Homeಎಕಾನಮಿಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

ಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

- Advertisement -
- Advertisement -

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ ಎಂಬುದರಲ್ಲಿ ಅಧಿಕಾರಸ್ಥರ ಪಾವತಿ ಕೂಲಿಗಳು (ಟ್ರಾಲ್ ಸೇನೆ) ಬಿಟ್ಟರೆ ಬೇರಾರಿಗೂ ಎಲ್ಲೂ ಯಾರಿಗೂ ಸಂಶಯ ಉಳಿದಂತಿಲ್ಲ. ಸ್ವತಃ ಹಣಕಾಸು ಸಚಿವೆ ಎಲ್ಲವೂ ಸರಿಯಿಲ್ಲ, ಆದರೆ ಪೂರ್ಣ ಕೆಟ್ಟಿಲ್ಲ ಎಂದು ಸಂಸತ್ತಿನಲ್ಲೇ ದಾಖಲಿಸಿಯಾಗಿದೆ. ಸಾರ್ವಜನಿಕ ಅಭಿಪ್ರಾಯಗಳೂ ಈ ನಿಟ್ಟಿನಲ್ಲಿ ಹರಳುಗಟ್ಟಿವೆ.

ಮೊನ್ನೆ ಡಿಸೆಂಬರ್ ಒಂದರಂದು ಎಕನಾಮಿಕ್ ಟೈಮ್ಸ್ ಕಾನ್‍ಕ್ಲೇವ್‍ನಲ್ಲಿ ವೇದಿಕೆಯ ಮೇಲಿದ್ದ ಗೃಹ ಸಚಿವ ಅಮಿತ್ ಷಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೇ ಸಚಿವ ಪಿಯೂಷ ಗೋಯಲ್ ಅವರನ್ನುದ್ದೇಶಿಸಿ ಬಜಾಜ್ ಗುಂಪಿನ ಮುಖ್ಯಸ್ಥ ರಾಹುಲ್ ಬಜಾಜ್ ಅವರು, ಸರ್ಕಾರದ ವಿರುದ್ಧ ಕುತೂಹಲಕರ ಟೀಕೆಯೊಂದನ್ನು ಮಾಡುತ್ತಾರೆ. “ಯುಪಿಎ -2 ಆಳ್ವಿಕೆಯಲ್ಲಿ ನಾವು (ಉದ್ಯಮಿಗಳು) ಯಾರನ್ನು ಬೇಕಿದ್ದರೂ ಟೀಕಿಸಬಹುದಿತ್ತು. ಆದರೆ ನೀವೀಗ ಅದನ್ನು (ಟೀಕೆಯನ್ನು) ಸ್ವೀಕರಿಸುತ್ತೀರಿ ಎಂಬ ವಿಶ್ವಾಸ ಇಲ್ಲ. ನಾನು ಹೇಳುತ್ತಿರುವುದು ತಪ್ಪಿರಬಹುದು, ಆದರೆ ಎಲ್ಲರಲ್ಲೂ ಈ ಭಾವನೆ ಇದೆ.”

ಅಸಹನೆಯ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿರುವಾಗ ಹುಲ್ಲುಕಡ್ಡಿಯಂತೆ ಕಾಣಿಸಿಕೊಂಡ ಈ ಟೀಕೆಯನ್ನು ಎಲ್ಲರೂ ಗಪ್ಪೆಂದು ಹಿಡಿದು ಕುಳಿತಿರುವ ರೀತಿ – ಹಲವಾರು ವ್ಯಥೆಗಳನ್ನು ಒಟ್ಟಾಗಿ ಹೇಳುತ್ತಿದೆ. ಅಲ್ಲಿ ದೇಶದ ಹಲವು ಮಂದಿ ಪ್ರಮುಖ ಕಾರ್ಪೋರೇಟ್ ಧಣಿಗಳು ಹಾಜರಿದ್ದರು.

ಅಧಿಕಾರಸ್ಥರ ಪ್ರತಿಕ್ರಿಯೆ
ಮೊದಲನೆಯದಾಗಿ ಬಜಾಜ್ ಟೀಕೆಗೆ ಅಲ್ಲೇ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಷಾ , ನರೇಂದ್ರ ಮೋದಿ ಸರ್ಕಾರ ಅತ್ಯಂತ ಹೆಚ್ಚು ಟೀಕೆಗೊಳಗಾಗಿರುವ ಸರ್ಕಾರ ಎಂದರಲ್ಲದೇ ಬಿಜೆಪಿಗೆ ಸತ್ಯ ತಿಳಿಸುವ ಕುರಿತು ಇನ್ನೂ ಜನರಲ್ಲಿ ಭಯ ಇದ್ದರೆ, ಅದನ್ನು ಹೋಗಲಾಡಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಭರವಸೆ ಇತ್ತರು. ಇದು ಸರ್ಕಾರದ ಕಡೆಯಿಂದ ಬಂದ ತಕ್ಷಣದ ಪ್ರತಿಕ್ರಿಯೆ.

ಅದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮರುದಿನ, ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿ, ಪ್ರಶ್ನೆ ಕೇಳಿ ಉತ್ತರ ಪಡೆಯುವ ಬದಲು, ಅಭಿಪ್ರಾಯಗಳನ್ನು ಹರಡುತ್ತಾ ಹೋದರೆ ಆ ಅಭಿಪ್ರಾಯ ಜನಪ್ರಿಯವಾಗತೊಡಗಿದೊಡನೆ ದೇಶದ ಹಿತಾಸಕ್ತಿಗೆ ಹಾನಿ ಆಗಬಹುದೆಂದು ಎಚ್ಚರಿಸಿದರು.

ಅದೇದಿನ ಅಧಿಕಾರಸ್ಥರ ಮುಖವಾಣಿ ಸ್ವರಾಜ್ಯ ಮ್ಯಾಗಝೀನಿನ ಸಂಪಾದಕ ಆನಂದ್ ರಂಗನಾಥನ್ ಅವರು ಒಂದು ಟ್ವೀಟ್‍ನಲ್ಲಿ “ಬಜಾಜ್‍ಗೆ ಪ್ರಜ್ಞೆ ಬರಬೇಕೆಂದರೆ (ಅವರ ಸ್ಕೂಟರಿನಂತೆ) ಎರಡು ಬಾರಿ ಬಗ್ಗಿಸಿ ಕಿಕ್ ಒದೆಯಬೇಕು. ಓಆಂ ಸರ್ಕಾರ ಎದುರಿಸಿದಷ್ಟು ಟೀಕೆಗಳನ್ನು ಯಾರೂ ಎದುರಿಸಿಲ್ಲ. ಅವರು ಯಾವ ಲೋಕದಲ್ಲಿದ್ದಾರೆ? ಭೂಲೋಕದಲ್ಲಂತೂ ಅಲ್ಲ” ಎಂದು ವ್ಯಂಗ್ಯವಾಗಿ ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಹಾಲೀ ಕೇಂದ್ರ ಸರ್ಕಾರದ ಮತ್ತವರ ಸಮರ್ಥಕರ ಕಾರ್ಯವೈಖರಿಯನ್ನು ಅರಿತಿರುವವರಿಗೆ ಈ ಮೂರು ಪ್ರತಿಕ್ರಿಯೆಗಳು ಸ್ತರವಾರು ಏನನ್ನು ಧ್ವನಿಸುತ್ತಿವೆ ಎಂಬುದನ್ನು ವಿವರಿಸಬೇಕಾಗಿಲ್ಲ.

ಉದ್ಯಮಿಗಳೇಕೆ ಹೀಗೆ?

ಇಲ್ಲಿ ನಿಜಕ್ಕೂ ಅಚ್ಚರಿ ಪಡಬೇಕಾಗಿರುವುದು ರಾಹುಲ್ ಬಜಾಜ್, ಕಿರಣ್ ಮಜುಂದಾರ್ ಅವರಂತಹ ದೊಡ್ಡ ಉದ್ಯಮಪತಿಗಳ ಈ ಚಹಾಕಪ್ಪಿನ ಹಠಾತ್ ಕ್ರಾಂತಿಯ ಬಗ್ಗೆ. ಯಾಕೆಂದರೆ, ಹಾಲೀ ಕೇಂದ್ರ ಸರ್ಕಾರ ಕಳೆದ ಆರು ವರ್ಷಗಳಲ್ಲಿ, ಅದರಲ್ಲೂ ನೋಟು ರದ್ಧತಿಯ ಬಳಿಕ, ಉದ್ದಿಮೆಗಳಿಗೆ ಕೊಟ್ಟಿರುವಷ್ಟು ಸವಲತ್ತುಗಳನ್ನು ಬೇರಾರಿಗೂ ಕೊಟ್ಟಿಲ್ಲ. ಆದರೂ ಹೀಗೇಕೆ?

