Homeಕರ್ನಾಟಕಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

- Advertisement -
- Advertisement -

-ಮಲ್ಲಿ |

ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ ‘ವೇಷಣಗಳು’ ಕಳಚಿಬಿದ್ದಿದ್ದಂತೂ ಸತ್ಯ. ಹಾಗೆಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟಕ್ಕೆ ಕಲಾಪ ಬಲಿಯಾಗಿದ್ದೂ ನಿಜ.
ರಾಜ್ಯ ಸರ್ಕಾರದ ಒಂದು ವರ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಚೌಕಟ್ಟಿನ ಮುನ್ನೋಟ ನೀಡುವ ಮಹತ್ವದ ಬಜೆಟ್ ಯಾವುದೇ ಅಂಗೀಕಾರವಿಲ್ಲದೇ ಅನುಮೋದನೆ ಪಡೆದಿದೆ. ಅಂದರೆ ಪಾಸ್ ಆಗಿದೆ, ಅಲ್ಲಿಗೆ ಕಲಾಪದ ಒಟ್ಟೂ ಉದ್ದೇಶವೇ ಫೇಲ್ ಆಗಿದೆ. ಆಪರೇಷನ್ ಕಮಲ ಎಂಬ ಭೂತ ಬಜೆಟ್ ಚರ್ಚೆಯನ್ನೇ ನುಂಗಿ ಹಾಕಿ ಅಟ್ಟಹಾಸ ಮೆರೆದಿದೆ.
2 ಲಕ್ಷ 34 ಸಾವಿರ ಕೋಟಿಗಳ ಬಜೆಟ್ ಬಗ್ಗೆ ಚರ್ಚಿಸಲು ಅಲ್ಲಿ ಯಾರಿಗೂ ವ್ಯವಧಾನವೇ ಇರಲಿಲ್ಲ. ವಿಪಕ್ಷ ಬಿಜೆಪಿಗಂತೂ ತನ್ನ ಅಧಿವೇಶನದುದ್ದಕ್ಕೂ ತನ್ನ ಅಧಿನಾಯಕ ಯಡಿಯೂರಪ್ಪನವರನ್ನು ರಕ್ಷಿಸುವುದೇ ಒಂದು ಘನಂದಾರಿ ಕೆಲಸವಾಗಿತ್ತು. ಅದಕ್ಕೆ ಅದು ಆಯ್ದುಕೊಂಡ ಮಾರ್ಗ: ಇಡೀ ಕಲಾಪವನ್ನೇ ಗಬ್ಬೆಬ್ಬಿಸುವ ನೀಚ ಮಾರ್ಗ.
ಬಜೆಟ್‍ನ ಮೂರನೇ ಒಂದು ಭಾಗದಷ್ಟಿರುವ ಲೇಖಾನುಧನವನ್ನು ಯಾವುದೇ ರ್ಚೆಯಿಲ್ಲದೇ ಪಾಸು ಮಾಡಲಾಗಿತು. ಹಿಂದೆಂದೂ ಇಂತಹ ಘಟನೆ ಸಂಭವಿಸಿರಲಿಲ್ಲ. ಆದರೆ ಈ ಸದಸನದ ಯೋಗ್ಯತೆಯೇ ಅಷ್ಟಿರುವಂತಿದೆಯಲ್ಲವೇ?
ಕಲಾಪದಲ್ಲಿ ಸ್ಪೀಕರ್ ಸಾಹೇಬರು ಪದೇ ಪದೇ ತಮ್ಮ ನೋವು ತೊಡಿಕೊಳ್ಳುವ ‘ವಿಲಕ್ಷಣ’ ಸಂದರ್ಭಗಳೇ ಸೃಷಿಯಾದವು. ಕಲಾಪ ನಡೆಯುವಂತೆ ಮಾಡಲು ಅವರು ತುಂಬ ಪ್ರಯಾಸಪಟ್ಟರೂ ಉಪಯೋಗವಾಗಲಿಲ್ಲ. ಬಜೆಟ್ ಮುನ್ನ ಸ್ಪೋಟಗೊಂಡ ಆಡಿಯೋವೇ ಎಲ್ಲವನ್ನೂ ಗುಡಿಸಿ ಹಾಕಿತು- ಆಪರೇಷನ್ ಕಮಲವನ್ನೂ, ಕಲಾಪದ ಚರ್ಚೆಯನ್ನೂ….
