Homeಅಂಕಣಗಳುಬಸವತತ್ವ ವಿರೋಧಿ ಮೋದಿಯ ಸಾನಿಧ್ಯ!, ಇಷ್ಟಲಿಂಗ ಪೂಜೆ ಹೆಸರಲ್ಲಿ ಬಿಜೆಪಿಯ ಧಗಲ್ಬಾಜಿ...

ಬಸವತತ್ವ ವಿರೋಧಿ ಮೋದಿಯ ಸಾನಿಧ್ಯ!, ಇಷ್ಟಲಿಂಗ ಪೂಜೆ ಹೆಸರಲ್ಲಿ ಬಿಜೆಪಿಯ ಧಗಲ್ಬಾಜಿ…

- Advertisement -
- Advertisement -

ವಿಶ್ವಾರಾಧ್ಯ ಸತ್ಯಂಪೇಟೆ |

ಹತಾಶಗೊಂಡಿರುವ ಸಂಘ ಪರಿವಾರ 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಮತ್ತೆ ಧರ್ಮದ ಹೆಸರಲ್ಲಿ ತನ್ನ ಕೊಳಕು ಚಟುವಟಿಕೆಗಳನ್ನು ಆರಂಭಿಸಿದೆ. ರಾಜ್ಯದಲ್ಲಿ ಇಷ್ಟಲಿಂಗ ಧಾರಣೆ ಹೆಸರಲ್ಲಿ ಬಿಜೆಪಿ ಮತ್ತು ಪಂಚ ಪೀಠಾಧಿಪತಿಗಳೆಂಬ ಪೀಡೆಗಳು ಈಗ ಕಾರ್ಯಾಚರಣೆಗೆ ಇಳಿದಿವೆ. ಬಸವತತ್ವದ ಪುಟ್ಟಾಪೂರಾ ವಿರೋಧಿಗಳಾದ ಈ ಜನ ಇವತ್ತು ಇಷ್ಟಲಿಂಗದ ಬಗ್ಗೆ ಮಾತನಾಡಲೂ ಆಯೋಗ್ಯರು. ಈ ಹುನ್ನಾರಗಳ ವಿರುದ್ಧ ಪ್ರಜಾಪ್ರಭುತ್ವವಾದಿಗಳೆಲ್ಲ ಈಗಲೇ ಧ್ವನಿ ಎತ್ತಬೇಕಿದೆ.

ರಾಜ್ಯದೆಲ್ಲೆಡೆ ಲಿಂಗಾಯತ ಧರ್ಮದ ಪ್ರಜ್ಞೆ ಮೊಳಗುತ್ತಿದೆ ಎಂದು ಸಾಮಾಜಿಕ ಕಳಕಳಿ ಉಳ್ಳ ಎಲ್ಲರೂ ಒಂದೆಡೆ ಬೀಗುತ್ತಿದ್ದರೆ ಇನ್ನೊಂದೆಡೆ ಅವರೆಲ್ಲರ ಗಮನಕ್ಕೆ ಬರದ ರೀತಿಯಲ್ಲಿ ಹಲವಾರು ಆಘಾತಕಾರಿ ಬೆಳವಣಿಗೆಗಳು ನಡೆದು ಹೋಗುತ್ತಿವೆ. ಇದೆ ತಿಂಗಳು 15 ರಿಂದ 19 ರವರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟಿ ಎಂಬ ಗ್ರಾಮದಲ್ಲಿ
ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನರ ಸಾಮೂಹಿಕ ಇಷ್ಟಲಿಂಗ ಪೂಜೆ ಎಂಬ ಹೆಸರಿನ ಧಗಲಬಾಜಿತನ ಯಾಗ ಎಗ್ಗಿಲ್ಲದೆ ನಡೆಯುತ್ತಿದೆ.

