Homeಅಂತರಾಷ್ಟ್ರೀಯಬಾಲಾಕೋಟ್ ದಾಳಿ: ಸ್ವತಂತ್ರ ಮಾಧ್ಯಮಗಳ ಸ್ಯಾಟಲೈಟ್ ಫೋಟೊ ಹೇಳುತ್ತಿರುವ ಸತ್ಯವೇನು ಗೊತ್ತಾ...?

ಬಾಲಾಕೋಟ್ ದಾಳಿ: ಸ್ವತಂತ್ರ ಮಾಧ್ಯಮಗಳ ಸ್ಯಾಟಲೈಟ್ ಫೋಟೊ ಹೇಳುತ್ತಿರುವ ಸತ್ಯವೇನು ಗೊತ್ತಾ…?

- Advertisement -
- Advertisement -

ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಜೈಶ್-ಇ-ಮೊಹ್ಮದ್ (ಜೆಇಎಂ) ಭಯೋತ್ಪಾದನಾ ಸಂಘಟನೆ ಮೇಲೆ ನಡೆಸಿದ ಏರ್‌ಸ್ಟ್ರೈಕ್ ದಾಳಿಗೆ ಸಂಬಂಧಿಸಿದ ಮಾಹಿತಿಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ದಾಳಿಯ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತಿರುವ ರಾಯಿಟರ್ಸ್ ಸುದ್ದಿ ಸಂಸ್ಥೆಯು ಇತ್ತೀಚೆಗೆ ನಡೆಸಿದ ಸ್ಥಳೀಯ ಪ್ರತ್ಯಕ್ಷದರ್ಶಿಗಳ ಸಂದರ್ಶನದಲ್ಲಿ, ಅಬ್ದುರ್ ರಶೀದ್ ಎಂಬ ವ್ಯಾನ್ ಡ್ರೈವರ್ “ಬೆಳಗಿನ ಜಾವದಲ್ಲಿ ಇಲ್ಲಿ ಬಾಂಬ್‌ಗಳು ಸಿಡಿದದ್ದು ನಿಜ. ನೆಲ ಒಂದು ಕ್ಷಣ ಅದುರಿದಂತಾಯ್ತು. ಆದರೆ ಯಾರೊಬ್ಬರೂ ಸತ್ತಿಲ್ಲ. ಒಂದಷ್ಟು ಪೈನ್ ಮರಗಳು ಬುಡಸಮೇತ ನೆಲಕ್ಕುರುಳಿವೆ. ಜೊತೆಗೆ ಒಂದು ಕಾಗೆ ಸತ್ತು ಬಿದ್ದಿತ್ತು ಅಷ್ಟೆ. ಅದನ್ನು ಬಿಟ್ಟರೆ ಮನುಷ್ಯರ್‍ಯಾರೂ ಸತ್ತಿಲ್ಲ” ಎಂದು ಹೇಳಿದ್ದಾನೆಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಆರಂಭದಲ್ಲಿ ಭಾರತೀಯ ಮೀಡಿಯಾಗಳು ಏರ್‌ಸ್ಟ್ರೈಕ್‌ನಿಂದ 300ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸೇನಾ ಅಧಿಕಾರಿಗಳು “ಈಗಲೇ ದಾಳಿಯ ಫಲಿತಾಂಶ ಹೇಳುವುದು ಅವಧಿಪೂರ್ವ ಹೇಳಿಕೆಯಾಗುತ್ತದೆ. ಆದರೆ ನಾವು ಅಂದುಕೊಂಡದ್ದನ್ನು