Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...