Homeಕರ್ನಾಟಕಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

- Advertisement -
- Advertisement -

-ಮಲ್ಲಿ |

ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ ‘ವೇಷಣಗಳು’ ಕಳಚಿಬಿದ್ದಿದ್ದಂತೂ ಸತ್ಯ. ಹಾಗೆಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟಕ್ಕೆ ಕಲಾಪ ಬಲಿಯಾಗಿದ್ದೂ ನಿಜ.
ರಾಜ್ಯ ಸರ್ಕಾರದ ಒಂದು ವರ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಚೌಕಟ್ಟಿನ ಮುನ್ನೋಟ ನೀಡುವ ಮಹತ್ವದ ಬಜೆಟ್ ಯಾವುದೇ ಅಂಗೀಕಾರವಿಲ್ಲದೇ ಅನುಮೋದನೆ ಪಡೆದಿದೆ. ಅಂದರೆ ಪಾಸ್ ಆಗಿದೆ, ಅಲ್ಲಿಗೆ ಕಲಾಪದ ಒಟ್ಟೂ ಉದ್ದೇಶವೇ ಫೇಲ್ ಆಗಿದೆ. ಆಪರೇಷನ್ ಕಮಲ ಎಂಬ ಭೂತ ಬಜೆಟ್ ಚರ್ಚೆಯನ್ನೇ ನುಂಗಿ ಹಾಕಿ ಅಟ್ಟಹಾಸ ಮೆರೆದಿದೆ.
2 ಲಕ್ಷ 34 ಸಾವಿರ ಕೋಟಿಗಳ ಬಜೆಟ್ ಬಗ್ಗೆ ಚರ್ಚಿಸಲು ಅಲ್ಲಿ ಯಾರಿಗೂ ವ್ಯವಧಾನವೇ ಇರಲಿಲ್ಲ. ವಿಪಕ್ಷ ಬಿಜೆಪಿಗಂತೂ ತನ್ನ ಅಧಿವೇಶನದುದ್ದಕ್ಕೂ ತನ್ನ ಅಧಿನಾಯಕ ಯಡಿಯೂರಪ್ಪನವರನ್ನು ರಕ್ಷಿಸುವುದೇ ಒಂದು ಘನಂದಾರಿ ಕೆಲಸವಾಗಿತ್ತು. ಅದಕ್ಕೆ ಅದು ಆಯ್ದುಕೊಂಡ ಮಾರ್ಗ: ಇಡೀ ಕಲಾಪವನ್ನೇ ಗಬ್ಬೆಬ್ಬಿಸುವ ನೀಚ ಮಾರ್ಗ.
ಬಜೆಟ್‍ನ ಮೂರನೇ ಒಂದು ಭಾಗದಷ್ಟಿರುವ ಲೇಖಾನುಧನವನ್ನು ಯಾವುದೇ ರ್ಚೆಯಿಲ್ಲದೇ ಪಾಸು ಮಾಡಲಾಗಿತು. ಹಿಂದೆಂದೂ ಇಂತಹ ಘಟನೆ ಸಂಭವಿಸಿರಲಿಲ್ಲ. ಆದರೆ ಈ ಸದಸನದ ಯೋಗ್ಯತೆಯೇ ಅಷ್ಟಿರುವಂತಿದೆಯಲ್ಲವೇ?
ಕಲಾಪದಲ್ಲಿ ಸ್ಪೀಕರ್ ಸಾಹೇಬರು ಪದೇ ಪದೇ ತಮ್ಮ ನೋವು ತೊಡಿಕೊಳ್ಳುವ ‘ವಿಲಕ್ಷಣ’ ಸಂದರ್ಭಗಳೇ ಸೃಷಿಯಾದವು. ಕಲಾಪ ನಡೆಯುವಂತೆ ಮಾಡಲು ಅವರು ತುಂಬ ಪ್ರಯಾಸಪಟ್ಟರೂ ಉಪಯೋಗವಾಗಲಿಲ್ಲ. ಬಜೆಟ್ ಮುನ್ನ ಸ್ಪೋಟಗೊಂಡ ಆಡಿಯೋವೇ ಎಲ್ಲವನ್ನೂ ಗುಡಿಸಿ ಹಾಕಿತು- ಆಪರೇಷನ್ ಕಮಲವನ್ನೂ, ಕಲಾಪದ ಚರ್ಚೆಯನ್ನೂ….
