Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...