Homeಸಿನಿಮಾಸಿನಿ ಸುದ್ದಿಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

ಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

- Advertisement -
- Advertisement -

ರಾಜಶೇಖರ್ ಅಕ್ಕಿ |

ರಷಿಯಾದ ಒಂದು ಗ್ರಾಮ, ಆಗತಾನೆ ಕ್ರಾಂತಿಯಾಗಿದೆ. ಮಹಾಯುದ್ಧದ ಪರಿಣಾಮಗಳು ಇನ್ನೂ ಕಾಣಿಸಿಕೊಳ್ಳುತ್ತಿವೆ. ಅಂತಹದ್ದರಲ್ಲಿ ಒಂದು ಗೂಡ್ಸ್ ರೈಲಿನಿಂದ ಪರಾನ್ಯಾ ಎನ್ನುವ ಹೆಣ್ಣುಮಗಳು ಬಂದಿಳಿಯುತ್ತಾಳೆ. ಗೋಣಿಚೀಲವನ್ನೇ ಉಡುಪಾಗಿ ಧರಿಸಿದ ಅವಳು ಮಾನಸಿಕವಾಗಿ ಅಸ್ವಸ್ಥ ಎನ್ನುವುದು ಅವಳ ವರ್ತನೆಗಳಿಂದ ಸ್ಪಷ್ಟವಾಗುತ್ತದೆ. ಜೋಕ್ರ್ಯಾ ಎನ್ನುವ ವ್ಯಕ್ತಿ ತನ್ನ ಕುದುರೆಯನ್ನು ಕಳೆದುಕೊಂಡು, ಹೊಸ ಸೋಷಲಿಸ್ಟ್ ಆಳ್ವಕೆಗೆ ಹೊಂದಿಕೊಳ್ಳದೇ ಸ್ಥಳೀಯ ಕೆಫೆಯಲ್ಲಿ ಕಾಲಹರಣ ಮಾಡುತ್ತಿರುತ್ತಾನೆ. ಪರಾನ್ಯಾ ಹೇಗೋ ಆ ಹಳ್ಳಿಯವಳಾಗುತ್ತಾಳೆ. ಅಲ್ಲಿಯ ಪಡ್ಡೆ ಹುಡುಗರಿಗೆ ಅವಳನ್ನು ಪೀಡಿಸುವುದೇ ಒಂದು ಕೆಲಸ. ಒಂದು ದಿನ ಕಿರುಕುಳದಿಂದ ಪಾರಾಗಲು ಓಡುತ್ತ ಹೋಗಿ ಸ್ಟ್ಯಾಲಿನ್‍ನ ಪ್ರತಿಮೆಯೊಂದರ ಪಕ್ಕಕ್ಕೆ ನಿಂತುಕೊಳ್ಳುತ್ತಾಳೆ. ಜನರ ಒಂದು ಗುಂಪೇ ಬಂದು ತಮಾಷೆ ನೋಡುತ್ತಿದೆ. ಅಷ್ಟರಲ್ಲಿ ಪುಟ್ಟಹುಡುಗಿಯೊಬ್ಬಳು ಅವಳನ್ನು ‘ಸ್ಟಾಲಿನ್‍ನ ಹೆಂಡತಿ’ ಎಂದು ಕರೆದುಬಿಡುತ್ತಾಳೆ. ಅಲ್ಲಿಂದ ಪ್ರಾರಂಭವಾಗುವುದು ಅವಳ ನರಕಯಾತನೆ. ಅಧಿಕಾರಿಗಳು ಅವಳೊಬ್ಬ ಗೂಢಚಾರಿ ಎನ್ನುವ ಸಂಶಯದ ಮೇಲೆ ಬಂಧಿಸಿ ಚಿತ್ರಹಿಂಸೆ ನೀಡುತ್ತಾರೆ. ಆದರೆ ಅವಳಿಂದ ಯಾವ ಮಾಹಿತಿಯೂ ಹೊರಬರುವುದಿಲ್ಲ ಆಗ ಅವಳನ್ನು ಬಿಡುಗಡೆ ಮಾಡಿ, ಅವಳ ಚಲನವಲನಗಳಿಂದ ಮಾಹಿತಿ ಸಿಗಬಹುದು ಎನ್ನುವ ಲೆಕ್ಕಾಚಾರದ ಮೇಲೆ ಅವಳ ಮೇಲೆ ಕಣ್ಣಿಟ್ಟಿರುತ್ತಾರೆ. ಹಿತ್ರಹಿಂಸೆಯನ್ನು ಅನುಭವಿಸಿದ ಪರಾನ್ಯಾಳ ಮಾನಸಿಕ ಸ್ಥಿಮಿತ ಇನ್ನಷ್ಟು ಹದಗೆಟ್ಟಿ, ತನಗೆ ಚಿತ್ರಹಿಂಸೆ ನೀಡಿದಾಗ ಪದೇ ಪದೇ ಕೇಳಿದ ಪದಗಳಾದ ‘ಗೂಢಚಾರ’ ‘ದೇಶದ್ರೋಹಿ’ ಎಂದು ಕಂಡಕಂಡವರನ್ನು ನೋಡಿ ಕರೆಯತೊಡಗುತ್ತಾಳೆ. ಅವಳು ಹೆಸರಿಸಿದ ವ್ಯಕ್ತಿಗಳನ್ನು ಪೊಲೀಸರು ಬಂಧಿಸತೊಡಗಿದಾಗ ಇಡೀ ಊರೇ ಪ್ರಕ್ಷುಬ್ದಗೊಳ್ಳುತ್ತದೆ. ಆಗ ಏನಾದರೂ ಮಾಡಲೇಬೇಕು ಎನ್ನುವ ಸ್ಥಿತಿಗೆ ಬಂದುನಿಂತ ಊರಲ್ಲಿ ಜೋಕ್ರ್ಯಾ ಮಾತ್ರ ಈ ಸಮಸ್ಯೆಯನ್ನು ಪರಿಹರಿಸಬಲ್ಲ.