ಅಂತಿಮವದಲ್ಲಿ ಯಾವುದೇ ರ್ಚೆಯಿಲ್ಲದೇ ಬಜೆಟ್ ಮಂಡನೆ ಆಗುತ್ತಿದ್ದಂತೆ, ಸ್ಪೀಕರ್ ಸಾಹೇಬರು ತಮ್ಮ ಹೃದಯ ಕಿತ್ತು ಬರುತ್ತಿದೆ, ಸಾರ್ವಜನಿಕರ ಹಣದ ಬಳಕೆಯ ಬಗ್ಗೆ ಚರ್ಚೆ ನಡೆಸದೇ ಘೋರ ಅಪರಾಧ ಮಾಡಿದ್ದೇವೆ ಎಂದು ಅವಲತ್ತುಕೊಳ್ಳಬೇಕಾಗಿತು. ಆಡಳಿತ ಮತ್ತು ವಿಪಕ್ಷಗಳಿಗೆ ಮಾತ್ರ ಇದೇನೂ ಘೋರ ಅಪರಾಧ ಎನಿಸಲೇ ಇಲ್ಲ!
ಎಸ್‍ಐಟಿ ತನಿಖೆ ಬೇಡ ಎಂದು ಗದ್ದಲ ಮಾಡಿ ಎರಡು ದಿನ ಕಲಾಪವನ್ನು ಬರ್ಬಾದ್ ಮಾಡಿದ ಬಿಜೆಪಿ, ಎಸ್‍ಐಟಿ ತನಿಖೆಯೇ ಫೈನಲ್ ಎಂದು ನಿರ್ಣಯವಾದ ಮೇಲಾದರೂ ಚರ್ಚೆಗೆ ಅವಕಾಶ ಮಾಡಿಕೊಡಬಹದಿತ್ತು. ಆದರೆ ಶಾಸಕ ಪ್ರೀತಂಗೌಡರಿಗೆ ರಕ್ಷಣೆ ಕೊಡಿ ಎಂದು ಮತ್ತೆ ಒಂದೂವರೆ ದಿನಗಳ ಕಲಾಪವನ್ನು ಹಳ್ಳ ಹಿಡಿಸಿತು. ಪ್ರೀತಂಗೌಡನಿಗೆ ರಕ್ಷಣೆ ಕೊಡಲು ಪೊಲೀಸ್ ಇಲಾಖೆಯಿತ್ತಲ್ಲವೇ? ಅದನ್ನೆಲ್ಲ ಬಿಟ್ಟು ಸದಸನದ ಕಲಾಪ ಹಾಳು ಮಾಡುವ ಅಗತ್ಯವಿತ್ತೇ?
ಎಲ್ಲ ಕಲಾಪಗಳಲ್ಲೂ ಅಬ್ಬರಿಸುತ್ತಿದ್ದ ಯಡಿಯೂರಪ್ಪ ಈ ಸಲ ಎಲ್ಲ ಮುಚ್ಚಿಕೊಂಡು, ಮುಖ ಗಂಟಿಕ್ಕಿಕೊಂಡು ಕೂತದ್ದೇ ಜಾಸ್ತಿ. ಆದರೂ ಅವರಿಗೆ ಮಾನ ಮುಚ್ಚಿಕೊಳ್ಳಲಾಗಲಿಲ್ಲ. ಈ ಅಧಿವೇಶನದ ಇನ್ನೊಂದು ಅಂಶವೆಂದರೆ, ಮಾಧುಸ್ವಾಮಿಯವರಂತಹ ಹಿರಿಯ ಸಂಸದೀಯ ಪಟು ಲಜ್ಜೆ ಬಿಟ್ಟು ಯಡಿಯೂರಪ್ಪನವರ ಸಮರ್ಥನೆಗೆ ಇಳಿದಿದ್ದು!
