Homeರಾಜಕೀಯಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

- Advertisement -
- Advertisement -

ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು ಕಕ್ಕುತ್ತ ಸಾಗಿದೆ.
ಮಿಥ್ಯ: ‘ಪಾನಮತ್ತ ನಾಯಕಿ ಕಾಂಗ್ರೆಸ್‍ಗೆ ಹೊಸ ಭರವಸೆ ಇರಬಹುದು, ಆದರೆ ಈ ದೇಶದ ಜನರಿಗಲ್ಲ’ ಎಂಬ ಕ್ಯಾಪ್ಸನ್‍ನೊಂದಿಗೆ ಪ್ರಿಯಾಂಕಾ ಗಾಂಧಿಯ ಒಂದು ವಿಡಿಯೋವನ್ನು ಫೇಸ್‍ಬುಕ್, ವ್ಯಾಟ್ಸಾಪ್, ಟ್ವಿಟರ್‍ಗಳಲ್ಲಿ ಅಮಲೇರಿದ ‘ಭಕ್ತರು’ ತೇಲಿಬಿಟ್ಟಿದ್ದಾರೆ. ‘humlog’ ಎನ್ನುವ ಫೇಸ್‍ಬುಕ್ ಈ ಸುದ್ದಿ ಮೂಲವಾಗಿದ್ದು, ಇದಕ್ಕೆ ಈಗ 98 ಸಾವಿರಕ್ಕೂ ಹೆಚ್ಚು ವ್ಯೂವ್‍ಗಳಿದ್ದು, 3,800ಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಹಮಲೋಗ್ ಫೇಸಬುಕ್ ಪೇಜ್‍ನ ವಿಕೃತ ಬುದ್ಧಿ

ವಿಮಲ್ ಶರ್ಮಾ ಎಂಬ ವ್ಯಕ್ತಿಯ ಫೇಸ್‍ಬುಕ್ ಪೇಜ್ ಕೂಡ ಇದನ್ನೇ ಹರಡುತ್ತ, ‘ಪ್ರತಿದಿನ ಸಂಜೆ ಕುಡಿಯುವವರ ಮೇಲೆ ಕಾಂಗ್ರೆಸ್‍ಗೆ ಭರವಸೆ ಇರಬಹುದು, ದೇಶದ ಜನರಿಗಲ್ಲ. ಒಬ್ಬ ಮದ್ಯವ್ಯಸನಿ ನಾಯಕಿಯಾಗಲು ಸಾಧ್ಯವಿಲ್ಲ….’ ಎಂದೆಲ್ಲ ಬರೆಯಲಾಗಿದೆ.
ಸತ್ಯ: ಇದು ವಿಕೃತ ಮನಸ್ಸಿನ ಬಲಪಂಥಿಯರ ಕೆಲಸವೇ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಪ್ರಚಲಿತದಲ್ಲಿರುವ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಸಿಟ್ಟಿನಿಂದ ಗದರಿದ್ದು ನಿಜ. ಆದರೆ, ಈ ವಿಡಿಯೋ 9 ತಿಂಗಳ ಹಳೆಯದಾಗಿದ್ದು, ಇದನ್ನು ಏಪ್ರಿಲ್ 18, 2018ರಂದು ಎಎನ್‍ಐ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ‘ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಕೋಪಿತರಾದ ಪ್ರಿಯಾಂಕಾ ಗಾಂಧಿ’ ಎಂಬ ಕ್ಯಾಪ್ಸನ್ ನೀಡಲಾಗಿದ್ದು, ‘ಪರೆಸ್ಪರ ತಳ್ಳಾಡಬೇಡಿ. ನೀವು ಯಾವ ಕಾರಣಕ್ಕೆ ಇಲ್ಲಿ ಸೇರಿದ್ದಿರಿ ಎಂಬುದು ನಿಮಗೆ ಅರಿವಿರಲಿ. ನಿಮಗೆ ಸರಿಯಾಗಿ ವರ್ತಸಲಾಗದಿದ್ದರೆ ಮನೆಗೆ ಹೋಗಿ. ಈಗ ಎಲ್ಲರೂ ಅಲ್ಲಿವರೆಗೆ ಸಾಲಾಗಿ ಸಂಯಮದಿಂದ ನಡೆಯಿರಿ’ ಎಂದು ಗದರಿದರು ಎಂದು ವಿವರಿಸಲಾಗಿದೆ.
ಕಥುವಾ ಮತ್ತು ಉನ್ನಾವೊ ರೇಪ್ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಮಧ್ಯರಾತ್ರಿಯ

