Homeಸಾಹಿತ್ಯ-ಸಂಸ್ಕೃತಿಕಥೆಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

ಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

- Advertisement -
- Advertisement -

| ಇಸ್ಮತ್ ಪಜೀರ್ |

ಭೀಷ್ಮ ಒಮ್ಮೆ ನಡೆದುಕೊಂಡು ಹೋಗುತ್ತಿರುವಾಗ ಆತನ ಊರುಗೋಲಿನಡಿಗೆ ಸಿಲುಕಿದ ಓತಿಕ್ಯಾತವೊಂದು ಅಪ್ಪಚ್ಚಿಯಾಗುತ್ತದೆ. ಹಾಗೆ ವಿಲವಿಲನೆ ಒದ್ದಾಡುತ್ತಿರುವ ಓತಿಕ್ಯಾತನ ಮೇಲೆ ಕಿಂಚಿತ್ತೂ ಕರುಣೆ ತೋರದೇ ಭೀಷ್ಮ ಅದನ್ನು ತನ್ನ ಊರಿಗೋಲಿನ ತುದಿಯಲ್ಲೇ ಎತ್ತಿ ಮುಳ್ಳಿನ ಗಿಡವೊಂದರ ಮೇಲೆ ಎಸೆಯುತ್ತಾನೆ. ಅಸಹಾಯಕ ಓತಿಕ್ಯಾತ ಭೀಷ್ಮ ನಿಗೆ ನೀನು ಶರಶಯ್ಯೆಯಲ್ಲೇ ಒದ್ದಾಡಿ ಪ್ರಾಣ ಬಿಡುವಂತಾಗಲಿ ಎಂದು ಶಾಪ ಹಾಕುತ್ತದೆ. ಓತಿಕ್ಯಾತನ ಶಾಪವೇ ಭೀಷ್ಮನಿಗೆ ಶರಶಯ್ಯೆಯ ಮರಣ ತಂದಿದೆ ಎಂಬುವುದೂ ಕನ್ನಡದ ಜನಪದರ ನಂಬುಗೆ.

ಮಹಾಭಾರತದ ಭೀಷ್ಮ ತನ್ನ ಶಿಷ್ಯಂದಿರ ಪಟ್ಟವನ್ನು ಖಾಯಂಗೊಳಿಸುವ ಕನಸ ಹೊತ್ತವನಾಗಿದ್ದರೆ…
ಬಿಜೆಪಿಯ ಭೀಷ್ಮ ಸ್ವತಃ ತಾನೇ ರಾಜನಾಗುವ ಕನಸು ಹೊತ್ತಿದ್ದವರು. ಮಹಾಭಾರತದ ಭೀಷ್ಮ ಹೇಗೆ ಕೊನೆಗೂ ತನ್ನ ಶಿಷ್ಯಂದಿರ ಪಟ್ಟ ಉಳಿಸಲು ಸಾಧ್ಯವಾಗಲಿಲ್ಲವೋ… ಹಾಗೆಯೇ ಬಿಜೆಪಿಯ ಭೀಷ್ಮನೂ ತನ್ನ ಕನಸನ್ನು ಸಾಕಾರಗೊಳಿಸಿ ಪಟ್ಟವೇರಲು ಸಾಧ್ಯವಾಗದಿದ್ದುದು ಪುರಾಣ ಮತ್ತು ವರ್ತಮಾನದ ಕ್ರೂರ ವ್ಯಂಗ್ಯವೇ ಸರಿ.

ಇದೀಗ‌ ಬಿಜೆಪಿಯ ಭೀಷ್ಮ ‌ಅಡ್ವಾಣಿಯದ್ದೂ‌ ಮಹಾಭಾರತದ ಭೀಷ್ಮನದ್ದೇ ಸ್ಥಿತಿ. ಇಂದು ಅಡ್ವಾಣಿ ಎಷ್ಟೇ‌‌ ಸುಭಗನಂತೆ ನಟಿಸಲಿ. ಅಡ್ವಾಣಿಗೆ ಅವರ ಪಾಪದ ಫಲ ದೊರೆಯುತ್ತಿದೆ ಎಂದಷ್ಟೇ ಇಂದಿನ‌ ಅವರ ದಯನೀಯ ಸ್ಥಿತಿಯನ್ನು ವಿಶ್ಲೇಷಿಸುವುದು ಹೆಚ್ಚು ಸೂಕ್ತ.