ಒಂದು ಮಗ್ಗುಲಿನಿಂದ ನೋಡಿದಾಗ, ಇದು ಅಧಿಕಾರಸ್ಥರಿಗೆ ಹತ್ತಿರ ಇರುವ ಉದ್ದಿಮೆಗಳ (ಉದಾಹರಣೆಗೆ ಎಲ್ಲ ಆರ್ಥಿಕ ಹೊಡೆತಗಳ ಹೊರತಾಗಿಯೂ ಅಸ್ವಾಭಾವಿಕ ಎಂಬಷ್ಟು ಬೆಳವಣಿಗೆ ಕಂಡಿರುವ ಅದಾನಿ, ಅಂಬಾನಿ ಇತ್ಯಾದಿ ಕಾರ್ಪೋರೇಟ್ ಗಳು) ವಿರುದ್ಧ ಸ್ವಲ್ಪ ದೂರದಲ್ಲಿರುವವರ ಅಸಹಾಯಕ ಅಸಹನೆಯಂತೆ ಕಾಣಿಸುತ್ತದೆ.
ಎರಡನೆಯದಾಗಿ ತಮ್ಮ ಇಷ್ಟಕ್ಕೆ ತಕ್ಕಂತೆ ನಡೆದುಕೊಳ್ಳದಿದ್ದರೆ, ಸರ್ಕಾರಿ ವ್ಯವಸ್ಥೆ ಬಳಸಿಕೊಂಡು ಉದ್ದಿಮೆಗಳವರ ಬೆನ್ನು ಮುರಿಯಲು ನಾವು ಹಿಂಜರಿಯಲಾರೆವು ಎಂಬ ಸರ್ಕಾರದ ಪರೋಕ್ಷ ಎಚ್ಚರಿಕೆಗೆ ಉದ್ಯಮಿ ವರ್ಗದ ಭಯ-ಆತಂಕದ ಪ್ರತಿಕ್ರಿಯೆಯೂ ಇದಾಗಿರಬಹುದು.

ಇದಲ್ಲದೇ ಬೇರೆ ಕಾರಣಗಳೂ ಇದ್ದಿರಬಹುದು. ಆದರೆ ಕಾರಣಗಳಿಗಿಂತ ಹೆಚ್ಚಾಗಿ ಇದೊಂದು ಸುಯೋಜಿತ ತಂತ್ರವಾಗಿರಬಹುದು ಎಂಬ ಸಂಶಯ ಮೂಡಿದರೂ ಅಚ್ಚರಿ ಇಲ್ಲ.

ಮಾರುಕಟ್ಟೆಯ ವಾಸ್ತವಗಳು

ಆದರೆ ಸೇವಾ ಉದ್ಯಮವನ್ನೇ 65%ರಷ್ಟು ನೆಚ್ಚಿಕೊಂಡಿರುವ ಭಾರತದಂತಹ ದೇಶವೊಂದರಲ್ಲಿ ಮೂಲಸೌಕರ್ಯ, ಆಟೊ ಮೊಬೈಲ್‍ನಂತಹ ಉದ್ಯಮಗಳು ಬದಿಗೆ ಸರಿಯತೊಡಗಿದ್ದು ಹೊಸ ಬೆಳವಣಿಗೆಯೇನಲ್ಲ. ಇದು 90ರ ದಶಕದ ಕೊನೆಯಲ್ಲಿ ನಡೆದ “ಐಟಿ ಕ್ರಾಂತಿ”ಯ ಫಲ.

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆ ಕುಸಿತ, ಮಾರುಕಟ್ಟೆಯಲ್ಲಿ ಬೇರೆ ದೇಶಗಳ ಬುಡ ಕತ್ತರಿಸುವ ಸ್ಪರ್ಧೆ ಹಾಗೂ ಮೂರನೇ ಹಂತದ ಐಟಿ ಕ್ರಾಂತಿ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇತ್ಯಾದಿ) ಆರಂಭಗೊಂಡಿರುವುದರಿಂದ, ಅದಕ್ಕೆ ಸನ್ನದ್ಧಗೊಂಡಿರದ ಭಾರತದ ಐಟಿ ಉದ್ಯಮ ಥಂಡಾ ಹೊಡೆಯುತ್ತಿದೆ. ಪರ್ಯಾಯ ಇಂಧನ ಮೂಲಗಳ ಗಲಾಟೆಯಲ್ಲಿ ಆಟೊಮೊಬೈಲ್ ಉದ್ಯಮ ಕೂಡ ದಾರಿಕಾಣದೆ ನಿಂತಿದೆ.