ಸಾಧಿಸಿದ್ದೇವೆ” ಎಂದಷ್ಟೇ ಹೇಳಿ ಸಾವಿನ ಸಂಖ್ಯೆಯನ್ನು ನಿಗೂಢವಾಗಿಸಿದರು. ಆಮೇಲೆ ‘ದಾಳಿ ಮಾಡುವುದಷ್ಟೇ ನಮ್ಮ ಕೆಲಸ, ಸಾವು-ನಷ್ಟವನ್ನು ಲೆಕ್ಕ ಹಾಕೋದು ಸರ್ಕಾರಕ್ಕೆ ಬಿಟ್ಟದ್ದು’ ಎಂಬ ಹೇಳಿಕೆಯೂ ಸೇನಾ ವಲಯದಿಂದ ಹೊರಬಂತು. ಆನಂತರ ಕೇಂದ್ರ ಐಟಿ ಖಾತೆಯ ರಾಜ್ಯಖಾತೆ ಸಚಿವ ಆಹ್ಲುವಾಲಿಯಾ “ಮೋದಿಯವರಾಗಲಿ, ಬಿಜೆಪಿ ವಕ್ತಾರರಾಗಲಿ ಎಲ್ಲಾದರು 300 ಉಗ್ರರು ಹತರಾಗಿದ್ದಾರೆ ಎಂದು ಹೇಳಿದ್ದಾರಾ? ಅಮಿತ್ ಶಾ ಹೇಳಿದ್ದಾರಾ? ಮೀಡಿಯಾಗಳು ಹಾಗೆ ಹೇಳ್ತಿವಿ ಅಷ್ಟೆ. ನಮಗೂ ಸತ್ಯ ತಿಳಿದುಕೊಳ್ಳುವ ಕಾತರ ಇದೆ. ಆದರೆ ಬಾಂಬ್ ಸರಿಯಾದ ಟಾರ್ಗೆಟ್‌ನಲ್ಲಿ ಬಿದ್ದಿದೆಯಾ ಇಲ್ಲವಾ ಗೊತ್ತಿಲ್ಲ? ಅಂತಾರಾಷ್ಟ್ರೀಯ ಮೀಡಿಯಾಗಳು ಟಾರ್ಗೆಟ್ ಮಿಸ್ ಆಗಿದೆ, ಒಂದೂ ಸಾವು ಆಗಿಲ್ಲ ಎಂದು ಹೇಳುತ್ತಿವೆ. ನಮಗೂ ಸ್ಪಷ್ಟವಾಗಿ ಗೊತ್ತಿಲ್ಲ” ಎನ್ನುವ ಮೂಲಕ ಗೊಂದಲವನ್ನು ಹೆಚ್ಚಿಸಿದರು. ಅದಾದ ನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾ “ಗುಜರಾತ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ವಾಯುದಾಳಿಯಿಂದ 250ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ” ಎಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಬಾಲಕೋಟ್ ದಾಳಿಯನ್ನು ಬಿಜೆಪಿಯ ಚುನಾವಣಾ ಪ್ರಚಾರದ ವಿಷಯವನ್ನಾಗಿ ಅಧಿಕೃತವಾಗಿ ಆ ಪಕ್ಷದ ಅಧ್ಯಕ್ಷರೇ ಒಪ್ಪಿಕೊಂಡಂತಾಗಿದೆ. ಇಂಥಾ ಒಟ್ಟಾರೆ ಗೊಂದಲದ ಹೇಳಿಕೆಗಳಿಂದಾಗಿ ನಿಜಕ್ಕೂ ಬಾಲಕೋಟ್‌ನ ದಾಳಿ ಯಶಸ್ವಿಯಾಗಿದೆಯೇ? ಉಗ್ರರು ಸತ್ತಿದ್ದಾರೆಯೇ? ಎಂಬ ಕುತೂಹಲ ಜನಸಾಮಾನ್ಯರಲ್ಲಿ ಹೆಚ್ಚಾಗುತ್ತಲೇ ಇದೆ.

