Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....