Homeರಾಜಕೀಯಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

- Advertisement -
- Advertisement -

ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು ಕಕ್ಕುತ್ತ ಸಾಗಿದೆ.
ಮಿಥ್ಯ: ‘ಪಾನಮತ್ತ ನಾಯಕಿ ಕಾಂಗ್ರೆಸ್‍ಗೆ ಹೊಸ ಭರವಸೆ ಇರಬಹುದು, ಆದರೆ ಈ ದೇಶದ ಜನರಿಗಲ್ಲ’ ಎಂಬ ಕ್ಯಾಪ್ಸನ್‍ನೊಂದಿಗೆ ಪ್ರಿಯಾಂಕಾ ಗಾಂಧಿಯ ಒಂದು ವಿಡಿಯೋವನ್ನು ಫೇಸ್‍ಬುಕ್, ವ್ಯಾಟ್ಸಾಪ್, ಟ್ವಿಟರ್‍ಗಳಲ್ಲಿ ಅಮಲೇರಿದ ‘ಭಕ್ತರು’ ತೇಲಿಬಿಟ್ಟಿದ್ದಾರೆ. ‘humlog’ ಎನ್ನುವ ಫೇಸ್‍ಬುಕ್ ಈ ಸುದ್ದಿ ಮೂಲವಾಗಿದ್ದು, ಇದಕ್ಕೆ ಈಗ 98 ಸಾವಿರಕ್ಕೂ ಹೆಚ್ಚು ವ್ಯೂವ್‍ಗಳಿದ್ದು, 3,800ಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಹಮಲೋಗ್ ಫೇಸಬುಕ್ ಪೇಜ್‍ನ ವಿಕೃತ ಬುದ್ಧಿ

ವಿಮಲ್ ಶರ್ಮಾ ಎಂಬ ವ್ಯಕ್ತಿಯ ಫೇಸ್‍ಬುಕ್ ಪೇಜ್ ಕೂಡ ಇದನ್ನೇ ಹರಡುತ್ತ, ‘ಪ್ರತಿದಿನ ಸಂಜೆ ಕುಡಿಯುವವರ ಮೇಲೆ ಕಾಂಗ್ರೆಸ್‍ಗೆ ಭರವಸೆ ಇರಬಹುದು, ದೇಶದ ಜನರಿಗಲ್ಲ. ಒಬ್ಬ ಮದ್ಯವ್ಯಸನಿ ನಾಯಕಿಯಾಗಲು ಸಾಧ್ಯವಿಲ್ಲ….’ ಎಂದೆಲ್ಲ ಬರೆಯಲಾಗಿದೆ.
ಸತ್ಯ: ಇದು ವಿಕೃತ ಮನಸ್ಸಿನ ಬಲಪಂಥಿಯರ ಕೆಲಸವೇ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಪ್ರಚಲಿತದಲ್ಲಿರುವ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಸಿಟ್ಟಿನಿಂದ ಗದರಿದ್ದು ನಿಜ. ಆದರೆ, ಈ ವಿಡಿಯೋ 9 ತಿಂಗಳ ಹಳೆಯದಾಗಿದ್ದು, ಇದನ್ನು ಏಪ್ರಿಲ್ 18, 2018ರಂದು ಎಎನ್‍ಐ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ‘ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಕೋಪಿತರಾದ ಪ್ರಿಯಾಂಕಾ ಗಾಂಧಿ’ ಎಂಬ ಕ್ಯಾಪ್ಸನ್ ನೀಡಲಾಗಿದ್ದು, ‘ಪರೆಸ್ಪರ ತಳ್ಳಾಡಬೇಡಿ. ನೀವು ಯಾವ ಕಾರಣಕ್ಕೆ ಇಲ್ಲಿ ಸೇರಿದ್ದಿರಿ ಎಂಬುದು ನಿಮಗೆ ಅರಿವಿರಲಿ. ನಿಮಗೆ ಸರಿಯಾಗಿ ವರ್ತಸಲಾಗದಿದ್ದರೆ ಮನೆಗೆ ಹೋಗಿ. ಈಗ ಎಲ್ಲರೂ ಅಲ್ಲಿವರೆಗೆ ಸಾಲಾಗಿ ಸಂಯಮದಿಂದ ನಡೆಯಿರಿ’ ಎಂದು ಗದರಿದರು ಎಂದು ವಿವರಿಸಲಾಗಿದೆ.
ಕಥುವಾ ಮತ್ತು ಉನ್ನಾವೊ ರೇಪ್ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಮಧ್ಯರಾತ್ರಿಯ