ಫೆಬ್ರವರಿ 26ರಂದು ಭಾರತೀಯ ವಾಯುಸೇನೆ ದಾಳಿ ನಡೆಸಿದ ದಿನದಿಂದಲೂ ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳಾದ ಬಿಬಿಸಿ ಮತ್ತು ರಾಯಿಟರ್ಸ್ ನಂತಹ ಸಂಸ್ಥೆಗಳು ತಮ್ಮ ವರದಿಗಾರರ ಮೂಲಕ ದಾಳಿ ನಡೆದ ವಸ್ತುಸ್ಥಿತಿಯನ್ನು ಕಟ್ಟಿಕೊಡುತ್ತಲೇ ಬಂದಿವೆ. ಸ್ಥಳೀಯ ನಾಗರಿಕ ಪ್ರತ್ಯಕ್ಷದರ್ಶಿಗಳನ್ನು ಸಂದರ್ಶನ ಮಾಡಿ ಬಾಲಾಕೋಟ್‌ನ ಹಿನ್ನೆಲೆಯನ್ನು ಬಿಚ್ಚಿಟ್ಟಿವೆ. ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಅಲ್ಲಿ ಯಾವುದೇ ಭಯೋತ್ಪಾದಕ ತರಬೇತಿ ಶಿಬಿರಗಳಿಲ್ಲ. ಆದರೆ ಜೈಶ್-ಇ-ಮೊಹ್ಮದ್ ಸಂಘಟನೆ ಅಲ್ಲೊಂದು ಮದರಸಾವನ್ನು ನಡೆಸುತ್ತಿದೆ. ಅಲ್ಲಿ ಮಕ್ಕಳು ಕಲಿಯುತ್ತಿದ್ದಾರಂತೆ. ಬಹುಶಃ ಆ ಮದರಸಾ ಉಗ್ರ ಚಟುವಟಿಕೆಯ ತಾಣವಾಗಿರುವ ಸಾಧ್ಯತೆಯ ಮಾಹಿತಿ ಕಲೆಹಾಕಿದ ವಾಯುಸೇನೆ ಅದನ್ನೇ ತನ್ನ ಟಾರ್ಗೆಟ್ ಆಗಿ ದಾಳಿ ನಡೆಸಿರುವ ಸಾಧ್ಯತೆಯೂ ಇದೆ.

ಆದರೆ ವಾಯುಸೇನೆಯ ದಾಳಿಯಿಂದ ಆ ಮದರಸಾ ಕಟ್ಟಡಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ರಾಯಿಟರ್ಸ್  ಸುದ್ದಿಸಂಸ್ಥೆಯು ಏಪ್ರಿಲ್ 2018ಕ್ಕೂ ಮುಂಚೆ ತೆಗೆದಿದ್ದ ಹಾಗೂ ದಾಳಿ ನಡೆದ ನಂತರ ತೆಗೆದ ಮದರಸಾದ ಸ್ಯಾಟಲೈಟ್ ಫೋಟೊಗಳನ್ನು ಹೋಲಿಕೆ ಮಾಡಿ ಹೇಳುತ್ತಿದೆ. ಹಳೆಯ ಸ್ಯಾಟಲೈಟ್ ಚಿತ್ರದಲ್ಲಿ ಮದರಸಾ ಕಟ್ಟಡ ಯಾವ ಸ್ಥಿತಿಯಲ್ಲಿತ್ತೋ ದಾಳಿ ನಂತರದ ಸ್ಯಾಟಲೈಟ್ ಫೋಟೊದಲ್ಲೂ ಅದೇ ಸ್ಥಿತಿಯಲ್ಲಿದೆ ಎಂದು ಹೇಳಿದೆ. ಅಂದಹಾಗೆ ಈ ಸ್ಯಾಟಲೈಟ್ ಫೋಟೊಗಳನ್ನು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಅಂತರಿಕ್ಷ ನಿರ್ವಹಣಾ ಸಂಸ್ಥೆಯಾದ ‘ಪ್ಲ್ಯಾನೆಟ್ ಲ್ಯಾಬ್ಸ್ ಇಂಕ್’ ಸೆರೆಹಿಡಿದಿದೆ. ಇವು ಹೈ ರೆಸಲ್ಯೂಷನ್ ಫೋಟೊಗಳಾಗಿದ್ದು, 72 ಸೆಂ.ಮೀ ಉದ್ದದ ರಚನೆಯನ್ನೂ ಸ್ಪಷ್ಟವಾಗಿ ತೋರಿಸಬಲ್ಲವಾಗಿವೆ.

