Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...