Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...