ಅಡವಿಸ್ವಾಮಿ

ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನ ಜಂಗಮರು ಎಂಬ ಪದ ಹನ್ನೆರಡನೆಯ ಶತಮಾನದಲ್ಲಿ ಬಳಕೆಯಾಗಿರುವಂತಹದ್ದು. ಅಂದು ಬಸವಣ್ಣನವರು ಕನಸಿದ ಸಮಾಜ ಕಟ್ಟಲು ಕಟಿಬದ್ಧರಾಗಿ ಲಕ್ಷದ ಮೇಲೆ ತೊಂಬತ್ತಾರು ಸಹಸ್ರ ಜನರನ್ನು ತರಬೇತಿ ನೀಡಿ ಸಿದ್ಧಗೊಳಿಸಿದ್ದರು. ಇವರೆಲ್ಲ ಭಿನ್ನ ಭಿನ್ನ ಜಾತಿ ಧರ್ಮಗಳಿಂದ ಎದ್ದು ಬಂದ ವಿವೇಕವಂತರಾಗಿದ್ದರು. ಇಷ್ಟಲಿಂಗ ಕುರುಹನ್ನು ಇಂಬಿಟ್ಟುಕೊಂಡು ಮಾಡಿದ ಕ್ರಾಂತಿ ಜಗತ್ತಿನ ಯಾವ ಪ್ರದೇಶದಲ್ಲೂ ಜರುಗಿಲ್ಲ. ಸ್ತ್ರೀ ಸಮಾನತೆ, ಮೇಲು ಕೀಳು, ಬಡವ-ಬಲ್ಲಿದ ಎಂಬ ಶಬ್ಧಗಳು ಬಸವಣ್ಣನವರ ಸಂದರ್ಭದಲ್ಲಿ ಅರ್ಥ ಕಳೆದುಕೊಂಡಿದ್ದವು. ಬಸವಣ್ಣನವರು ಪ್ರಧಾನಿಯಾಗಿದ್ದಾಗ ಅಲ್ಲಿನ ರಾಜ ಬಿಜ್ಜಳನನ್ನು ಭವಿಯೆಂದು ಕರೆದುದಲ್ಲದೆ ಆನೀ ಭವಿ ಬಿಜ್ಜಳಂಗೆ ಅಂಜುವೆನೆ ? ಎಂಬ ಸವಲನ್ನು ಹಾಕಿದ್ದರು. ಅಷ್ಟೇ ಅಲ್ಲ ಕಲ್ಯಾಣದಲ್ಲಿ ಅಂದು ಬಂದು ಸಮಾವೇಶಗೊಂಡಿದ್ದ ಯಾವ ಶರಣನು ತನ್ನ ಆತ್ಮಾಭಿಮಾನಬಿಟ್ಟು ಬದುಕಿರಲಿಲ್ಲ.

ಕಾಯದ ದಾಸೋಹ ತತ್ವಗಳ ಹಿನ್ನೆಲೆಯಲ್ಲಿ ರೂಪಗೊಂಡ ಚಳುವಳಿ ಇಷ್ಟಲಿಂಗವನ್ನು ತನ್ನ ಮೇಟಿಯಾಗಿ ಇಟ್ಟುಕೊಂಡು ನಡೆಸಿದ ಕ್ರಾಂತಿ ಅತ್ಯದ್ಭುತ. ದುರಂತವೆಂದರೆ ಆ ಚಳುವಳಿಯ ಎಲ್ಲಾ ಚರ ಜಂಗಮರನ್ನು ಹಾಗೂ ಆ ತತ್ವಗಳನ್ನು ಅವರ ಕಣ್ಣೆದುರಿಗೆ ಹಾಳು ಮಾಡಲು ಪಟ್ಟಭದ್ರ ಶಕ್ತಿಗಳು, ಮೂಲಭೂತವಾದಿಗಳು ಇನ್ನಿಲ್ಲದ ಪರಿಶ್ರಮ ಪಟ್ಟರು. ಸಹಸ್ರಾರು ಜನ ಶರಣರ ಬರ್ಬರ ಹತ್ಯೆಗಳಾದವು. ತತ್ವಗಳಿಗಾಗಿ ಹರಳಯ್ಯ- ಮಧುವಯ್ಯಗಳ ಎಳೆಹೂಟಿ ಶಿಕ್ಷೆ ಎಲ್ಲರ ಕಣ್ಣೆದುರಿಗೆ ಜರುಗಿ ಹೋಯ್ತು.