ಅಂತಿಮವದಲ್ಲಿ ಯಾವುದೇ ರ್ಚೆಯಿಲ್ಲದೇ ಬಜೆಟ್ ಮಂಡನೆ ಆಗುತ್ತಿದ್ದಂತೆ, ಸ್ಪೀಕರ್ ಸಾಹೇಬರು ತಮ್ಮ ಹೃದಯ ಕಿತ್ತು ಬರುತ್ತಿದೆ, ಸಾರ್ವಜನಿಕರ ಹಣದ ಬಳಕೆಯ ಬಗ್ಗೆ ಚರ್ಚೆ ನಡೆಸದೇ ಘೋರ ಅಪರಾಧ ಮಾಡಿದ್ದೇವೆ ಎಂದು ಅವಲತ್ತುಕೊಳ್ಳಬೇಕಾಗಿತು. ಆಡಳಿತ ಮತ್ತು ವಿಪಕ್ಷಗಳಿಗೆ ಮಾತ್ರ ಇದೇನೂ ಘೋರ ಅಪರಾಧ ಎನಿಸಲೇ ಇಲ್ಲ!
ಎಸ್‍ಐಟಿ ತನಿಖೆ ಬೇಡ ಎಂದು ಗದ್ದಲ ಮಾಡಿ ಎರಡು ದಿನ ಕಲಾಪವನ್ನು ಬರ್ಬಾದ್ ಮಾಡಿದ ಬಿಜೆಪಿ, ಎಸ್‍ಐಟಿ ತನಿಖೆಯೇ ಫೈನಲ್ ಎಂದು ನಿರ್ಣಯವಾದ ಮೇಲಾದರೂ ಚರ್ಚೆಗೆ ಅವಕಾಶ ಮಾಡಿಕೊಡಬಹದಿತ್ತು. ಆದರೆ ಶಾಸಕ ಪ್ರೀತಂಗೌಡರಿಗೆ ರಕ್ಷಣೆ ಕೊಡಿ ಎಂದು ಮತ್ತೆ ಒಂದೂವರೆ ದಿನಗಳ ಕಲಾಪವನ್ನು ಹಳ್ಳ ಹಿಡಿಸಿತು. ಪ್ರೀತಂಗೌಡನಿಗೆ ರಕ್ಷಣೆ ಕೊಡಲು ಪೊಲೀಸ್ ಇಲಾಖೆಯಿತ್ತಲ್ಲವೇ? ಅದನ್ನೆಲ್ಲ ಬಿಟ್ಟು ಸದಸನದ ಕಲಾಪ ಹಾಳು ಮಾಡುವ ಅಗತ್ಯವಿತ್ತೇ?
ಎಲ್ಲ ಕಲಾಪಗಳಲ್ಲೂ ಅಬ್ಬರಿಸುತ್ತಿದ್ದ ಯಡಿಯೂರಪ್ಪ ಈ ಸಲ ಎಲ್ಲ ಮುಚ್ಚಿಕೊಂಡು, ಮುಖ ಗಂಟಿಕ್ಕಿಕೊಂಡು ಕೂತದ್ದೇ ಜಾಸ್ತಿ. ಆದರೂ ಅವರಿಗೆ ಮಾನ ಮುಚ್ಚಿಕೊಳ್ಳಲಾಗಲಿಲ್ಲ. ಈ ಅಧಿವೇಶನದ ಇನ್ನೊಂದು ಅಂಶವೆಂದರೆ, ಮಾಧುಸ್ವಾಮಿಯವರಂತಹ ಹಿರಿಯ ಸಂಸದೀಯ ಪಟು ಲಜ್ಜೆ ಬಿಟ್ಟು ಯಡಿಯೂರಪ್ಪನವರ ಸಮರ್ಥನೆಗೆ ಇಳಿದಿದ್ದು!