ಇತ್ತ ಡಿಮಾನೆಟೈಸೇಷನ್‍ನಿಂದಾಗಿ ದೇಶದ ಹಣಕಾಸು ವ್ಯವಸ್ಥೆಗೆ “ಸಾಸಿವೆ ಡಬ್ಬಿಯ ಶಾಪ” ತಗುಲಿದೆ. ಒಂದು ಪುಟ್ಟ ಗಲ್ಲಿಯ ಆರ್ಥಿಕತೆಯ ಮೇಲೆ ಇದರಿಂದ ಬಿದ್ದಿರುವ ಹೊಡೆತ ಹಂತಹಂತವಾಗಿ ಮೇಲೆದ್ದು, ಎಲ್ಲವನ್ನೂ ನುಂಗಿ ನೊಣೆಯುತ್ತಾ, ಬಹುತೇಕ ಎಲ್ಲ ಮೂಲಸೌಕರ್ಯ ಉದ್ದಿಮೆಗಳ ಮೇಲೂ ದುಷ್ಪರಿಣಾಮ ಬೀರಿದೆ.

ನೋಟುರದ್ಧತಿಯ ಬಳಿಕ ಕೇಂದ್ರ ಸರ್ಕಾರ ತನ್ನಲ್ಲಿ ಆರೋಗ್ಯವಂತ ಯೋಜನೆಯೊಂದು ಇದ್ದಿದ್ದರೆ, ತನ್ನ ಮರುನಿರ್ಮಾಣ ಕೆಲಸವನ್ನು ದೇಶದ ಕೃಷಿಭೂಮಿಗಳಿಂದ ಆರಂಭಿಸಬೇಕಿತ್ತು. ಅದನ್ನು ಬಿಟ್ಟು ಕೃಷಿ ಭೂಮಿಗಳನ್ನು ಈಗ ಕೆಲಸ ಇಲ್ಲದೆ ಕುಳಿತಿರುವ ಕಾರ್ಪೋರೇಟ್ ಗಳಿಗೆ ಹಸ್ತಾಂತರಿಸುವ ಹಠ ಹಿಡಿದು ಕಾರ್ಯಾಚರಿಸುತ್ತಿದೆ. ಏನೆಲ್ಲ ಇದೆಯೋ ಅದನ್ನೆಲ್ಲ ಕಾರ್ಪೋರೇಟ್ ಗಳಿಗೆ ದಾನ ಕೊಡುವುದೇ ತನ್ನ ಉದ್ಯೋಗ ಎಂದು ತಿಳಿದಂತಿದೆ.

ಒಟ್ಟು ಅರ್ಥ ಏನು?

ಇಂತಹದೊಂದು ಗಂಭೀರ ಸನ್ನಿವೇಶದಲ್ಲಿ ಕೈಗಾರಿಕೆಗಳ ಪ್ರತಿನಿಧಿಯೊಬ್ಬರು ಸರ್ಕಾರವನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಾಗ ಅದನ್ನು ದೇಶದ ನಾಗರಿಕ ಹೇಗೆ ಗ್ರಹಿಸಬೇಕು?

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ಸಾವಿರಾರು ರೈತರು ದಿಲ್ಲಿ ಚಲೋ ಮಾಡಿದಾಗಲಾಗಲೀ, ಬ್ಯಾಂಕ್ ನೌಕರರು-ಸಾರ್ವಜನಿಕ ವಲಯದ ಸಂಸ್ಥೆಗಳ ಉದ್ಯೋಗಿಗಳು ತಮ್ಮ ಸಂಸ್ಥೆಗಳ ಅಸ್ತಿತ್ವಕ್ಕೆ ಧಕ್ಕೆ ಬಂದಿದೆ ಎಂದು ನಡೆಸಿದ ಹೋರಾಟಕ್ಕಾಗಲೀ, ಯಾವತ್ತೂ ಮಣೆ ಹಾಕದ ಮಾಧ್ಯಮಗಳು ಇದೊಂದು ಒಂಟಿಧ್ವನಿಗೆ ಈ ಮಹತ್ವ ಯಾಕೆ ಕೊಟ್ಟವು?!

ಸದ್ಯಕ್ಕೆ ಚಹಾಕಪ್ಪಿನಲ್ಲಿ ನಡೆದುಹೋದ ಈ ಕ್ರಾಂತಿ ಅಲ್ಲಿಂದ ಹೊರಜಗತ್ತಿಗೆ ಚೆಲ್ಲಿ ಬಿರುಗಾಳಿ ಮೂಡಿಸೀತೇ ಎಂಬುದು ಸ್ಪಷ್ಟವಾಗಲು ಇನ್ನೂ ಸ್ವಲ್ಪ ಸಮಯ ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...