Homeಅಂತರಾಷ್ಟ್ರೀಯಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇತಿಹಾಸದಲ್ಲಿಯೇ ಯಾವ ಟೆಕ್ನಾಲಜಿ ಕಂಪನಿಗೂ ಈ ಮಟ್ಟದ ಭಾರಿ ಮೊತ್ತದ ದಂಡವನ್ನು ವಿಧಿಸಿರಲಿಲ್ಲ. 2012ರಲ್ಲಿ ಸರ್ಚ್ ಇಂಜಿನ್ ದಿಗ್ಗಜ ಸಂಸ್ಥೆ ಗೂಗಲ್ 22 ಕೋಟಿ ಡಾಲರ್‍ಗಳಷ್ಟು ದಂಡ ಕಟ್ಟಿತ್ತು.

ಬಳಕೆದಾರರ ಮಾಹಿತಿ ರಕ್ಷಣೆ, ಗೌಪ್ಯತೆಯ ಕಾನೂನು ಉಲ್ಲಂಘನೆಯ ಆರೋಪಗಳ ಮೇಲಿನ ತನಿಖೆಗೆ ಸಂಬಂಧಿಸಿ ಅಮೆರಿಕಾ ನಿಯಂತ್ರಣ ಮಂಡಳಿ ‘ಫೆಡರಲ್ ಟ್ರೇಡ್ ಕಮಿಷನ್’ (ಎಫ್.ಟಿ.ಸಿ) ಜೊತೆ ಫೇಸ್ ಬುಕ್‍ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇರೆಗೆ ಎಪ್.ಟಿ.ಸಿಯಲ್ಲಿ ನಡೆದ ದಂಡ ಹಾಕಬೇಕೆ ಬೇಡವೇ ಎಂಬ ಮತ ಪ್ರಕ್ರಿಯೆಯಲ್ಲಿ 3-2 ಮತಗಳ ಅಂತರದಲ್ಲಿ ಅನುಮೋದನೆ ಲಭಿಸಿದೆ ಎಂದು ವಾಲ್‍ಸ್ಟ್ರೀಟ್ ಜರ್ನಲ್ ಈ ಕುರಿತು ಒಂದು ಲೇಖನ ಪ್ರಕಟಿಸಿದೆ.

ಈ ನಿಯಂತ್ರಣ ಮಂಡಳಿಯಲ್ಲಿ ಡೆಮಾಕ್ರಾಟ್ ಸದಸ್ಯರು ಒಪ್ಪಂದದ ಪ್ರತಿಪಾದವನ್ನು ವಿರೋಧಿಸಿದರೆ, ರಿಪಬ್ಲಿಕನ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇನ್ನು ಈ ಒಪ್ಪಂದಕ್ಕೆ ಜಸ್ಟೀಸ್ ಡಿಪಾರ್ಟ್‍ಮೆಂಟ್ ಸಿವಿಲ್ ಡಿವಿಜನ್ ಅನುಮೋದನೆ ಮಾಡಬೇಕಿದೆ. ಅಮೆರಿಕಾದ ಅಧ್ಯಕ್ಷ ಚುನಾವಣೆಯ ಪ್ರಚಾರದಲ್ಲಿ ಡೋನಾಲ್ಡ್ ಟ್ರಂಪ್‍ಗಾಗಿ ಕೆಲಸ ಮಾಡಿದ ಕೇಂಬ್ರಿಡ್ಜ್ ಅನಲಿಟಿಕಾ ಎನ್ನುವ ಕಂಪೆನಿ ಕೋಟ್ಯಾಂತರ ಜನ ಫೇಸ್ ಬುಕ್‍ ಬಳಕೆದಾರರ ವಯಕ್ತಿಕ ಡೇಟಾವನ್ನು ತೆಗೆದುಕೊಂಡಿದೆ. ಈ ವಿಷಯ ಹೊರ ಬಿದ್ದದ್ದರಿಂದ 2011ರಲ್ಲಿ ಫೇಸ್ ಬುಕ್‍ ಜೊತೆ ಮಾಡಿಕೊಂಡಿದ್ದ ಖಾಸಗಿ ಒಪ್ಪಂದದ ಕೇಸನ್ನು ಮತ್ತೆ ತೆರೆಯಲಾಗಿದೆ. ಹಳೆಯ ಕೇಸಿನಲ್ಲಿ ತನಿಖೆಯನ್ನು ಪನಃ ಪ್ರಾರಂಭಿಸಿರುವುದಾಗಿ ಕಳೆದ ವರ್ಷವೇ ಎಫ್.ಟಿ.ಸಿ ಪ್ರಕಟಿಸಿದೆ.

ಜಗತ್ತಿನಾದ್ಯಂತ 200 ಕೋಟಿಗಳಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್‍, ಬಳಕೆದಾರರ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿ ಅಮೆರಿಕದ ಜೊತೆಗೆ ಜಗತ್ತಿನಾದ್ಯಂತ ಕೆಲವು ದೇಶಗಳ ನಿಯಂತ್ರಣ ಮಂಡಳಿಗಳಿಂದ ವಿಚಾರಣೆಯನ್ನು ಎದುರಿಸುತ್ತಿದೆ. ಈ ಕೇಸಿನಲ್ಲಿ ಕಂಪನಿಯ ಮೇಲೆ 300 ರಿಂದ 500 ಕೋಟಿ ಡಾಲರ್ ದಂಡ ಬೀಳಬಹುದೆಂದು ಮುಂಚೆಯೇ ಅಂದಾಜು ಮಾಡಿದೆ.

ಫೇಸ್ ಬುಕ್‍ ಕಳೆದ ವರ್ಷ 5,600 ಕೋಟಿ ಡಾಲರ್ ಲಾಭ ಗಳಿಸಿಕೊಂಡಿದೆ. ಈ ವರ್ಷದಲ್ಲಿ ಇದು 6,900 ಕೋಟಿ ಡಾಲರ್ ಬೆಳೆಯಬಹುದೆಂದು ಅಂದಾಜು. ಭಾರೀ ಲಾಭ ಗಳಿಸಿರುವ ಕಂಪನಿಗೆ ಈ ದಂಡ ದೊಡ್ಡ ಮೊತ್ತವೇನು ಅಲ್ಲ .., ಸಂಸ್ಥೆಯ ಜೊತೆ ಮತ್ತಷ್ಟು ಕಠಿಣವಾಗಿ ವ್ಯವಹರಿಸಬೇಕೆಂದು ಫೇಸ್ ಬುಕ್‍ ವಿಮರ್ಶಕರು ಹೇಳುತ್ತಿದ್ದಾರೆ. ಮುಖ್ಯವಾಗಿ ಬಳಕೆದಾರರ ವ್ಯಕ್ತಿಗತ ಮಾಹಿತಿಗೆ ಸಂಬಂಧಿಸಿದಂತೆ ಕಂಪನಿ ಮೇಲೆ ಕಠಿಣವಾದ ನಿರ್ಬಂಧಗಳನ್ನು ವಿಧಿಸಬೇಕೆಂದು ಹೇಳುತ್ತಿದ್ಧಾರೆ.

ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ಕೃಪೆ -ಆಂದ್ರಜ್ಯೋತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...