ಈ ಅಧಿವೇಶನದ ಲಾಭವಾಗಿದ್ದು ಮೈತ್ತಿ ಪಕ್ಷಗಳಿಗೆ ಮಾತ್ರ. ಆಪರೇಷನ್ ಕಮಲವನ್ನು ಹೊಡೆದು ಹಾಕುವ ಮೂಲಕ ಮೈತ್ರಿಬಣದಲ್ಲಿ ಮೂಡಿದ್ದ ಬಿರುಕನ್ನು ಅವು ನಿವಾರಿಸಿಕೊಂಡವು.
ಹಿಂದೆ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ, ನಂತರ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರವಿದ್ದಾಗಲೂ ಸದನದ ಕಲಾಪಗಳು ಹೀಗೇ ಬಲಿಯಾಗಿದ್ದವು. ತಮ್ಮ ಪಕ್ಷಗಳ ನಡುವಿನ ಕಿತ್ತಾಟದ ರಾಜಕೀಯವನ್ನು ಸದನದಲ್ಲಿ ಚಚಿಚ್ಸಲು ನಾವು ಅವರನ್ನು ಅಲ್ಲಿಗೆ ಕಳಿಸಿದ್ದೇವಾ ಎಂಬ ಪ್ರಶ್ನೆ ಜನರನ್ನು ಕಾಡದೇ ಇರದು. ಯಾವುದೇ ಚರ್ಚೆಯಿಲ್ಲದೇ ಮಸೂದೆಗಳನ್ನು ಧ್ವನಿಮತದ ಮೂಲಕ ಪಾಸು ಮಾಡುವುದಾದರೆ ಈ ಶಾಸಕರು ಸದನದಲ್ಲಿ ಕಿತ್ತು ಹಾಕುವುದಾದರೂ ಏನನ್ನು ಎಂದು ಪ್ರಶ್ನಿಸುವ ಸಮಯ ಬಂದಿದೆಯಲ್ಲವೇ?
ಹಿಂದೆ ಆಗಿನ್ನೂ ಸಂಸದಿಯ ವ್ಯವಸ್ಥೆ ಬಾಲ್ಯಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲೇ, ಬಜೆಟ್ ಅಧಿವೇಶನ 6 ದಿನಗಳ ಅವಧಿಯನ್ನು ಹೊಂದಿರುತ್ತಿತ್ತು. ದಿವಾನರ ಭಾಷಣ, ಪ್ರಶ್ನೆಗಳು ಮತ್ತು ಸರ್ಕಾರಿ ಕಲಾಪಕ್ಕಾಗಿ 1 ದಿನ, ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗಾಗಿ ಗರಿಷ್ಠ 2 ದಿನ, ಬಜೆಟ್ ಮೇಲಿನ ನಿರ್ಣಯಗಳಿಗಾಗಿ 1 ದಿನ, ಅರಿಕೆಗಳಿಗಾಗಿ 1 ದಿನ ಮತ್ತು ಇತರ ನಿರ್ಣಯಗಳಿಗಾಗಿ 1 ದಿನವನ್ನು ನಿಗದಿಪಡಿಸಲಾಗಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಬಜೆಟ್ ರ್ಚೆಗಳು ಕೇವಲ ದೂಷಾರೋಪಣೆಯಲ್ಲೇ ಮುಗಿದು ಹೋಗುತ್ತಿವೆ. ಕಳೆದ ವಾರ ಮುಗಿದ ಬಜೆಟ್ ಅಧಿವೇಶನವಂತೂ ಚರ್ಚೆಯಿಲ್ಲದೇ ಬಜೆಟ್ ಪಾಸು ಮಾಡಿ ‘ದಾಖಲೆ’ ಬರೆದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...