ದಾಳಿಯ ನಂತರ ತೆಗೆಯಲಾದ ಮದರಸಾದ ಸ್ಯಾಟಲೈಟ್ ಫೋಟೊದಲ್ಲಿ ವಾಯುದಾಳಿ ನಡೆದ ಸಂದರ್ಭದಲ್ಲಿ ಸಾಮಾನ್ಯವಾಗಿ ಕಾಣಬಹುದಾದ ಲಕ್ಷಣಗಳಾದ ಕಟ್ಟದ ಮೇಲ್ಛಾವಣಿಯಲ್ಲಿ ಗೋಚರ ರಂಧ್ರಗಳಾಗಲಿ, ಛಿದ್ರಗೊಂಡ ಗೋಡೆಗಳಾಗಲಿ ಅಥವಾ ಸುತ್ತಮುತ್ತ ಮರಗಳು ಮುರಿದುಬಿದ್ದ ಕುರುಹುಗಳಾಗಲಿ ಇಲ್ಲ. ಮೊದಲಿದ್ದ ಸ್ಥಿತಿಯಲ್ಲೇ ಇವೆ ಎಂದು ಹೇಳಿದೆ. ಅಲ್ಲದೇ, ಈ ಫೋಟೊಗಳನ್ನು ಭಾರತೀಯ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳಿಗೆ ರವಾನಿಸಿ, ‘ದಾಳಿಯ ಲಕ್ಷಣಗಳು ಇಲ್ಲಿ ಕಾಣಿಸುತ್ತಿಲ್ಲ, ಇದಕ್ಕೆ ನಿಮ್ಮ ಉತ್ತರವೇನು?’ ಎಂದು ಕೆಲ ದಿನಗಳಿಂದ ಪ್ರಶ್ನೆ ಕೇಳಿದಾಗ ಯಾವುದೇ ಉತ್ತರ ಬಂದಿಲ್ಲ. ಹಾಗಾಗಿ ಈಗ ಅದು ತನ್ನ ವರದಿಯನ್ನು ಪ್ರಕಟಿಸಿದೆ.

ಮಿಡ್ಲ್‌ಬರಿ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆಯಲ್ಲಿ ಪೂರ್ವ-ಏಷ್ಯಾ ನಾನ್-ಪ್ರಾಲಿಫಿರೇಷನ್ ಪ್ರಾಜೆಕ್ಟ್‌ನ ನಿರ್ದೇಶಕರಾಗಿರುವ ಜೆಫ್ರಿ ಲೀವಿಸ್ ಅವರು ರಾಯಿಟರ್ಸ್ ಸಂಸ್ಥೆಗೆ ಪ್ಲ್ಯಾನೆಟ್ ಲ್ಯಾಬ್ಸ್ ನೀಡಿರುವ ಸ್ಯಾಟಲೈಟ್ ಚಿತ್ರಗಳನ್ನು ಅಧ್ಯಯನ ಮಾಡಿ “ಈ ಹೈ ರೆಸೊಲ್ಯೂಷನ್ ಚಿತ್ರಗಳಲ್ಲಿ ಬಾಂಬ್ ದಾಳಿಯಿಂದಾದ ಯಾವ ಹಾನಿಯೂ ಕಾಣುತ್ತಿಲ್ಲ” ಎಂದಿದ್ದಾರೆ. ಶಸ್ತ್ರಾಸ್ತ್ರ ತಾಣಗಳ ಸ್ಯಾಟಲೈಟ್ ಚಿತ್ರಗಳ ಅಧ್ಯಯನದಲ್ಲಿ ಹದಿನೈದು ವರ್ಷಗಳ ಅನುಭವ ಅವರಿಗಿದೆ.

