Homeಮುಖಪುಟಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

ಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

- Advertisement -
- Advertisement -

| ನೀಲಗಾರ |

ಅಲಹಾಬಾದ್‍ನಿಂದ ವಾರಣಾಸಿಗೆ ಗಂಗಾನದಿಯಲ್ಲಿ ದೋಣಿ ಪಯಣಿಸಿದ್ದು ಕೇವಲ 100 ಕಿ.ಮೀ.ಗಳಷ್ಟೇ ಆಗಿರಲಿಲ್ಲ. ಅದು ಭಾರತದ ರಾಜಕಾರಣದಲ್ಲಿ ಆದ ಬಹುಮುಖ್ಯ ಪ್ರಯಾಣವಾಗಿತ್ತು. ಅಲ್ಲಿನ ಫೋಟೋಗಳನ್ನು ನೋಡಿದರೆ ಅದು ಸುಲಭಕ್ಕೆ ಅರ್ಥವಾಗುತ್ತದೆ. ಆದರೆ, ಅದರ ಹಿಂದೆ ಇನ್ನೂ ಅನೇಕ ಮಹತ್ವದ ಸಂಗತಿಗಳಿವೆ.

  1. ಅಲಹಾಬಾದ್‍ನಿಂದ ಪ್ರಯಾಣ ಆರಂಭಿಸುವ ಮುನ್ನ ಆಕೆ ತಂಗಿದ್ದು, ಸ್ವರಾಜ್ ಭವನದಲ್ಲಿ. ಅದು ಜವಹರಲಾಲ್ ನೆಹರೂ ಅವರ ಮನೆ. ಅದೇ ಮನೆಯಲ್ಲಿ ಇಂದಿರಾಗಾಂಧಿ ಹುಟ್ಟಿದ್ದು. ಅಷ್ಟೇ ಅಲ್ಲದೇ, ಅದೇ ಸ್ವರಾಜ್ ಭವನದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಹುಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು. ಸ್ವತಂತ್ರ ಸಂಗ್ರಾಮದ ಪರಂಪರೆಯನ್ನು ನಮಗಿಂತ ಹೆಚ್ಚು ಯಾರು ತಮ್ಮದೆಂದುಕೊಳ್ಳಲು ಸಾಧ್ಯ ಎಂಬ ಸಂದೇಶ ರವಾನಿಸುವ ಉದ್ದೇಶ ಅವರಿಗಿತ್ತೋ ಇಲ್ಲವೋ ಗೊತ್ತಿಲ್ಲ. ಏಕೆಂದರೆ ಆ ದಿನ ಪ್ರಿಯಾಂಕಾ ಮಾಡಿದ ಟ್ವೀಟ್‍ನಲ್ಲಿ ಅಜ್ಜಿ ಇಂದಿರಾಗಾಂಧಿಯ ವಾರಸುದಾರಿಕೆಯನ್ನು ಹೊತ್ತುಕೊಳ್ಳುವ ಮಾತುಗಳಿದ್ದವು. ‘ಸ್ವರಾಜ್ ಭವನದ ಅಂಗಳದಲ್ಲಿ ಕುಳಿತರೆ ನನ್ನ ಅಜ್ಜಿ ಹುಟ್ಟಿದ ಕೊಠಡಿ ಕಾಣುತ್ತಿದೆ. ನನ್ನಜ್ಜಿ ಮಲಗುವ ಮುನ್ನ ನನಗೆ ಜೋನ್ ಆಫ್ ಆರ್ಕ್ ಕಥೆಗಳನ್ನು ಹೇಳಿ, ಭಯ ಬಿಟ್ಟು ಧೈರ್ಯಶಾಲಿಯಾಗು ಎಲ್ಲವೂ ಸರಿ ಹೋಗಿಬಿಡುತ್ತದೆ ಎಂದು ಹೇಳುತ್ತಿದ್ದಳು’ ಎಂಬ ಟ್ವೀಟ್ ಅದು.

  1. ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಹೊರಟ ಪ್ರಿಯಾಂಕಾ, ವಿದ್ಯಾರ್ಥಿಗಳೊಂದಿಗೆ ‘ಬೋಟ್ ಪೆ ಚರ್ಚಾ’ ಮಾಡಿದರು. ಇದರಲ್ಲಿ ಮೋದಿ ನಡೆಸಿದ ಈವೆಂಟ್‍ನ ಪುನರಾವರ್ತನೆ ಅಲ್ಲದೇ ಇನ್ನೇನೂ ಹೆಚ್ಚುಗಾರಿಕೆ ಇರಲಿಲ್ಲ.
