Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...