ವಾಯುದಾಳಿಯಲ್ಲಿ ಯಾವ ಶಸ್ತ್ರಗಳನ್ನು (ಬಾಂಬ್) ಬಳಸಿದೆ ಎಂದು ಸರ್ಕಾರ ಅಧಿಕೃತವಾಗಿ ಎಲ್ಲೂ ಹೇಳಿಲ್ಲವಾದರೂ 1,000 ಕೆಜಿ ತೂಕದ ಬಾಂಬ್‌ಗಳನ್ನು ಹೊತ್ತ 12 ಮಿರೇಜ್ 2000 ಜೆಟ್‌ಗಳು ದಾಳಿಯನ್ನು ನಡೆಸಿದ್ದವು ಎಂದು ಮೂಲಗಳು ತನಗೆ ತಿಳಿಸಿದ್ದಾಗಿ ಹೇಳಿಕೊಂಡಿರುವ ರಾಯಿಟರ್ಸ್ ಸುದ್ದಿಸಂಸ್ಥೆ; ಮಂಗಳವಾರ, ಮತ್ತೊಬ್ಬ ರಕ್ಷಣಾ ಅಧಿಕಾರಿ 2,000 ಎಲ್‌ಬಿ ಇಸ್ರೇಲ್ ನಿರ್ಮಿತ SPICE 2000 ಗ್ಲೈಡ್ ಬಾಂಬ್‌ಗಳನ್ನು ದಾಳಿಯಲ್ಲಿ ಬಳಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಉಲ್ಲೇಖಿಸಿದೆ.

ಈ ಎರಡರಲ್ಲಿ ಯಾವುದೇ ಗಾತ್ರದ ಬಾಂಬ್ ಬಳಸಿದ್ದರೂ ಅವು ಸದೃಢ ಕಾಂಕ್ರೀಟ್ ಕಟ್ಟಡಗಳನ್ನು ಛಿದ್ರ ಮಾಡಬಲ್ಲಷ್ಟು ಸದೃಢವಾದವು ಎಂದು ಲೀವೀಸ್ ಹಾಗೂ ಅವರ ಜೊತೆಗೂಡಿ ಸ್ಯಾಟಲೈಟ್ ಚಿತ್ರಗಳನ್ನು ಅಧ್ಯಯನ ನಡೆಸಿದ ಜೇಮ್ಸ್ ಮಾರ್ಟಿನ್ ಸೆಂಟರ್‌ನ ಸೀನಿಯರ್ ರಿಸರ್ಚ್ ಅಸೋಸಿಯೇಟ್ ಆದ ಡೇವ್ ಸ್ಕ್ಮೆರ್ಲರ್, ಅಭಿಪ್ರಾಯ ಪಟ್ಟಿದ್ದಾರೆ.

“ಒಂದುವೇಳೆ, ವಾಯುದಾಳಿ ಯಶಸ್ವಿಯಾಗಿ ತನ್ನ ಟಾರ್ಗೆಟ್ ತಲುಪಿದ್ದರೆ, ನನಗೆ ಮಾಹಿತಿ ನೀಡಲಾಗಿರುವ ಶಸ್ತ್ರಗಳ ಬಳಕೆಯಿಂದ (ಬಾಂಬ್) ಖಂಡಿತವಾಗಿ ಕಟ್ಟಡಗಳಲ್ಲಿ ಹಾನಿಯ ಲಕ್ಷಣಗಳು ಗೋಚರಿಸಲೇಬೇಕು. ಆದರೆ ಅಂತಹ ಲಕ್ಷಣಗಳ್ಯಾವುವೂ ನನಗೆ ಫೋಟೊಗಳಲ್ಲಿ ಗೋಚರಿಸಿಲ್ಲ” ಎಂದು ಲೀವೀಸ್ ತಮ್ಮ ಅಭಿಪ್ರಾಯವನ್ನು ರಾಯಿಟರ್ಸ್  ಸುದ್ದಿಸಂಸ್ಥೆ ಜೊತೆಗೆ ಹಂಚಿಕೊಂಡಿದ್ದಾರೆ.