  2. ಆದರೆ, ಬಡೇ ಹನುಮಾನ್ ದೇವಸ್ಥಾನದಿಂದ ಆರಂಭಿಸಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ನಡೆಸಿದ ಪೂಜೆಯವರೆಗೆ ಎಲ್ಲಾ ಕಡೆ ಕಾಂಗ್ರೆಸ್ ಪ್ರದರ್ಶಿಸಲಿಚ್ಛಿಸುತ್ತಿರುವ ‘ಧಾರ್ಮಿಕ ಒಲವಿನ’ ಪ್ರದರ್ಶನ ಇದ್ದೇ ಇತ್ತು. ಗಂಗಾ ಆರತಿಯೂ ಸೇರಿ ಇವೆಲ್ಲಾ ಆಚರಣೆಗಳು ಮೋದಿ ಅಥವಾ ರಾಹುಲ್ ಗಾಂಧಿಯ ಭಕ್ತಿ ಪ್ರದರ್ಶನಕ್ಕಿಂತ ಸಹಜವಾಗಿದ್ದವು. ರಾಹುಲ್ ಇದನ್ನು ತೋರಿಕೆಗೆ ಮಾಡುವಂತೆ, ಮೋದಿ ಅಹಂಕಾರದಿಂದ ಪ್ರದರ್ಶನಕ್ಕಾಗಿ ಮಾಡುವಂತೆ ಕಾಣುವ ಭಕ್ತಿ, ಆಚರಣೆಗಳು, ಪ್ರಿಯಾಂಕಾ ಮಾಡಿದಾಗ ಸಹಜ ಭಕ್ತಿಯಂತೆ ಕಾಣುತ್ತಿದ್ದವು. 3 ದಿನಗಳ ಪ್ರಯಾಣದಲ್ಲಿ ಮಧ್ಯೆ ಒಮ್ಮೆ ದರ್ಗಾಗೂ ಹೋಗಿದ್ದದ್ದು ಗಮನೀಯವಾದುದು.
  3. ಅಷ್ಟೇನೂ ದೊಡ್ಡದಲ್ಲದ, ಐಷಾರಾಮಿ ಸೌಲಭ್ಯಗಳಿಲ್ಲದ ಮತ್ತು ತ್ರಿವರ್ಣದ ಖಾದಿ ಬಟ್ಟೆಗಳಿಂದ ಸಿಂಗರಿಸಲ್ಪಟ್ಟಿದ್ದ ಬೋಟಿನಲ್ಲಿ ಪ್ರಿಯಾಂಕಾ ಪಯಣಿಸಿದರು. ನಿಧಾನಕ್ಕೆ ಜನರು ಇದನ್ನು ಮೋದಿ ಪಯಣಿಸಿದ ಸೀ ಪ್ಲೇನ್ ಜೊತೆ ಹೋಲಿಸಬಹುದು.
  4. ಈ ಅವಧಿಯಲ್ಲೇ ಬಂದ ಹೋಳಿ ಹಬ್ಬವನ್ನು ಪ್ರಿಯಾಂಕಾ ಅಲ್ಲಿನ ಸಾಮಾನ್ಯ ಜನರ ಜೊತೆ ಸೇರಿ ಆಚರಿಸಿದರು.
  5. ಅಂತಿಮವಾಗಿ ವಾರಣಾಸಿ ತಲುಪಿದ ನಂತರ ದೇವಸ್ಥಾನಗಳ ಭೇಟಿಯ ನಂತರ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಮಾತಾಡಿದ್ದು ಮೋದಿಯವರು ತಮ್ಮ ಕ್ಷೇತ್ರಕ್ಕೆ ಕೊಟ್ಟಿದ್ದ ಭರವಸೆಗಳ ಕುರಿತು. ಅದರ ಪಟ್ಟಿಯನ್ನು ಇಟ್ಟುಕೊಂಡು ಅತ್ಯಂತ ಸರಳವಾಗಿ ಜನರ ಜೊತೆ ಸಂಭಾಷಣೆಯನ್ನು ಶುರು ಮಾಡಿದರು. ‘ಇದೇನು?’, ‘ಇದು ಮೋದಿಯವರು ಕೊಟ್ಟಿದ್ದ ಭರವಸೆಗಳು’, ‘ಇದು ಈಡೇರಿದೆಯಾ?’ “ಇಲ್ಲಾ”, ‘ಇದು?’ “ಇಲ್ಲಾ”, ‘ಇದು’ “ಅದೂ ಇಲ್ಲ”. ಮಾತಾಡುತ್ತಿರುವುದು ಎದುರಿಗಿರುವ ಕೆಲವು ಸಾವಿರ ಜನರಿಗಾದರೂ, ಅದು ಉತ್ತರ ಪ್ರದೇಶಕ್ಕೆ ಕೊಡಬೇಕಾದ ಸಂದೇಶ ಕೊಡುತ್ತದೆಂಬುದು ಆಕೆಗೆ ಗೊತ್ತಿತ್ತು.