ವಿಮಲ್ ಶರ್ಮಾ ಎನ್ನುವ ಕೊಳಕನ ಫೇಕ್ ಪೋಸ್ಟ್

ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿನ ಘಟನೆಯಿದು. ಆನರು ಏಕಾಏಕಿ ತಳ್ಳಾಟ ಆರಂಭಿಸಿದಾಗ, ಪ್ರಿಯಾಂಕಾ ಗಾಂಧಿ ಮೇಲಿನಂತೆ ಗದರಿದ್ದಾರೆ. ಈ ಘಟನೆಯನ್ನು ಇಂಡಿಯಾ ಟುದೇ, ಹಿಂದೂಸ್ತಾನ್ ಟೈಮ್ಸ್‍ಗಳು ಕೂಡ ವರದಿ ಮಾಡಿದ್ದವಲ್ಲದೇ ಜನರ ನೂಕಾಟ, ಕಿಡಿಗೇಡಿತನ ತಡೆಯಲು ಪೊಲೀಸರೂ ಶ್ರಮ ಪಡಬೇಕಾಗಿತು. ತಳ್ಳಾಟದಲ್ಲಿ ಪ್ರಿಯಾಂಕಾರ ಮಕ್ಕಳನ್ನೂ ನೂಕಲಾಗಿತ್ತು. ಪಾನಮತ್ತರಾಗಿದ್ದ ಕೆಲವರು ಬ್ಯಾರಿಕೇಡ್‍ಗಳನ್ನು ಕೀಳಲೂ ಯತ್ನಿಸಿದರು ಎಂದು ವರದಿ ಮಾಡಲಾಗಿತ್ತು.
ವಿಡಿಯೋ ವಿಳಾಸ: https://twitter.com/i/status/984515031621668864

ಇದು ಅಸಲಿ ಸತ್ಯ. ಆದರೆ ಕೊಳಕು ಬುದ್ಧಿಯ ಭಕ್ತರು ಈ ವಿಡಿಯೋಕ್ಕೆ ಅವಹೇಳನದ ಕ್ಯಾಪ್ಸನ್ ಹಾಕಿ ಸುಳ್ಳು ಕತೆಯನ್ನು ಹರಡತೊಡಗಿದ್ದಾರೆ. ಕರ್ನಾಟಕದಲ್ಲಿ ವಿಕೃತ ವಿಷಭಟ್ಟನೂ ಕೂಡ ಗೌರಿ ಲಂಕೇಶರ ಕೊಲೆಯ ನಂತೆ ಇದೇ ಮಾದರಿಯಲ್ಲಿ ತನ್ನ ಹಲ್ಕಾ ಬುದ್ಧಿ ತೋರಿಸಿದ್ದ. ಈಗ ಈತನನ್ನು ಹಂಪಿ ಕನ್ನಡ ವಿವಿ ಕಾರ್ಯಕ್ರಮಕ್ಕೆ ಬರದಂತೆ ಓಡಿಸಲಾಗಿದೆ.
ಪ್ರಿಯಾಂಕಾ ಕುರಿತ ಮೇಲಿನ ಫೇಕ್‍ಸ್ಟೋರಿಯನ್ನು ಅಲ್ಟ್‍ನ್ಯೂಸ್, ಡೆಬ್‍ಕೂಪ್, ಬಿಬಿಸಿ (ಹಿಂದಿ)ಗಳು ಬಸ್ರ್ಟ್ ಮಾಡಿದ್ದು ‘ಭಕ್ತರ’ ವಿತಂಡ ಬುದ್ದಿಯನ್ನು ತೆರೆದು ಇಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...