗಳನ್ನ ಮೇಲ್ಜಾತಿಗಳು ಮತ್ತು ಶ್ರೀಮಂತ ವರ್ಗದವರಿಗೆ ಕಾಯ್ದಿರಿಸಲಾಗುತ್ತದೆ. ಆದರೆ ಜಾತಿ ಆದಾರಿತ ಮೀಸಲಾತಿಯ ಸಾಮಾಜಿಕ ನ್ಯಾಯದ ಮೂಲಕ ಈ ಯಾಜಮಾನಕೀಯಕ್ಕೆ ಒಡ್ಡಲಾಗುವ ಸವಾಲನ್ನ ಮೀರಲು ಈ ಕಿರುಕುಳ, ಅಪಮಾನ, ಪ್ರತ್ಯೇಕತೆ, ತಾರತಮ್ಯವನ್ನ ತುರ್ತಾಗಿ ಜಾರಿಗೊಳಿಲಾಗುತ್ತದೆ. ಈ ಅಪರಾದಿಗಳಿಗೆ ದಂಡನೆಯ ಕ್ರಮ ಮತ್ತು ಶಾಸನಬದ್ದ ಆದೇಶವಿದ್ದರೂ ಸಹ ದೀರ್ಘಾವದಿ ಪರಿಹಾರವನ್ನ ಕಂಡುಕೊಳ್ಳುವುದು ಅವಶ್ಯಕವಾಗಿದೆ.
( ಕೃಪೆ : ಇಂಡಿಯನ್ ಎಕ್ಸ್‍ಪ್ರೆಸ್ 29, ಮೇ, 2019)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...