Homeರಾಜಕೀಯಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

- Advertisement -
- Advertisement -

ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು ಕಕ್ಕುತ್ತ ಸಾಗಿದೆ.
ಮಿಥ್ಯ: ‘ಪಾನಮತ್ತ ನಾಯಕಿ ಕಾಂಗ್ರೆಸ್‍ಗೆ ಹೊಸ ಭರವಸೆ ಇರಬಹುದು, ಆದರೆ ಈ ದೇಶದ ಜನರಿಗಲ್ಲ’ ಎಂಬ ಕ್ಯಾಪ್ಸನ್‍ನೊಂದಿಗೆ ಪ್ರಿಯಾಂಕಾ ಗಾಂಧಿಯ ಒಂದು ವಿಡಿಯೋವನ್ನು ಫೇಸ್‍ಬುಕ್, ವ್ಯಾಟ್ಸಾಪ್, ಟ್ವಿಟರ್‍ಗಳಲ್ಲಿ ಅಮಲೇರಿದ ‘ಭಕ್ತರು’ ತೇಲಿಬಿಟ್ಟಿದ್ದಾರೆ. ‘humlog’ ಎನ್ನುವ ಫೇಸ್‍ಬುಕ್ ಈ ಸುದ್ದಿ ಮೂಲವಾಗಿದ್ದು, ಇದಕ್ಕೆ ಈಗ 98 ಸಾವಿರಕ್ಕೂ ಹೆಚ್ಚು ವ್ಯೂವ್‍ಗಳಿದ್ದು, 3,800ಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಹಮಲೋಗ್ ಫೇಸಬುಕ್ ಪೇಜ್‍ನ ವಿಕೃತ ಬುದ್ಧಿ

ವಿಮಲ್ ಶರ್ಮಾ ಎಂಬ ವ್ಯಕ್ತಿಯ ಫೇಸ್‍ಬುಕ್ ಪೇಜ್ ಕೂಡ ಇದನ್ನೇ ಹರಡುತ್ತ, ‘ಪ್ರತಿದಿನ ಸಂಜೆ ಕುಡಿಯುವವರ ಮೇಲೆ ಕಾಂಗ್ರೆಸ್‍ಗೆ ಭರವಸೆ ಇರಬಹುದು, ದೇಶದ ಜನರಿಗಲ್ಲ. ಒಬ್ಬ ಮದ್ಯವ್ಯಸನಿ ನಾಯಕಿಯಾಗಲು ಸಾಧ್ಯವಿಲ್ಲ….’ ಎಂದೆಲ್ಲ ಬರೆಯಲಾಗಿದೆ.
ಸತ್ಯ: ಇದು ವಿಕೃತ ಮನಸ್ಸಿನ ಬಲಪಂಥಿಯರ ಕೆಲಸವೇ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಪ್ರಚಲಿತದಲ್ಲಿರುವ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಸಿಟ್ಟಿನಿಂದ ಗದರಿದ್ದು ನಿಜ. ಆದರೆ, ಈ ವಿಡಿಯೋ 9 ತಿಂಗಳ ಹಳೆಯದಾಗಿದ್ದು, ಇದನ್ನು ಏಪ್ರಿಲ್ 18, 2018ರಂದು ಎಎನ್‍ಐ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ‘ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಕೋಪಿತರಾದ ಪ್ರಿಯಾಂಕಾ ಗಾಂಧಿ’ ಎಂಬ ಕ್ಯಾಪ್ಸನ್ ನೀಡಲಾಗಿದ್ದು, ‘ಪರೆಸ್ಪರ ತಳ್ಳಾಡಬೇಡಿ. ನೀವು ಯಾವ ಕಾರಣಕ್ಕೆ ಇಲ್ಲಿ ಸೇರಿದ್ದಿರಿ ಎಂಬುದು ನಿಮಗೆ ಅರಿವಿರಲಿ. ನಿಮಗೆ ಸರಿಯಾಗಿ ವರ್ತಸಲಾಗದಿದ್ದರೆ ಮನೆಗೆ ಹೋಗಿ. ಈಗ ಎಲ್ಲರೂ ಅಲ್ಲಿವರೆಗೆ ಸಾಲಾಗಿ ಸಂಯಮದಿಂದ ನಡೆಯಿರಿ’ ಎಂದು ಗದರಿದರು ಎಂದು ವಿವರಿಸಲಾಗಿದೆ.
ಕಥುವಾ ಮತ್ತು ಉನ್ನಾವೊ ರೇಪ್ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಮಧ್ಯರಾತ್ರಿಯ