ಜನದ್ರೋಹಿ, ಧರ್ಮದ್ರೋಹಿ ಮೋದಿ

ಚಾರಿತ್ರ್ಯಿಕ ಸತ್ಯಗಳನ್ನು ಮರೆ ಮಾಚುತ್ತ ಬಂದ ಟೊಳ್ಳು ಇತಿಹಾಸ ಖೋರರು ಮುದ್ದಾಂ ಆಗಿ ಇಂಥ ಕಳವಳಕಾರಿಯಾದ ಸಂಗತಿಗಳನ್ನು ಬೇಕಂತಲೆ ಮರೆ ಮಾಚಿದರು. ಸಕಲ ಜೀವರಾಶಿಗೆ ಒಳಿತಾಗಬಲ್ಲ ತತ್ವವನ್ನು ಹೀಚುಹೀಚುಕಿ ಸಾಯಿಸಿದರು. ತದ ನಂತರ ಬಂದ ಆಂದ್ರದ ಆರಾಧ್ಯ ಜಂಗಮರು ಲಿಂಗಾಯತ ಧರ್ಮದ ತತ್ವಗಳನ್ನು ಇಂಚು ಇಂಚಾಗಿ ಹಾಳು ಮಾಡುತ್ತ ನಡೆದರು. ಅವರೆಲ್ಲರ ಪಳಿಯುಳಿಕೆಯೆ ಇಂದಿನ ಬಹುತೇಕ ಮಠಪೀಠ ಪರಂಪರೆಯ ಸ್ವಾಮೀಜಿಗಳು.

ವಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಕನಹಳ್ಳಿ ಗ್ರಾಮದ ಪಡಪೋಸಿಯೊಬ್ಬ 1994 ರಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟಿಯಲ್ಲಿ ಠಿಕಾಣಿ ಹೂಡಿದ. ತಲೆಯಲ್ಲಿ ಮಿದುಳು ಇಲ್ಲದವರ ವರ್ತಿಸುವ ಈ ವ್ಯಕ್ತಿಗೆ ಧಾರ್ಮಿಕವಾದ ಯಾವುದೆ ಆಚಾರ ವಿಚಾರ, ತತ್ವ ಸಿದ್ಧಾಂತದ ಎಳ್ಳಷ್ಟು ಪರಿಚಯವಿಲ್ಲ. ಅರೆಬರೆ ಬಟ್ಟೆಯಲ್ಲಿ ನಾಗಾಸಾಧುಗಳಂತೆ ಕಾಣುವ ಅರೆ ಹುಂಬನೊಬ್ಬನನ್ನು ಮುಂದು ಮಾಡಿ ಪುರೋಹಿತಶಾಹಿ ವ್ಯವಸ್ಥೆ ಅವನ ಮೂಲಕ ಮತ್ತೆ ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನರ ಇಷ್ಟಲಿಂಗ ಪೂಜೆ ಎಂಬ ಪ್ರಹಸನವೊಂದನ್ನು ನಡೆಸಿದೆ.

ಅಡವಿಸ್ವಾಮಿಯ ಪಟಾಲಂ

ಹೇಗೂ ಜನತೆಯಲ್ಲಿ ಬಸವಾದಿ ಶರಣರ ಬಗೆಗೆ ಇನ್ನಿಲ್ಲದ ಪ್ರೀತಿ, ಮಮತೆ, ಗೌರವ ಎಲ್ಲವೂ ಇನ್ನೂ ಹಚ್ಚ ಹಸಿರಾಗಿ ಇವೆ. 770 ಅಮರ ಗಣಂಗಳು ಅಂದು ಮಾಡಿದ ಕ್ರಾಂತಿಯ ಬಗ್ಗೆ ದಂತಕತೆಗಳಿವೆ. ಜನತೆಯ ಮನಸ್ಸಿನಲ್ಲಿರುವ ಪ್ರೀತಿ ಮಮತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಲಿಂಗಾಯತ ಧರ್ಮದ ಹೈಜಾಕ ಮಾಡುವ ಕಂಪನಿಯವರಾದ ಪಂಚಪೀಠಾಧೀಶ್ವರರೆಲ್ಲ ಇದಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಶ್ರೀಶೈಲ, ಕಾಶಿಯ ಜಗದ್ಗುರುಗಳು , ಹೊಸಪೇಟೆಯ ಡಾ. ಸಂಗನಬಸವ ಸ್ವಾಮಿ, ಧಾರವಾಡದ ಮಲ್ಲಿಕಾರ್ಜುನ ಸ್ವಾಮಿ, ನಾಲವಾರದ ತೋಟೇಂದ್ರ ಸ್ವಾಮಿ ಮುಂತಾದವರೆಲ್ಲ ಅಲ್ಲಿ ಠಳಾಯಿಸಲಿದ್ದಾರೆ. ಮುಸುರೆಗೆ ನೋಣ ಮುತ್ತಿಕೊಂಡಿಪ್ಪಂತೆ. ಕಸುವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ ಬಹುಭಾಷಾ ಪಂಡಿತರು ಇಲ್ಲಿ ನೆರೆಯಲಿದ್ದಾರೆ. ಈ ಸಂದರ್ಭದಲ್ಲಿ ನನಗೆ ಅಮ್ಮುಗೆ ರಾಯಮ್ಮನ ವಚನ ನೆನಪಾಗುತ್ತಿದೆ.