ಈ ಅಧಿವೇಶನದ ಲಾಭವಾಗಿದ್ದು ಮೈತ್ತಿ ಪಕ್ಷಗಳಿಗೆ ಮಾತ್ರ. ಆಪರೇಷನ್ ಕಮಲವನ್ನು ಹೊಡೆದು ಹಾಕುವ ಮೂಲಕ ಮೈತ್ರಿಬಣದಲ್ಲಿ ಮೂಡಿದ್ದ ಬಿರುಕನ್ನು ಅವು ನಿವಾರಿಸಿಕೊಂಡವು.
ಹಿಂದೆ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ, ನಂತರ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರವಿದ್ದಾಗಲೂ ಸದನದ ಕಲಾಪಗಳು ಹೀಗೇ ಬಲಿಯಾಗಿದ್ದವು. ತಮ್ಮ ಪಕ್ಷಗಳ ನಡುವಿನ ಕಿತ್ತಾಟದ ರಾಜಕೀಯವನ್ನು ಸದನದಲ್ಲಿ ಚಚಿಚ್ಸಲು ನಾವು ಅವರನ್ನು ಅಲ್ಲಿಗೆ ಕಳಿಸಿದ್ದೇವಾ ಎಂಬ ಪ್ರಶ್ನೆ ಜನರನ್ನು ಕಾಡದೇ ಇರದು. ಯಾವುದೇ ಚರ್ಚೆಯಿಲ್ಲದೇ ಮಸೂದೆಗಳನ್ನು ಧ್ವನಿಮತದ ಮೂಲಕ ಪಾಸು ಮಾಡುವುದಾದರೆ ಈ ಶಾಸಕರು ಸದನದಲ್ಲಿ ಕಿತ್ತು ಹಾಕುವುದಾದರೂ ಏನನ್ನು ಎಂದು ಪ್ರಶ್ನಿಸುವ ಸಮಯ ಬಂದಿದೆಯಲ್ಲವೇ?
ಹಿಂದೆ ಆಗಿನ್ನೂ ಸಂಸದಿಯ ವ್ಯವಸ್ಥೆ ಬಾಲ್ಯಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲೇ, ಬಜೆಟ್ ಅಧಿವೇಶನ 6 ದಿನಗಳ ಅವಧಿಯನ್ನು ಹೊಂದಿರುತ್ತಿತ್ತು. ದಿವಾನರ ಭಾಷಣ, ಪ್ರಶ್ನೆಗಳು ಮತ್ತು ಸರ್ಕಾರಿ ಕಲಾಪಕ್ಕಾಗಿ 1 ದಿನ, ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗಾಗಿ ಗರಿಷ್ಠ 2 ದಿನ, ಬಜೆಟ್ ಮೇಲಿನ ನಿರ್ಣಯಗಳಿಗಾಗಿ 1 ದಿನ, ಅರಿಕೆಗಳಿಗಾಗಿ 1 ದಿನ ಮತ್ತು ಇತರ ನಿರ್ಣಯಗಳಿಗಾಗಿ 1 ದಿನವನ್ನು ನಿಗದಿಪಡಿಸಲಾಗಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಬಜೆಟ್ ರ್ಚೆಗಳು ಕೇವಲ ದೂಷಾರೋಪಣೆಯಲ್ಲೇ ಮುಗಿದು ಹೋಗುತ್ತಿವೆ. ಕಳೆದ ವಾರ ಮುಗಿದ ಬಜೆಟ್ ಅಧಿವೇಶನವಂತೂ ಚರ್ಚೆಯಿಲ್ಲದೇ ಬಜೆಟ್ ಪಾಸು ಮಾಡಿ ‘ದಾಖಲೆ’ ಬರೆದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...