“ಭಾರತೀಯ ದಾಳಿಯಿಂದಾಗಿ ಯಾವುದೇ ಮೂಲಭೂತ ಸೌಕರ್ಯಗಳಿಗೆ ಹಾನಿಯೂ ಆಗಿಲ್ಲ, ಯಾವೊಬ್ಬ ವ್ಯಕ್ತಿಯ ಜೀವವೂ ಹೋಗಿಲ್ಲ” ಎಂದು ಪಾಕಿಸ್ತಾನದ ಮಿಲಿಟರಿ ಪ್ರೆಸ್‌ ವಿಂಗ್ ಡೈರೆಕ್ಟರ್ ಜನರಲ್ ಆದ ಮೇಜರ್ ಜನರಲ್ ಆಸೀಫ್ ಗಫೂರ್ ತನಗೆ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿರುವ ರಾಯಿಟರ್ಸ್ ‘ಭಾರತೀಯ ವಿಮಾನಗಳ ಅತಿಕ್ರಮಣ ತಿಳಿಯುತ್ತಿದ್ದಂತೆಯೇ ನಮ್ಮ ವಾಯುಸೇನೆ ಪ್ರತಿದಾಳಿ ನಡೆಸಿದ್ದರಿಂದ ನಿರ್ಜನ ಗುಡ್ಡದ ಮೇಲೆ ಬಾಂಬ್‌ಗಳನ್ನು ಸುರಿಸಿ ಅವು ವಾಪಾಸಾಗಿವೆ. ಹಾಗಾಗಿ ಇದು ವಿಫಲ ಯತ್ನ’ಎಂದು ಪಾಕಿಸ್ತಾನ ಆರಂಭದಿಂದಲೂ ಹೇಳಿಕೊಂಡು ಬಂದಿರುವ ವಾದವನ್ನು ತನ್ನ ಈ ಸ್ಯಾಟಲೈಟ್ ಫೋಟೊ ವಿಶ್ಲೇಷಣೆ ಜೊತೆಗೆ ತುಲನೆ ಮಾಡಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ರಾಯಿಟರ್ಸ್ ಸಂಸ್ಥೆಯ ವರದಿಗಾರರು ಬಾಲಾಕೋಟ್ ತಾಲ್ಲೂಕು (ತೆಹಸಿಲ್) ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಜಿಯಾ ಉಲ್ ಹಕ್ ಹಾಗೂ ದಾಳಿ ನಡೆದ ಸ್ಥಳಕ್ಕೆ ಸನಿಹದಲ್ಲಿರುವ ಜಬಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮೊಹ್ಮದ್ ಸಾಧಿಕ್‌ರನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕಿದ್ದು, ಅವರಿಬ್ಬರೂ ಹೇಳುವ ಪ್ರಕಾರ ದಾಳಿ ನಡೆದ ನಂತರದಲ್ಲಿ ಯಾವುದೇ ಬಗೆಯ ಶಸ್ತ್ರಾಸ್ತ್ರ ದಾಳಿಯ ಗಾಯಾಳುಗಳು ದಾಖಲಾಗಿಲ್ಲ ಮತ್ತು ಸಾವನ್ನಪ್ಪಿಲ್ಲ!