ಕಾಗೆಯ ಮರಿ ಕೋಗಿಲೆಯಾಗಬಲ್ಲುದೆ ?
ಸೀಳ ನಾಯಿ ಸಿಂಹದ ಮರಿಯಾಗಬಲ್ಲುದೆ ?
ಅರಿವು ಆಚಾರ ಹೊತ್ತುಕೊಂಡು ತಿರುಗುವ ಗಾವಿಲರ
ಮುಖವ ನೋಡಲಾಗದು ಅಮುಗೇಶ್ವರಾ

ಜನ ಸಾಮಾನ್ಯರು ಎಲ್ಲಿಯಾದರೂ ನೆರೆಯುತ್ತಾರೆಂದರೆ ಸಾಕು ಅಲ್ಲಿ ರಾಜಕಾರಣಿಗಳು ಹದ್ದುಗಳಂತೆ ಬಂದು ಎರಗುತ್ತಾರೆ. ತಮ್ಮ ಬೇಳೆ ಬೇಯಿಸಿಕೊಂಡು ಜನ ಸಾಮಾನ್ಯರಲ್ಲಿ ದೊಡ್ಡ ಧಾರ್ಮಿಕ ನಾಯಕರು ಎಂದು ಫೋಜ್ ಕೊಡುತ್ತಾರೆ. ಜನರ ಧಾರ್ಮಿಕ ನಂಬಿಕೆಗಳ ಮೇಲೆ ಸವಾರಿ ಮಾಡಿ ಎಲ್ಲರನ್ನೂ ದಿಶಾಬೂಲ್ ಗೊಳಿಸುತ್ತಾರೆ. ಹೀಗಾಗಿಯೆ ನಮ್ಮ ದೇಶದ ಪ್ರಧಾನಿ ಊರ್ಫ ಚೌಕಿದಾರ ಶ್ರೀ. ಸನ್ಮಾನ್ಯ ನರೇಂದ್ರ ಮೋದಿಯವರೂ ಸಹ ಇಲ್ಲಿ ತಮ್ಮ ದಿವ್ಯ ದರ್ಶನವನ್ನು ಜನತೆಗೆ ಮಾಡಿಸಲಿದ್ದಾರೆ. ಲಿಂಗಾಯತನಲ್ಲದ ಕರ್ಮಠ ಸಿದ್ಧಾಂತಿ ಯಡ್ಡಿಯ ಪರಿವಾರವೂ ಇಲ್ಲಿ ಜಮಾಗೊಳ್ಳಲಿದೆ. ಬಿ.ಜೆ.ಪಿ. ಪಾಳೆಯಕ್ಕೆ ಜಿಗಿದ ಮೊಟ್ಟ ಮೊದಲ ಧನದಾಹಿ ಶಿವಣ್ಣಗೌಡ ನಾಯಕರ ಮತಕ್ಷೇತ್ರದಲ್ಲಿಯೆ ಈ ವೀರಗೋಟಿ ಬರುತ್ತದೆ. ಹೀಗಾಗಿ ರಕ್ತಪಿಪಾಸುಗಳು, ಅರೆಬೆಂದ ಧಾರ್ಮಿಕ ಕಪಟ ವೇಷಧಾರಿಗಳು ಜನ ಸಾಮಾನ್ಯರನ್ನು ಮತ್ತದೆ ಶಿಲಾಯುಗಕ್ಕೆ ಕೊಂಡೊಯ್ಯುವ ಎತ್ತುಗಡೆ ಯಾವ ಎಗ್ಗಿಲ್ಲದೆ ನಡೆದಿವೆ. ಜನರೂ ಅಷ್ಟೇ : “ಜನ ಮರುಳೋ ಜಾತ್ರೆ ಮರುಳೋ…… ಮರುಳೋ ಸಿದ್ಧೇಶ್ವರ” ಎನ್ನುತ್ತಾ ಗುಂಪಿನಲ್ಲಿ ಗೋವಿಂದ ಎನ್ನುತ್ತಾ ಹೊರಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...