Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...