ಒಟ್ಟಿನಲ್ಲಿ ಸರ್ಕಾರ ಅಧಿಕೃತವಾಗಿ ವಾಯುದಾಳಿಯ ಸಫಲತೆ ಅಥವಾ ವೈಫಲ್ಯದ ವಿವರ ನೀಡುವವರೆಗೆ, ಸಾವು-ಹಾನಿಯ ನಿಖರ ಮಾಹಿತಿಗಳನ್ನು ಹಂಚಿಕೊಳ್ಳುವವರೆಗೆ ಯಾವುದೂ ಸ್ಪಷ್ಟವಾಗುವುದಿಲ್ಲ. ಆದರೆ ಸರ್ಕಾರ ಈ ವಿಚಾರದಲ್ಲಿ ಮೌನ ಮುರಿದು ಮಾತನಾಡುತ್ತಿಲ್ಲ. ಬದಲಿಗೆ ಬಿಜೆಪಿಯ ನಾಯಕರುಗಳು (ಅಧ್ಯಕ್ಷ ಅಮಿತ್ ಶಾ ಸೇರಿದಂತೆ) ತಮ್ಮ ಪಕ್ಷದ ಚುನಾವಣಾ ಪ್ರಚಾರ ವೇದಿಕೆಗಳಿಂದ ದಿನಕ್ಕೊಂದು ಅಂಕಿಅಂಶಗಳನ್ನು ಹೇಳಿಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ನಿಜಕ್ಕೂ ಮೋದಿಯವರ ಸರ್ಕಾರಕ್ಕೆ ಸೇನಾ ಕಾರ್ಯಾಚರಣೆ ಹಾಗೂ ದೇಶದ ಭದ್ರತಾ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ದುರಾಲೋಚನೆ ಇಲ್ಲವಾಗಿದ್ದೇ ಆದಲ್ಲಿ ಆದಷ್ಟು ಬೇಗ ದಾಳಿಯ ವಿವರವನ್ನು, ಅಂಕಿಅಂಶಗಳನ್ನು ಹೊರಗೆಡವಿ ಎಲ್ಲಾ ಗೊಂದಲಗಳಿಗೆ ಅಂತ್ಯವಾಡಬೇಕು. ಹಾಗೆ ಮಾಡದಿದ್ದರೆ, ಬಿಜೆಪಿ ಇದನ್ನು ವ್ಯವಸ್ಥಿತವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂಬುದನ್ನು ಅವರೇ ಒಪ್ಪಿಕೊಂಡಂತಾಗುತ್ತೆ.

ರಾಯಿಟರ್ಸ್ ಸಂಸ್ಥೆ ಈ ಅಂಶವನ್ನು ಹೊರಹಾಕುತ್ತಿದ್ದಂತೆಯೇ ಭಾರತೀಯ ಟಿವಿ ಮಾಧ್ಯಮಗಳಲ್ಲಿ ಇನ್ನೊಂದು ಬಗೆಯ ಚರ್ಚೆ ಶುರುವಾಗಿದೆ. ಮದರಸ ಕಟ್ಟಡದ ಮೇಲ್ಛಾವಣಿಯಲ್ಲಿರುವ ರಂಧ್ರಗಳು ನಿರ್ದಿಷ್ಟವಾಗಿ ವಾಯುಸೇನೆಯ ದಾಳಿಯಿಂದಲೆ ಆದ ಕುರುಹುಗಳಾಗಿದ್ದು ದಾಳಿಯ ಶೇ.80ರಷ್ಟು ಬಾಂಬ್ ಗಳು ಗುರಿಮುಟ್ಟಿವೆ ಎಂದು ಹೇಳಲಾಗುತ್ತಿದೆ. ದಾಳಿಗೆ ಬಳಸಲಾದ ಬಾಂಬ್ ಗಳು ಗ್ಲೈಡಿಂಗ್ ಪೆನೆಟ್ರೇಟಿವ್ ಬಾಂಬ್ ಗಳಾದ್ದರಿಂದ ಅವು ಯಾವುದೇ ಘನ ಮೇಲ್ಮೇ ಸ್ಪರ್ಶವಾದ ತಕ್ಷಣ ಸ್ಫೋಟಿಸದೆ ಒಂದಷ್ಟು ಆಳಕ್ಕೆ ನುಗ್ಗಿ ನಂತರ ಸ್ಫೋಟಗೊಳ್ಳುವ ಸಾಮರ್ಥ್ಯ ಹೊಂದಿದವು ಎನ್ನುವುದು ಈ ಚರ್ಚೆಯ ಮೂಲ ಅಂಶ. ಹಾಗಾಗಿ ಬಾಂಬ್ ಗಳು ಕಟ್ಟಡವನ್ನು ಧ್ವಂಸಗೊಳಿಸದೆ ಒಳಹೊಕ್ಕು, ಸ್ಫೋಟಿಸಿ ಅಲ್ಲಿರುವ ಉಗ್ರರನ್ನು ಕೊಂದಿವೆ ಎನ್ನಲಾಗುತ್ತಿದೆ.

