Homeಕರ್ನಾಟಕಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

- Advertisement -
- Advertisement -

-ಮಲ್ಲಿ |

ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ ‘ವೇಷಣಗಳು’ ಕಳಚಿಬಿದ್ದಿದ್ದಂತೂ ಸತ್ಯ. ಹಾಗೆಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟಕ್ಕೆ ಕಲಾಪ ಬಲಿಯಾಗಿದ್ದೂ ನಿಜ.
ರಾಜ್ಯ ಸರ್ಕಾರದ ಒಂದು ವರ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಚೌಕಟ್ಟಿನ ಮುನ್ನೋಟ ನೀಡುವ ಮಹತ್ವದ ಬಜೆಟ್ ಯಾವುದೇ ಅಂಗೀಕಾರವಿಲ್ಲದೇ ಅನುಮೋದನೆ ಪಡೆದಿದೆ. ಅಂದರೆ ಪಾಸ್ ಆಗಿದೆ, ಅಲ್ಲಿಗೆ ಕಲಾಪದ ಒಟ್ಟೂ ಉದ್ದೇಶವೇ ಫೇಲ್ ಆಗಿದೆ. ಆಪರೇಷನ್ ಕಮಲ ಎಂಬ ಭೂತ ಬಜೆಟ್ ಚರ್ಚೆಯನ್ನೇ ನುಂಗಿ ಹಾಕಿ ಅಟ್ಟಹಾಸ ಮೆರೆದಿದೆ.
2 ಲಕ್ಷ 34 ಸಾವಿರ ಕೋಟಿಗಳ ಬಜೆಟ್ ಬಗ್ಗೆ ಚರ್ಚಿಸಲು ಅಲ್ಲಿ ಯಾರಿಗೂ ವ್ಯವಧಾನವೇ ಇರಲಿಲ್ಲ. ವಿಪಕ್ಷ ಬಿಜೆಪಿಗಂತೂ ತನ್ನ ಅಧಿವೇಶನದುದ್ದಕ್ಕೂ ತನ್ನ ಅಧಿನಾಯಕ ಯಡಿಯೂರಪ್ಪನವರನ್ನು ರಕ್ಷಿಸುವುದೇ ಒಂದು ಘನಂದಾರಿ ಕೆಲಸವಾಗಿತ್ತು. ಅದಕ್ಕೆ ಅದು ಆಯ್ದುಕೊಂಡ ಮಾರ್ಗ: ಇಡೀ ಕಲಾಪವನ್ನೇ ಗಬ್ಬೆಬ್ಬಿಸುವ ನೀಚ ಮಾರ್ಗ.
ಬಜೆಟ್‍ನ ಮೂರನೇ ಒಂದು ಭಾಗದಷ್ಟಿರುವ ಲೇಖಾನುಧನವನ್ನು ಯಾವುದೇ ರ್ಚೆಯಿಲ್ಲದೇ ಪಾಸು ಮಾಡಲಾಗಿತು. ಹಿಂದೆಂದೂ ಇಂತಹ ಘಟನೆ ಸಂಭವಿಸಿರಲಿಲ್ಲ. ಆದರೆ ಈ ಸದಸನದ ಯೋಗ್ಯತೆಯೇ ಅಷ್ಟಿರುವಂತಿದೆಯಲ್ಲವೇ?
ಕಲಾಪದಲ್ಲಿ ಸ್ಪೀಕರ್ ಸಾಹೇಬರು ಪದೇ ಪದೇ ತಮ್ಮ ನೋವು ತೊಡಿಕೊಳ್ಳುವ ‘ವಿಲಕ್ಷಣ’ ಸಂದರ್ಭಗಳೇ ಸೃಷಿಯಾದವು. ಕಲಾಪ ನಡೆಯುವಂತೆ ಮಾಡಲು ಅವರು ತುಂಬ ಪ್ರಯಾಸಪಟ್ಟರೂ ಉಪಯೋಗವಾಗಲಿಲ್ಲ. ಬಜೆಟ್ ಮುನ್ನ ಸ್ಪೋಟಗೊಂಡ ಆಡಿಯೋವೇ ಎಲ್ಲವನ್ನೂ ಗುಡಿಸಿ ಹಾಕಿತು- ಆಪರೇಷನ್ ಕಮಲವನ್ನೂ, ಕಲಾಪದ ಚರ್ಚೆಯನ್ನೂ….