ಅಡ್ವಾಣಿ ತನ್ನ ರಾಜಕೀಯ ಏಳಿಗೆಗಾಗಿ ಮಾಡಿದ ಕೃತ್ಯಗಳು ಕಡಿಮೆ ಕ್ರೌರ್ಯಯದ್ದೇನಲ್ಲ. ಸ್ವತಃ ತಾನು ಕ್ರೌರ್ಯ ಮಾಡಿಸಿದ್ದಲ್ಲದೇ, ತನ್ನ ಶಿಷ್ಯಂದಿರಾದ ಕೌರವರು ಮಾಡಿದ ಕ್ರೌರ್ಯಕ್ಕೆ ಬೀಷ್ಮ ಮೌನಸಮ್ಮತಿ ನೀಡಿ ಒಳಗೊಳಗೇ ನಕ್ಕಂತೆ… ತನ್ನ ಶಿಷ್ಯಂದಿರಾದ ಮೋದಿ- ಶಾ ಜೋಡಿ ಗುಜರಾತಿನಲ್ಲಿ ಮಾಡಿದ ಅಮಾನವೀಯ ಬರ್ಬರ ಕೃತ್ಯಕ್ಕೆ ಇಂದು ತನ್ನ ರಾಜಕೀಯ ಬದುಕಿನ ಶರಶಯ್ಯೆಯಲ್ಲಿ ಮಲಗಿರುವ ಬಿಜೆಪಿಯ ಬೀಷ್ಮ ಪಿತಾಮಹ ಅಡ್ವಾಣಿ ಒಳಗೊಳಗೇ ನಗುತ್ತಾ ಮೌನ ಸಮ್ಮತಿ ನೀಡಿದ್ದು ಇತಿಹಾಸದ ಪುಟ ಸೇರುವಷ್ಟು ಹಳತಾಗಿಲ್ಲ.

ಮಹಾಭಾರತದ ಬೀಷ್ಮನಿಗೆ ಓತಿಕ್ಯಾತನ ಶಾಪವೆಂದು ಜನಪದರು ನಂಬಿದರೆ, ನಮ್ಮ ಕಾಲದ ರಾಜಕೀಯ ಬೀಷ್ಮನಿಗೆ ಎರಡೆರಡು ಶಾಪವಿದೆ. ಒಂದನೆಯದಾಗಿ ರಾಮ ಜನ್ಮ ಭೂಮಿಯ ಹೆಸರಲ್ಲಿ ದೇಶದ ಉದ್ದಗಲದ ಚರಂಡಿಗಳಲ್ಲಿ ಮಾನವ ರಕ್ತದ ಕೋಡಿ ಹರಿಸಿದ್ದರ ಶಾಪ. ಎರಡನೆಯದಾಗಿ ತನ್ನ ಶಿಷ್ಯಂದಿರ ಬರ್ಬರತೆಗೆ ಮೌನ ಸಮ್ಮತಿ ಸೂಚಿಸುತ್ತಾ, ಮಹಾಭಾರತದ ಭೀಷ್ಮ ಓತಿಕ್ಯಾತನ ಸಾವನ್ನು ಆನಂದಿಸಿದಂತೆ ಗುಜರಾತಿನ ಅಮಾಯಕ ಮುಸ್ಲಿಮರ ಸಾವನ್ನು ಆನಂದಿಸಿದುದರ ಶಾಪ.

ಮೊದಲನೆಯದಾಗಿ ನಮ್ಮ ತುಳನಾಡಿನ ಜನಪದರ ನಂಬಿಕೆಯಂತೆ ತಲೆಗೆ ಹಾಕಿದ ನೀರು ಕಾಲಿಗೆ ಬರಲೇಬೇಕು…
ಎರಡನೆಯದಾಗಿ ನಮ್ಮ ಕನ್ನಡದ ಗಾದೆಯಂತೆ ಮಾಡಿದ್ದುಣ್ಣೋ ಮಹರಾಯ.

ಬಿಜೆಪಿಯ ಭೀಷ್ಮನ ಈ ಸ್ಥಿತಿಗೆ ಇದಕ್ಕಿಂತ ಬೇರೆ ಕಾರಣ ಬೇಕೇ….?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...