ಇಲ್ಲು ಸಹಾ ಒಂದು ಗೊಂದಲವಿದೆ. ಬಾಂಬುಗಳು ಪೆನೆಟ್ರೇಟಿವ್ ಅನ್ನೋದೇನೊ ನಿಜ. ಮೇಲ್ಛಾವಣಿಯಲ್ಲಿ ಸ್ಫೋಟಿಸದೆ ಆಳಕ್ಕಿಳಿದು ಸ್ಫೋಟಿಸಿರುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಆದರೆ, ಹಾಗೆ ಸ್ಫೋಟಿಸಿದ ನಂತರವಾದರು ಕಟ್ಟಡ ಛಿಧ್ರಗೊಳ್ಳಬೇಕಲ್ಲವೇ? ಯಾಕೆಂದರೆ ಮುನ್ನೂರು ಜನರನ್ನು ಕೊಲ್ಲುವ ಸ್ಫೋಟವೆಂದರೆ ಅದು ಸಣ್ಣ ಪ್ರಮಾಣದ್ದೇನಲ್ಲ. ಮನೆಯೊಳಗಿನ ಸಿಲಿಂಡರ್ ಸಿಡಿದರೇನೆ ಮಧ್ಯಮ ಗಾತ್ರದ ಮನೆಗಳು ಉರುಳಿಬಿದ್ದು ಛಿದ್ರಗೊಳ್ಳುತ್ತವೆ. ಅಂತದ್ದರಲ್ಲಿ 1000 ಕೆಜಿ ಸಾಮರ್ಥ್ಯದ ಬಾಂಬ್ ಎಷ್ಟೇ ಆಳಕ್ಕಿಳಿದು ಸ್ಫೋಟಿಸಿದರು ಮೇಲ್ಮೇ ಅಸ್ತವ್ಯಸ್ತವಾಗಲೇಬೇಕಲ್ಲ. ಕಟ್ಟಡವನ್ನು ಸುರಕ್ಷಿತವಾಗಿಟ್ಟು ಕೇವಲ ಮನುಷ್ಯರನ್ನಷ್ಟೇ ಆಯ್ದು ಕೊಲ್ಲುವಂತಹ `ಪ್ರಜ್ಞಾವಂತ’ ಬಾಂಬುಗಳಿನ್ನೂ ಅನ್ವೇಷಣೆಯಾಗದ ಕಾರಣ ಈ ಅನುಮಾನಕ್ಕೂ ತೂಕವಿದೆ. ಮೇಲ್ಛಾವಣಿಯ ರಂಧ್ರಗಳು ದಾಳಿಯ ಸಾಫಲ್ಯತೆಯನ್ನು ಸಾರುತ್ತವೆಯೇ ಇಲ್ಲವೇ? ಎನ್ನುವ ಚರ್ಚೆ ಮತ್ತಷ್ಟು ಗಂಭೀರಗೊಂಡು, ಇನ್ನಷ್ಟು ಮಾಹಿತಿಗಳು ತಿಳಿದು ಬಂದ ನಂತರ `ಪತ್ರಿಕೆ’ ಮತ್ತಷ್ಟು ಅಪ್ಡೇಟ್ ಗಳನ್ನು ಓದುಗರ ಮುಂದಿರಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...