  6. ಎಲ್ಲಕ್ಕಿಂತ ಮುಖ್ಯವಾಗಿ, ಮೇಲಿನ ಫೋಟೋದಲ್ಲಿರುವಂತೆ, ದೇವರ ತಿಲಕ ಮತ್ತು ವಿಭೂತಿಯನ್ನು ಹಚ್ಚಿಕೊಂಡು ಪ್ರಿಯಾಂಕಾ ವೇದಿಕೆಯ ಮೇಲೆ ಆಸೀನವಾಗಿದ್ದು. ಜೊತೆಗೆ ಕೊರಳಿಗೆ ರುದ್ರಾಕ್ಷಿ ಮಾಲೆಗಳು. ಅದೇ ವೇಷದಲ್ಲೇ ವೇದಿಕೆಯ ಭಾಷಣವನ್ನೂ ಮಾಡಿದ್ದು. ಇಂತಹ ವೇಷವನ್ನು ಮೊದಲು ಹಾಕಿದ್ದು ಮೋದಿ. ಆಗ, ದೇಶದ ಗಣನೀಯ ಸಂಖ್ಯೆಯ ಜನರ ಪುಣ್ಯಕ್ಷೇತ್ರದಿಂದ ಒಬ್ಬ ಹೊಸ ಸಮರ್ಥ ಸಾಧು ಮೇಲೆದ್ದು ಬಂದಂತೆ ಕಾಣಲು ಬೇಕಾದ ಕೊರಿಯೋಗ್ರಫಿ ನಡೆದಿತ್ತು. ಈಗ? ಈಗ ಸಿನೆಮಾಗಳಲ್ಲಿ ಕಾಣುವಂತಹ ಒಂದು ಸೀನ್ ಸೃಷ್ಟಿಸಲಾಗಿದೆ. ಧರ್ಮದ ಸೋಗಿನಲ್ಲಿ ವಂಚಿಸುವ ದುಷ್ಟನೊಬ್ಬನನ್ನು ಸಂಹರಿಸಲು ಎಳೆಯ ಬಾಲಕಿಯೊಬ್ಬಳು ದೈವ ಕೃಪೆಯನ್ನು ಪಡೆದುಕೊಂಡು ಎದುರು ನಿಂತರೆ ಹೇಗಿರುತ್ತೋ ಆ ರೀತಿಯ ಸೀನ್. ಪ್ರಿಯಾಂಕಾ ವೇದಿಕೆಯ ಮಧ್ಯಭಾಗದಲ್ಲಿ ಕೂತು ಆಶೀರ್ವದಿಸುವಂತೆ ಒಮ್ಮೆ ಕೈ ಮುಂದೆ ಮಾಡುತ್ತಾರೆ. ಅದು ಕಾಂಗ್ರೆಸ್ಸಿನ ಚಿಹ್ನೆಯೆಂಬುದೂ ಕಾರಣವಿರಬಹುದು. ಆದರೆ, ಆಕೆಯಲ್ಲಿ ದುರ್ಗೆ, ಕಾಳಿ ಇತ್ಯಾದಿಗಳನ್ನು ಸಾಮಾನ್ಯ ಜನರು ಕಾಣುವ ಸಾಧ್ಯತೆ ಇದೆ.
  7. ಭಾರತದ ರಾಜಕಾರಣದಲ್ಲಿ ಇಂತಹ ಇನ್ನೂ ಏನೇನನ್ನು ನಾವು ನೋಡಬೇಕಾಗುತ್ತೋ ಗೊತ್ತಿಲ್ಲ. ಆದರೆ, ಇಲ್ಲಿನ ಚುನಾವಣೆಗಳ ರಂಗನ್ನು ವಿಪರೀತವಾಗಿ ಏರಿಸಿದ ನರೇಂದ್ರ ಮೋದಿಗೆ ಅದೇ ರೀತಿಯಲ್ಲಿ ಹೋಳಿ ಎರಚುವ ಸಾಮಥ್ರ್ಯ ನಮಗೂ ಇದೆ ಎಂದು ವಿರೋಧ ಪಕ್ಷವು ತೋರಿಸುತ್ತಿದೆ. ಅಂತಹ ಮುಖಾಮುಖಿಯಲ್ಲಿ ರಾಹುಲ್‍ಗಿಂತ ಪ್ರಿಯಾಂಕಾಗೆ ಹೆಚ್ಚಿನ ಸಾಧ್ಯತೆಗಳಿವೆ ಎಂಬುದನ್ನು ಈ ‘ಗಂಗಾಪಯಣ’ ತೋರಿಸಿದೆ.
