Homeಕರ್ನಾಟಕಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

- Advertisement -
- Advertisement -

-ಮಲ್ಲಿ |

ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ ‘ವೇಷಣಗಳು’ ಕಳಚಿಬಿದ್ದಿದ್ದಂತೂ ಸತ್ಯ. ಹಾಗೆಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟಕ್ಕೆ ಕಲಾಪ ಬಲಿಯಾಗಿದ್ದೂ ನಿಜ.
ರಾಜ್ಯ ಸರ್ಕಾರದ ಒಂದು ವರ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಚೌಕಟ್ಟಿನ ಮುನ್ನೋಟ ನೀಡುವ ಮಹತ್ವದ ಬಜೆಟ್ ಯಾವುದೇ ಅಂಗೀಕಾರವಿಲ್ಲದೇ ಅನುಮೋದನೆ ಪಡೆದಿದೆ. ಅಂದರೆ ಪಾಸ್ ಆಗಿದೆ, ಅಲ್ಲಿಗೆ ಕಲಾಪದ ಒಟ್ಟೂ ಉದ್ದೇಶವೇ ಫೇಲ್ ಆಗಿದೆ. ಆಪರೇಷನ್ ಕಮಲ ಎಂಬ ಭೂತ ಬಜೆಟ್ ಚರ್ಚೆಯನ್ನೇ ನುಂಗಿ ಹಾಕಿ ಅಟ್ಟಹಾಸ ಮೆರೆದಿದೆ.
2 ಲಕ್ಷ 34 ಸಾವಿರ ಕೋಟಿಗಳ ಬಜೆಟ್ ಬಗ್ಗೆ ಚರ್ಚಿಸಲು ಅಲ್ಲಿ ಯಾರಿಗೂ ವ್ಯವಧಾನವೇ ಇರಲಿಲ್ಲ. ವಿಪಕ್ಷ ಬಿಜೆಪಿಗಂತೂ ತನ್ನ ಅಧಿವೇಶನದುದ್ದಕ್ಕೂ ತನ್ನ ಅಧಿನಾಯಕ ಯಡಿಯೂರಪ್ಪನವರನ್ನು ರಕ್ಷಿಸುವುದೇ ಒಂದು ಘನಂದಾರಿ ಕೆಲಸವಾಗಿತ್ತು. ಅದಕ್ಕೆ ಅದು ಆಯ್ದುಕೊಂಡ ಮಾರ್ಗ: ಇಡೀ ಕಲಾಪವನ್ನೇ ಗಬ್ಬೆಬ್ಬಿಸುವ ನೀಚ ಮಾರ್ಗ.
ಬಜೆಟ್‍ನ ಮೂರನೇ ಒಂದು ಭಾಗದಷ್ಟಿರುವ ಲೇಖಾನುಧನವನ್ನು ಯಾವುದೇ ರ್ಚೆಯಿಲ್ಲದೇ ಪಾಸು ಮಾಡಲಾಗಿತು. ಹಿಂದೆಂದೂ ಇಂತಹ ಘಟನೆ ಸಂಭವಿಸಿರಲಿಲ್ಲ. ಆದರೆ ಈ ಸದಸನದ ಯೋಗ್ಯತೆಯೇ ಅಷ್ಟಿರುವಂತಿದೆಯಲ್ಲವೇ?
ಕಲಾಪದಲ್ಲಿ ಸ್ಪೀಕರ್ ಸಾಹೇಬರು ಪದೇ ಪದೇ ತಮ್ಮ ನೋವು ತೊಡಿಕೊಳ್ಳುವ ‘ವಿಲಕ್ಷಣ’ ಸಂದರ್ಭಗಳೇ ಸೃಷಿಯಾದವು. ಕಲಾಪ ನಡೆಯುವಂತೆ ಮಾಡಲು ಅವರು ತುಂಬ ಪ್ರಯಾಸಪಟ್ಟರೂ ಉಪಯೋಗವಾಗಲಿಲ್ಲ. ಬಜೆಟ್ ಮುನ್ನ ಸ್ಪೋಟಗೊಂಡ ಆಡಿಯೋವೇ ಎಲ್ಲವನ್ನೂ ಗುಡಿಸಿ ಹಾಕಿತು- ಆಪರೇಷನ್ ಕಮಲವನ್ನೂ, ಕಲಾಪದ ಚರ್ಚೆಯನ್ನೂ….
