Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...