  8. ಹಾಗೆ ನೋಡಿದರೆ ರಾಹುಲ್‍ಗಾಂಧಿ ರೈತರ ಸಂಕಷ್ಟ, ನಿರುದ್ಯೋಗ, ರಾಫೇಲ್ ಭ್ರಷ್ಟಾಚಾರ ಇತ್ಯಾದಿ ಅಸಲಿ ಸಂಗತಿಗಳ ಕುರಿತು ಮಾತನಾಡುತ್ತಿರುವುದಕ್ಕೇ ಹೆಚ್ಚಿನ ಮಹತ್ವ ಇರಬೇಕಿತ್ತು. ಆದರೆ, ರಾಜಕಾರಣವು ಒಂದು ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ವಿವಿಧ ಸಿನೀಮಿಯ ದೃಶ್ಯಗಳಿಂದ ಜನರನ್ನು ಮರುಳುಗೊಳಿಸುವ ಆಟವಾಡುತ್ತದೆ. ಇಂತಹ ಬಿಂಬಗಳು ಬಹುಬೇಗನೇ ಅಸಲಿ ಸಮಸ್ಯೆಗಳನ್ನು ಮಸುಕುಗೊಳಿಸುತ್ತವೆ. ಅದೇನೇ ಇರಲಿ, ಈ ಆಟದಲ್ಲಿ ಪ್ರಿಯಾಂಕಾ ಪ್ರವೇಶದಿಂದ ಮೋದಿ ಭಕ್ತ ಪಡೆಯು ಗಲಿಬಿಲಿಗೊಳ್ಳುವುದರಲ್ಲಿ ಸಂಶಯವಿಲ್ಲ.
  9. ಇಂದಿಗೆ 10 ವರ್ಷಗಳ ನಂತರ ಎಲ್ಲರೂ ಹೌದಲ್ಲಾ ಎಂದುಕೊಳ್ಳಬಹುದಾದ ಇನ್ನೊಂದು ಸಂಗತಿಯಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟು ಗಳಿಕೆ ಆಗಲಾರದು. ಪ್ರಿಯಾಂಕಾ ಗಾಂಧಿಯ ರಾಜಕೀಯ ಪ್ರವೇಶವು ಕಾಂಗ್ರೆಸ್ ಪಕ್ಷದ ದೀರ್ಘಕಾಲಿಕ ಹೂಡಿಕೆಯಾಗಿದೆ. 1990ಕ್ಕೆ ಮುಂಚೆ ಉತ್ತರ ಪ್ರದೇಶದ ಮೇಲೆ ಇಟ್ಟುಕೊಂಡಿದ್ದ ಹಿಡಿತವೇ ಆ ಪಕ್ಷಕ್ಕೆ ದೇಶವನ್ನಾಳುವ ಶಕ್ತಿ ತಂದುಕೊಡುತ್ತಿತ್ತು. ಉತ್ತರ ಪ್ರದೇಶದ ಮುಖ್ಯಮಂತ್ರಿ ವಿ.ಪಿ.ಸಿಂಗ್ ನಂತರ ರಾಜೀವ್‍ಗಾಂಧಿ ಸಂಪುಟದಿಂದ ಹೊರನಡೆದ ಮೇಲೆ ಅದು ಕುಸಿಯಿತು. ಅಲ್ಲಿಂದ ಇಲ್ಲಿಯವರೆಗೆ ಕಾಂಗ್ರೆಸ್ ಮತ್ತೆ ಅಲ್ಲಿ ಅಧಿಕಾರಕ್ಕೆ ಬಂದಿಲ್ಲ. ವಿ.ಪಿ.ಸಿಂಗರ ನಂತರ ಬಿಜೆಪಿ, ಎಸ್‍ಪಿ, ಬಿಎಸ್‍ಪಿಗಳ ನಡುವಿನ ಸಂಘರ್ಷದಲ್ಲಿ ಕಾಂಗ್ರೆಸ್ ಮಂಕಾಗುತ್ತಾ ಬಂದಿತ್ತು. ಮರಳಿ ಉತ್ತರ ಪ್ರದೇಶ ಪಡೆದುಕೊಳ್ಳಲು ಬೇಕಾದ ಬಲವಾದ ಅಸ್ತ್ರವಾಗಿ ಪ್ರಿಯಾಂಕಾರನ್ನು ರಂಗಕ್ಕಿಳಿಸಲಾಗಿದೆ. ಈ ಸದ್ಯ ರಂಗಪ್ರವೇಶವಂತೂ ಯಶಸ್ವಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...