ಅಂತಿಮವದಲ್ಲಿ ಯಾವುದೇ ರ್ಚೆಯಿಲ್ಲದೇ ಬಜೆಟ್ ಮಂಡನೆ ಆಗುತ್ತಿದ್ದಂತೆ, ಸ್ಪೀಕರ್ ಸಾಹೇಬರು ತಮ್ಮ ಹೃದಯ ಕಿತ್ತು ಬರುತ್ತಿದೆ, ಸಾರ್ವಜನಿಕರ ಹಣದ ಬಳಕೆಯ ಬಗ್ಗೆ ಚರ್ಚೆ ನಡೆಸದೇ ಘೋರ ಅಪರಾಧ ಮಾಡಿದ್ದೇವೆ ಎಂದು ಅವಲತ್ತುಕೊಳ್ಳಬೇಕಾಗಿತು. ಆಡಳಿತ ಮತ್ತು ವಿಪಕ್ಷಗಳಿಗೆ ಮಾತ್ರ ಇದೇನೂ ಘೋರ ಅಪರಾಧ ಎನಿಸಲೇ ಇಲ್ಲ!
ಎಸ್‍ಐಟಿ ತನಿಖೆ ಬೇಡ ಎಂದು ಗದ್ದಲ ಮಾಡಿ ಎರಡು ದಿನ ಕಲಾಪವನ್ನು ಬರ್ಬಾದ್ ಮಾಡಿದ ಬಿಜೆಪಿ, ಎಸ್‍ಐಟಿ ತನಿಖೆಯೇ ಫೈನಲ್ ಎಂದು ನಿರ್ಣಯವಾದ ಮೇಲಾದರೂ ಚರ್ಚೆಗೆ ಅವಕಾಶ ಮಾಡಿಕೊಡಬಹದಿತ್ತು. ಆದರೆ ಶಾಸಕ ಪ್ರೀತಂಗೌಡರಿಗೆ ರಕ್ಷಣೆ ಕೊಡಿ ಎಂದು ಮತ್ತೆ ಒಂದೂವರೆ ದಿನಗಳ ಕಲಾಪವನ್ನು ಹಳ್ಳ ಹಿಡಿಸಿತು. ಪ್ರೀತಂಗೌಡನಿಗೆ ರಕ್ಷಣೆ ಕೊಡಲು ಪೊಲೀಸ್ ಇಲಾಖೆಯಿತ್ತಲ್ಲವೇ? ಅದನ್ನೆಲ್ಲ ಬಿಟ್ಟು ಸದಸನದ ಕಲಾಪ ಹಾಳು ಮಾಡುವ ಅಗತ್ಯವಿತ್ತೇ?
ಎಲ್ಲ ಕಲಾಪಗಳಲ್ಲೂ ಅಬ್ಬರಿಸುತ್ತಿದ್ದ ಯಡಿಯೂರಪ್ಪ ಈ ಸಲ ಎಲ್ಲ ಮುಚ್ಚಿಕೊಂಡು, ಮುಖ ಗಂಟಿಕ್ಕಿಕೊಂಡು ಕೂತದ್ದೇ ಜಾಸ್ತಿ. ಆದರೂ ಅವರಿಗೆ ಮಾನ ಮುಚ್ಚಿಕೊಳ್ಳಲಾಗಲಿಲ್ಲ. ಈ ಅಧಿವೇಶನದ ಇನ್ನೊಂದು ಅಂಶವೆಂದರೆ, ಮಾಧುಸ್ವಾಮಿಯವರಂತಹ ಹಿರಿಯ ಸಂಸದೀಯ ಪಟು ಲಜ್ಜೆ ಬಿಟ್ಟು ಯಡಿಯೂರಪ್ಪನವರ ಸಮರ್ಥನೆಗೆ ಇಳಿದಿದ್ದು!
