Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...