ಇದು ಹಂಗೇರಿಯದ ಚಿತ್ರನಿರ್ದೇಶಕ ಪೀಟರ್ ಬಾಷೋ 1990 ರಲ್ಲಿ ನಿರ್ದೇಶಿಸಿದ ‘ಸ್ಟ್ಯಾಲಿನ್’ಸ್ ಬ್ರೈಡ್’ ಎನ್ನುವ ಚಿತ್ರದ ಸಾರಾಂಶ.

ಒಂದು ಕಛೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬಳ ನರ್ವಸ್ ಬ್ರೆಕ್‍ಡೌನ್ ಆಗಿ, ತನ್ನೆಲ್ಲ ಬಟ್ಟೆಗಳನ್ನು ಕಳಚಿ ಬೆತ್ತಲೆಯಾಗಿ ರಸ್ತೆಯಲ್ಲಿ ನಡೆಯತೊಡುತ್ತಾಳೆ. ತನ್ನಪಾಡಿಗೆ ತಾನು ಆಸ್ಪತ್ರೆಗೆ ಹೋಗುತ್ತಿದ್ದ ಯುವವೈದ್ಯನೊಬ್ಬ ಇವಳನ್ನು ನೋಡಿ ತನ್ನ ಓವರ್‍ಕೋಟನ್ನು ಅವಳಿಗೆ ಧರಿಸುತ್ತಾನೆ. ತಾನು ಮಾಡಿದ ಈ ಪುಟ್ಟ ಕ್ರಿಯೆಯಿಂದ ಆಗುವ ಪರಿಣಾಮಗಳ ಯಾವುದೇ ಅರಿವಿಲ್ಲದೇ ಆ ವೈದ್ಯ ಮುಂದೆ ಸಾಗುತ್ತಾನೆ. ಆದರೆ ಅವನು ತನ್ನ ಓವರ್‍ಕೋಟನ್ನು ಆ ಬಡಪಾಯಿ ಹೆಣ್ಣುಮಗಳಿಗೆ ಕೊಟ್ಟ ಸ್ಥಳ ಆ ದೇಶದ ಆಳ್ವಿಕೆಯ ವಿರುದ್ಧ ಪ್ರತಿಭಟನೆ ಮಾಡುವವರ ತಾಣ. ಯುವವೈದ್ಯನ ಈ ಒಂದು ಪುಟ್ಟ ಕ್ರಿಯೆಯನ್ನೂ ಪ್ರತಿಭಟನೆಯ ಸಂಕೇತವೆಂದೇ ಅರ್ಥೈಸಿಕೊಳ್ಳುವ ಅಲ್ಲಿಯ ಅಧಿಕಾರಿಗಳು ಆ ವೈದ್ಯನನ್ನು ಬಂಧಿಸಿ, ತನಿಖೆಗೆ ಒಳಪಡಿಸುತ್ತಾರೆ. ಅಲ್ಲಿಂದ ಆ ವೈದ್ಯ ತನ್ನ ಜೀವನವನ್ನು ಹೊಸದಾಗಿ ಕಂಡಿಕೊಳ್ಳಬೇಕಾಗುತ್ತದೆ.