ಈ ಅಧಿವೇಶನದ ಲಾಭವಾಗಿದ್ದು ಮೈತ್ತಿ ಪಕ್ಷಗಳಿಗೆ ಮಾತ್ರ. ಆಪರೇಷನ್ ಕಮಲವನ್ನು ಹೊಡೆದು ಹಾಕುವ ಮೂಲಕ ಮೈತ್ರಿಬಣದಲ್ಲಿ ಮೂಡಿದ್ದ ಬಿರುಕನ್ನು ಅವು ನಿವಾರಿಸಿಕೊಂಡವು.
ಹಿಂದೆ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ, ನಂತರ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರವಿದ್ದಾಗಲೂ ಸದನದ ಕಲಾಪಗಳು ಹೀಗೇ ಬಲಿಯಾಗಿದ್ದವು. ತಮ್ಮ ಪಕ್ಷಗಳ ನಡುವಿನ ಕಿತ್ತಾಟದ ರಾಜಕೀಯವನ್ನು ಸದನದಲ್ಲಿ ಚಚಿಚ್ಸಲು ನಾವು ಅವರನ್ನು ಅಲ್ಲಿಗೆ ಕಳಿಸಿದ್ದೇವಾ ಎಂಬ ಪ್ರಶ್ನೆ ಜನರನ್ನು ಕಾಡದೇ ಇರದು. ಯಾವುದೇ ಚರ್ಚೆಯಿಲ್ಲದೇ ಮಸೂದೆಗಳನ್ನು ಧ್ವನಿಮತದ ಮೂಲಕ ಪಾಸು ಮಾಡುವುದಾದರೆ ಈ ಶಾಸಕರು ಸದನದಲ್ಲಿ ಕಿತ್ತು ಹಾಕುವುದಾದರೂ ಏನನ್ನು ಎಂದು ಪ್ರಶ್ನಿಸುವ ಸಮಯ ಬಂದಿದೆಯಲ್ಲವೇ?
ಹಿಂದೆ ಆಗಿನ್ನೂ ಸಂಸದಿಯ ವ್ಯವಸ್ಥೆ ಬಾಲ್ಯಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲೇ, ಬಜೆಟ್ ಅಧಿವೇಶನ 6 ದಿನಗಳ ಅವಧಿಯನ್ನು ಹೊಂದಿರುತ್ತಿತ್ತು. ದಿವಾನರ ಭಾಷಣ, ಪ್ರಶ್ನೆಗಳು ಮತ್ತು ಸರ್ಕಾರಿ ಕಲಾಪಕ್ಕಾಗಿ 1 ದಿನ, ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗಾಗಿ ಗರಿಷ್ಠ 2 ದಿನ, ಬಜೆಟ್ ಮೇಲಿನ ನಿರ್ಣಯಗಳಿಗಾಗಿ 1 ದಿನ, ಅರಿಕೆಗಳಿಗಾಗಿ 1 ದಿನ ಮತ್ತು ಇತರ ನಿರ್ಣಯಗಳಿಗಾಗಿ 1 ದಿನವನ್ನು ನಿಗದಿಪಡಿಸಲಾಗಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಬಜೆಟ್ ರ್ಚೆಗಳು ಕೇವಲ ದೂಷಾರೋಪಣೆಯಲ್ಲೇ ಮುಗಿದು ಹೋಗುತ್ತಿವೆ. ಕಳೆದ ವಾರ ಮುಗಿದ ಬಜೆಟ್ ಅಧಿವೇಶನವಂತೂ ಚರ್ಚೆಯಿಲ್ಲದೇ ಬಜೆಟ್ ಪಾಸು ಮಾಡಿ ‘ದಾಖಲೆ’ ಬರೆದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...