ಅಂತಿಮವದಲ್ಲಿ ಯಾವುದೇ ರ್ಚೆಯಿಲ್ಲದೇ ಬಜೆಟ್ ಮಂಡನೆ ಆಗುತ್ತಿದ್ದಂತೆ, ಸ್ಪೀಕರ್ ಸಾಹೇಬರು ತಮ್ಮ ಹೃದಯ ಕಿತ್ತು ಬರುತ್ತಿದೆ, ಸಾರ್ವಜನಿಕರ ಹಣದ ಬಳಕೆಯ ಬಗ್ಗೆ ಚರ್ಚೆ ನಡೆಸದೇ ಘೋರ ಅಪರಾಧ ಮಾಡಿದ್ದೇವೆ ಎಂದು ಅವಲತ್ತುಕೊಳ್ಳಬೇಕಾಗಿತು. ಆಡಳಿತ ಮತ್ತು ವಿಪಕ್ಷಗಳಿಗೆ ಮಾತ್ರ ಇದೇನೂ ಘೋರ ಅಪರಾಧ ಎನಿಸಲೇ ಇಲ್ಲ!
ಎಸ್‍ಐಟಿ ತನಿಖೆ ಬೇಡ ಎಂದು ಗದ್ದಲ ಮಾಡಿ ಎರಡು ದಿನ ಕಲಾಪವನ್ನು ಬರ್ಬಾದ್ ಮಾಡಿದ ಬಿಜೆಪಿ, ಎಸ್‍ಐಟಿ ತನಿಖೆಯೇ ಫೈನಲ್ ಎಂದು ನಿರ್ಣಯವಾದ ಮೇಲಾದರೂ ಚರ್ಚೆಗೆ ಅವಕಾಶ ಮಾಡಿಕೊಡಬಹದಿತ್ತು. ಆದರೆ ಶಾಸಕ ಪ್ರೀತಂಗೌಡರಿಗೆ ರಕ್ಷಣೆ ಕೊಡಿ ಎಂದು ಮತ್ತೆ ಒಂದೂವರೆ ದಿನಗಳ ಕಲಾಪವನ್ನು ಹಳ್ಳ ಹಿಡಿಸಿತು. ಪ್ರೀತಂಗೌಡನಿಗೆ ರಕ್ಷಣೆ ಕೊಡಲು ಪೊಲೀಸ್ ಇಲಾಖೆಯಿತ್ತಲ್ಲವೇ? ಅದನ್ನೆಲ್ಲ ಬಿಟ್ಟು ಸದಸನದ ಕಲಾಪ ಹಾಳು ಮಾಡುವ ಅಗತ್ಯವಿತ್ತೇ?
ಎಲ್ಲ ಕಲಾಪಗಳಲ್ಲೂ ಅಬ್ಬರಿಸುತ್ತಿದ್ದ ಯಡಿಯೂರಪ್ಪ ಈ ಸಲ ಎಲ್ಲ ಮುಚ್ಚಿಕೊಂಡು, ಮುಖ ಗಂಟಿಕ್ಕಿಕೊಂಡು ಕೂತದ್ದೇ ಜಾಸ್ತಿ. ಆದರೂ ಅವರಿಗೆ ಮಾನ ಮುಚ್ಚಿಕೊಳ್ಳಲಾಗಲಿಲ್ಲ. ಈ ಅಧಿವೇಶನದ ಇನ್ನೊಂದು ಅಂಶವೆಂದರೆ, ಮಾಧುಸ್ವಾಮಿಯವರಂತಹ ಹಿರಿಯ ಸಂಸದೀಯ ಪಟು ಲಜ್ಜೆ ಬಿಟ್ಟು ಯಡಿಯೂರಪ್ಪನವರ ಸಮರ್ಥನೆಗೆ ಇಳಿದಿದ್ದು!