ಇದು ಪೀಟರ್ ಬಾಷೋ ಅವರ ‘ಬನಾನಾ ಸ್ಕಿನ್ ವಾಲ್ಟ್ಜ್’ (1987) ಚಿತ್ರದ ಸಾರಾಂಶ.

1928ರಲ್ಲಿ ಆಗಿನ ಚೆಕೊಸ್ಲೋವೇಕಿಯಾದಲ್ಲಿ ಹುಟ್ಟಿದ ಪೀಟರ್ ಬಾಷೋ, ಹಂಗರಿಯಾದ ಸಿನೆಮಾ ಮತ್ತು ನಾಟಕದ ಶಾಲೆಯಲ್ಲಿ ಪದವಿ ಪಡೆದುಕೊಂಡರು. ಎರಡನೇ ಮಹಾಯುದ್ಧದಲ್ಲಿ ಆದ ಸಾವು ನೋವುಗಳು, ಮಹಾಯುದ್ಧದ ನಂತರ ಹಂಗರಿ ದೇಶ ರಷಿಯಾದ ಸೆಟಲೈಟ್ ಸ್ಟೇಟ್ ಆಗಿ ಮುಂದುವರೆದದ್ದು, ಹೊಸ ಸಮಾಜವಾದಿ ವ್ಯವಸ್ಥೆಯ ಕಟ್ಟುನಿಟ್ಟುಗಳಿಗೆ ಸಾಕ್ಷಿಯಾಗಿದ್ದ ಪೀಟರ್ ಬಾಷೊ ಜೀವನದುದ್ದಕ್ಕೂ ಹೆಚ್ಚಾಗಿ ರಾಜಕೀಯ ಸಿನೆಮಾಗಳನ್ನೇ ಮಾಡಿದರು. 1969 ರಲ್ಲಿ ಅವರು ಮಾಡಿದ ಚಿತ್ರ ‘ದಿ ವಿಟ್ನೆಸ್’ನಲ್ಲಿ ಹಂಗರಿಯ ಕಮ್ಯುನಿಸ್ಟ್ ಕ್ರಾಂತಿಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿ ತನ್ನ ಊರಿನ ಚರಂಡಿ, ನೀರಿನ ಹರಿವುಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಅವನು ತನ್ನ ಮನೆಯಲ್ಲಿ ಅಡುಗೆಗಾಗಿ ಹಂದಿಯೊಂದನ್ನು ಕೊಯ್ಯುತ್ತಾನೆ. ಹಂಗರಿಯಲ್ಲಿ ಆಗ ಅದು ನಿಷಿದ್ಧ. ಯಾರಿಗೂ ಗೊತ್ತಾಗಬಾರದು ಎಂದು ಎಷ್ಟೇ ಲಕ್ಷ ವಹಿಸಿದ್ದರೂ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಳ್ಳುತ್ತಾನೆ. ಅವನನ್ನು ಬಂಧಿಸಿದ ನಂತರ ಶಿಕ್ಷೆಯಾಗುವ ಬದಲು ಬೇರೊಂದು ಊರಲ್ಲಿ ಉನ್ನತ ಕೆಲಸಕ್ಕೆ ನೇಮಿಸಲಾಗುತ್ತದೆ. ಏಕೆ ಎಂದು ಅವನಿಗೆ ತಿಳಿಯದು, ಒಂದು ಸಲ ನ್ಯಾಯಧೀಶನ ಮುಂದೆ ಬಂದು ನಿಲ್ಲಬೇಕಾದಲ್ಲಿ ತನ್ನ ಎಲ್ಲ ಸತ್ಯಗಳನ್ನು ಹೇಳಿಬಿಡುತ್ತಾನೆ. ಅದರಿಂದ ಅವನಿಗೆ ಮರಣದಂಡನೆ

