Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...