Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...