ವಿಧಿಸಬೇಕೆಂದು ತೀರ್ಪು ಬರುತ್ತದೆ ಆದರೆ ಮರಣೆದಂಡನೆ ಜಾರಿಗೊಳ್ಳಬೇಕಾದ ಸಮಯದಲ್ಲಿಯೇ ರಾಜಕೀಯ ಪರಿಸ್ಥಿತಿ ಬದಲಾಯಿಸುತ್ತವೆ. ‘ದಿ ವಿಟ್ನೆಸ್’ ಎನ್ನುವ ಈ ಚಿತ್ರವನ್ನು ಆ ದೇಶದ ಸರಕಾರವೇ ನಿರ್ಮಿಸಿತ್ತು ಆದರೆ ಬಿಡುಗಡೆಯ ಮುಂಚೆಯೇ ಚಿತ್ರವನ್ನು ನಿಷೇಧಿಸಿತು. ಈ ಚಿತ್ರ ವಿದೇಶಗಳಲ್ಲಿ ಬಿಡುಗಡೆಯಾಗಿ ಪ್ರಸಿದ್ಧಿ ಮಾಡಿದ ನಂತರವೇ ಹಂಗೇರಿಯ ಕಮ್ಯನಿಸ್ಟ್ ಸರಕಾರ ನಿಷೇಧವನ್ನು ವಾಪಸ್ ತೆಗೆದುಕೊಂಡಿತು. ಬಾಷೋ ಅವರ ಚಿತ್ರಗಳಲ್ಲಿ ಕಮ್ಯನಿಸ್ಟ್ ಆಡಳಿತದ ಕೊರತೆಗಳನ್ನು ಪ್ರಶ್ನಿಸುತ್ತಾರೆಯೇ ಹೊರತು ಕಮ್ಯೂನಿಸಂ ಅನ್ನು ಅಲ್ಲ. ಹಾಗೂ ಅವರೆಲ್ಲ ಚಿತ್ರಗಳು ಎಷ್ಟೇ ಗಂಭೀರ ವಿಷಯಗಳನ್ನೆತ್ತಿಕೊಂಡರೂ ಚಿತ್ರದುದ್ದಕ್ಕೂ ಹಾಸ್ಯ, ದುರಂತದ ವಿಡಂಬನೆಯೇ ಎದ್ದುಕಾಣುತ್ತವೆ. ಕಮ್ಯನಿಸಂ ಬಗ್ಗೆ, ಅದರ ಇತಿಹಾಸದ ಬಗ್ಗೆ ಅನೇಕ ಅಧ್ಯಯನಗಳು ನಮಗೆ ಲಭ್ಯವಿವೆ ಆದರೆ ಕ್ರಾಂತಿಯ ನಂತರ ಅಲ್ಲಿಯ ಸಬ್‍ಆಲ್ಟರ್ನ್ ಇತಿಹಾಸದ ಬಗ್ಗೆ ತಿಳಿಯಬೇಕಾದರೆ ನಾವು ಸಾಹಿತ್ಯ, ಸಿನೆಮಾಗಳನ್ನೇ ನೆಚ್ಚಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪೀಟರ್ ಬಾಷೋ ಮಹತ್ವದ ಚಿತ್ರ ಬರಹಗಾರ ಮತ್ತು ನಿರ್ದೇಶಕ.

ಸಿನೆಮಾ ನಿರ್ದೇಶನದ ಕೌಶಲ್ಯದ ಪ್ರಶ್ನೆ ಬಂದಾಗಲೂ ಪೀಟರ್ ಬಾಷೋ ನಂತಹ ನಿರ್ದೇಶಕರು ಗೆಲ್ಲುತ್ತಾರೆ ಎಂದು ನನಗನಿಸುತ್ತದೆ. ಏಕೆಂದರೆ ಅವರ ಚಿತ್ರಗಳಲ್ಲಿ ನಮಗೆ ಕಾಣಿಸುವುದು, ಮನಕ್ಕೆ ತಟ್ಟುವುದು ಆಯಾ ಕಥೆಗಳು, ಪಾತ್ರಗಳು, ಪಾತ್ರಗಳು ನೋವು ನಲಿವು ಅದರೊಂದಿಗೆ ಆಯಾ ಸಾಮಾಜಿಕ ಪರಿಸರದ ಚಿತ್ರಣ ಮತ್ತು ಅವರು ಕೇಳುವ ಪ್ರಶ್ನೆಗಳೇ ಹೊರತು ಎಲ್ಲಿಯೂ ನಮಗೆ ನಿರ್ದೇಶಕÀ ಅಥವಾ ಛಾಯಗ್ರಹಕÀ ಕಾಣಿಸಿಕೊಳ್ಳುವುದಿಲ್ಲ. ಒಂದು ಉತ್ತಮ ಚಿತ್ರದ ಕರುಹು ಇದೇ ತಾನೇ?

ವಿಶ್ವದ ಅಂಡರ್‍ರೇಟೆಡ್ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುವ ಪೀಟರ್ ಬಾಷೋ ತಮ್ಮ ಚಲನಚಿತ್ರ ನಿರ್ದೇಶನದ ಸುಧೀರ್ಘ ಜೀವನವನ್ನು ಮುಗಿಸಿ 2009ರಲ್ಲಿ ತಮ್ಮ 81ನೇ ವಯಸ್ಸಿನಲ್ಲಿ ತೀರಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...