ವಿಮಲ್ ಶರ್ಮಾ ಎನ್ನುವ ಕೊಳಕನ ಫೇಕ್ ಪೋಸ್ಟ್

ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿನ ಘಟನೆಯಿದು. ಆನರು ಏಕಾಏಕಿ ತಳ್ಳಾಟ ಆರಂಭಿಸಿದಾಗ, ಪ್ರಿಯಾಂಕಾ ಗಾಂಧಿ ಮೇಲಿನಂತೆ ಗದರಿದ್ದಾರೆ. ಈ ಘಟನೆಯನ್ನು ಇಂಡಿಯಾ ಟುದೇ, ಹಿಂದೂಸ್ತಾನ್ ಟೈಮ್ಸ್‍ಗಳು ಕೂಡ ವರದಿ ಮಾಡಿದ್ದವಲ್ಲದೇ ಜನರ ನೂಕಾಟ, ಕಿಡಿಗೇಡಿತನ ತಡೆಯಲು ಪೊಲೀಸರೂ ಶ್ರಮ ಪಡಬೇಕಾಗಿತು. ತಳ್ಳಾಟದಲ್ಲಿ ಪ್ರಿಯಾಂಕಾರ ಮಕ್ಕಳನ್ನೂ ನೂಕಲಾಗಿತ್ತು. ಪಾನಮತ್ತರಾಗಿದ್ದ ಕೆಲವರು ಬ್ಯಾರಿಕೇಡ್‍ಗಳನ್ನು ಕೀಳಲೂ ಯತ್ನಿಸಿದರು ಎಂದು ವರದಿ ಮಾಡಲಾಗಿತ್ತು.
ವಿಡಿಯೋ ವಿಳಾಸ: https://twitter.com/i/status/984515031621668864

ಇದು ಅಸಲಿ ಸತ್ಯ. ಆದರೆ ಕೊಳಕು ಬುದ್ಧಿಯ ಭಕ್ತರು ಈ ವಿಡಿಯೋಕ್ಕೆ ಅವಹೇಳನದ ಕ್ಯಾಪ್ಸನ್ ಹಾಕಿ ಸುಳ್ಳು ಕತೆಯನ್ನು ಹರಡತೊಡಗಿದ್ದಾರೆ. ಕರ್ನಾಟಕದಲ್ಲಿ ವಿಕೃತ ವಿಷಭಟ್ಟನೂ ಕೂಡ ಗೌರಿ ಲಂಕೇಶರ ಕೊಲೆಯ ನಂತೆ ಇದೇ ಮಾದರಿಯಲ್ಲಿ ತನ್ನ ಹಲ್ಕಾ ಬುದ್ಧಿ ತೋರಿಸಿದ್ದ. ಈಗ ಈತನನ್ನು ಹಂಪಿ ಕನ್ನಡ ವಿವಿ ಕಾರ್ಯಕ್ರಮಕ್ಕೆ ಬರದಂತೆ ಓಡಿಸಲಾಗಿದೆ.
ಪ್ರಿಯಾಂಕಾ ಕುರಿತ ಮೇಲಿನ ಫೇಕ್‍ಸ್ಟೋರಿಯನ್ನು ಅಲ್ಟ್‍ನ್ಯೂಸ್, ಡೆಬ್‍ಕೂಪ್, ಬಿಬಿಸಿ (ಹಿಂದಿ)ಗಳು ಬಸ್ರ್ಟ್ ಮಾಡಿದ್ದು ‘ಭಕ್ತರ’ ವಿತಂಡ ಬುದ್ದಿಯನ್ನು ತೆರೆದು ಇಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...