Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...