ವಿಮಲ್ ಶರ್ಮಾ ಎನ್ನುವ ಕೊಳಕನ ಫೇಕ್ ಪೋಸ್ಟ್

ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿನ ಘಟನೆಯಿದು. ಆನರು ಏಕಾಏಕಿ ತಳ್ಳಾಟ ಆರಂಭಿಸಿದಾಗ, ಪ್ರಿಯಾಂಕಾ ಗಾಂಧಿ ಮೇಲಿನಂತೆ ಗದರಿದ್ದಾರೆ. ಈ ಘಟನೆಯನ್ನು ಇಂಡಿಯಾ ಟುದೇ, ಹಿಂದೂಸ್ತಾನ್ ಟೈಮ್ಸ್‍ಗಳು ಕೂಡ ವರದಿ ಮಾಡಿದ್ದವಲ್ಲದೇ ಜನರ ನೂಕಾಟ, ಕಿಡಿಗೇಡಿತನ ತಡೆಯಲು ಪೊಲೀಸರೂ ಶ್ರಮ ಪಡಬೇಕಾಗಿತು. ತಳ್ಳಾಟದಲ್ಲಿ ಪ್ರಿಯಾಂಕಾರ ಮಕ್ಕಳನ್ನೂ ನೂಕಲಾಗಿತ್ತು. ಪಾನಮತ್ತರಾಗಿದ್ದ ಕೆಲವರು ಬ್ಯಾರಿಕೇಡ್‍ಗಳನ್ನು ಕೀಳಲೂ ಯತ್ನಿಸಿದರು ಎಂದು ವರದಿ ಮಾಡಲಾಗಿತ್ತು.
ವಿಡಿಯೋ ವಿಳಾಸ: https://twitter.com/i/status/984515031621668864

ಇದು ಅಸಲಿ ಸತ್ಯ. ಆದರೆ ಕೊಳಕು ಬುದ್ಧಿಯ ಭಕ್ತರು ಈ ವಿಡಿಯೋಕ್ಕೆ ಅವಹೇಳನದ ಕ್ಯಾಪ್ಸನ್ ಹಾಕಿ ಸುಳ್ಳು ಕತೆಯನ್ನು ಹರಡತೊಡಗಿದ್ದಾರೆ. ಕರ್ನಾಟಕದಲ್ಲಿ ವಿಕೃತ ವಿಷಭಟ್ಟನೂ ಕೂಡ ಗೌರಿ ಲಂಕೇಶರ ಕೊಲೆಯ ನಂತೆ ಇದೇ ಮಾದರಿಯಲ್ಲಿ ತನ್ನ ಹಲ್ಕಾ ಬುದ್ಧಿ ತೋರಿಸಿದ್ದ. ಈಗ ಈತನನ್ನು ಹಂಪಿ ಕನ್ನಡ ವಿವಿ ಕಾರ್ಯಕ್ರಮಕ್ಕೆ ಬರದಂತೆ ಓಡಿಸಲಾಗಿದೆ.
ಪ್ರಿಯಾಂಕಾ ಕುರಿತ ಮೇಲಿನ ಫೇಕ್‍ಸ್ಟೋರಿಯನ್ನು ಅಲ್ಟ್‍ನ್ಯೂಸ್, ಡೆಬ್‍ಕೂಪ್, ಬಿಬಿಸಿ (ಹಿಂದಿ)ಗಳು ಬಸ್ರ್ಟ್ ಮಾಡಿದ್ದು ‘ಭಕ್ತರ’ ವಿತಂಡ ಬುದ್ದಿಯನ್ನು ತೆರೆದು ಇಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...