ಈ ಅಧಿವೇಶನದ ಲಾಭವಾಗಿದ್ದು ಮೈತ್ತಿ ಪಕ್ಷಗಳಿಗೆ ಮಾತ್ರ. ಆಪರೇಷನ್ ಕಮಲವನ್ನು ಹೊಡೆದು ಹಾಕುವ ಮೂಲಕ ಮೈತ್ರಿಬಣದಲ್ಲಿ ಮೂಡಿದ್ದ ಬಿರುಕನ್ನು ಅವು ನಿವಾರಿಸಿಕೊಂಡವು.
ಹಿಂದೆ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ, ನಂತರ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರವಿದ್ದಾಗಲೂ ಸದನದ ಕಲಾಪಗಳು ಹೀಗೇ ಬಲಿಯಾಗಿದ್ದವು. ತಮ್ಮ ಪಕ್ಷಗಳ ನಡುವಿನ ಕಿತ್ತಾಟದ ರಾಜಕೀಯವನ್ನು ಸದನದಲ್ಲಿ ಚಚಿಚ್ಸಲು ನಾವು ಅವರನ್ನು ಅಲ್ಲಿಗೆ ಕಳಿಸಿದ್ದೇವಾ ಎಂಬ ಪ್ರಶ್ನೆ ಜನರನ್ನು ಕಾಡದೇ ಇರದು. ಯಾವುದೇ ಚರ್ಚೆಯಿಲ್ಲದೇ ಮಸೂದೆಗಳನ್ನು ಧ್ವನಿಮತದ ಮೂಲಕ ಪಾಸು ಮಾಡುವುದಾದರೆ ಈ ಶಾಸಕರು ಸದನದಲ್ಲಿ ಕಿತ್ತು ಹಾಕುವುದಾದರೂ ಏನನ್ನು ಎಂದು ಪ್ರಶ್ನಿಸುವ ಸಮಯ ಬಂದಿದೆಯಲ್ಲವೇ?
ಹಿಂದೆ ಆಗಿನ್ನೂ ಸಂಸದಿಯ ವ್ಯವಸ್ಥೆ ಬಾಲ್ಯಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲೇ, ಬಜೆಟ್ ಅಧಿವೇಶನ 6 ದಿನಗಳ ಅವಧಿಯನ್ನು ಹೊಂದಿರುತ್ತಿತ್ತು. ದಿವಾನರ ಭಾಷಣ, ಪ್ರಶ್ನೆಗಳು ಮತ್ತು ಸರ್ಕಾರಿ ಕಲಾಪಕ್ಕಾಗಿ 1 ದಿನ, ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗಾಗಿ ಗರಿಷ್ಠ 2 ದಿನ, ಬಜೆಟ್ ಮೇಲಿನ ನಿರ್ಣಯಗಳಿಗಾಗಿ 1 ದಿನ, ಅರಿಕೆಗಳಿಗಾಗಿ 1 ದಿನ ಮತ್ತು ಇತರ ನಿರ್ಣಯಗಳಿಗಾಗಿ 1 ದಿನವನ್ನು ನಿಗದಿಪಡಿಸಲಾಗಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಬಜೆಟ್ ರ್ಚೆಗಳು ಕೇವಲ ದೂಷಾರೋಪಣೆಯಲ್ಲೇ ಮುಗಿದು ಹೋಗುತ್ತಿವೆ. ಕಳೆದ ವಾರ ಮುಗಿದ ಬಜೆಟ್ ಅಧಿವೇಶನವಂತೂ ಚರ್ಚೆಯಿಲ್ಲದೇ ಬಜೆಟ್ ಪಾಸು ಮಾಡಿ ‘ದಾಖಲೆ’ ಬರೆದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...