Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...